Homeಮುಖಪುಟಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜೋಯಾ ಹಸನ್ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ನಡೆಸಬೇಕಿದ್ದ ಭಾಷಣವನ್ನು ಗುರುಗ್ರಾಮ್ ವಿಶ್ವವಿದ್ಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ ಎಂದು ದಿ ವೈರ್ ಬುಧವಾರ ವರದಿ ಮಾಡಿದೆ. “ಸಮಾನ ಹಕ್ಕುಗಳಿಗಾಗಿ ಪ್ಯಾಲೆಸ್ಟೀನಿಯನ್ ಹೋರಾಟ: ಭಾರತ ಮತ್ತು ಜಾಗತಿಕ ಪ್ರತಿಕ್ರಿಯೆ” ಎಂಬ ಶೀರ್ಷಿಕೆಯಡಿಯಲ್ಲಿ, ನವೆಂಬರ್ 12 ರಂದು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗವು ಈ ಭಾಷಣವನ್ನು ಆಯೋಜಿಸಿತ್ತು.

ನವೆಂಬರ್ 10 ರಂದು ಸಂಘಟಕರು ಜೋಯಾ ಅವರಿಗೆ ಕರೆ ಮಾಡಿದ್ದು, ಕಾರ್ಯಕ್ರಮ ರದ್ದು ಮಾಡಲಾಗಿರುವ ಬಗ್ಗೆ ತಿಳಿಸಲಾಗಿತ್ತು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ದಿನೇಶ್ ಕುಮಾರ್, ಆಹ್ವಾನ ಪತ್ರಿಕೆಯಲ್ಲಿ ತನ್ನನ್ನು “ಮುಖ್ಯ ಪೋಷಕ” ಎಂದು ವಿವರಿಸಲಾಗಿತ್ತಾದರೂ, ಈ ಕಾರ್ಯಕ್ರಮಕ್ಕೆ ಅವರ ಅನುಮೋದನೆಯನ್ನು ಕೋರಲಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಶ್ವವಿದ್ಯಾನಿಲಯದ ಶಿಕ್ಷಕರೊಬ್ಬರು ಚರ್ಚೆಯನ್ನು ಏರ್ಪಡಿಸಿದ್ದರು. ಅಂದು ನಾನು ಕ್ಯಾಂಪಸ್‌ನಲ್ಲಿ ಇರಲಿಲ್ಲವಾದ್ದರಿಂದ ಇದು ನನಗೆ ತಿಳಿದಿರಲಿಲ್ಲ. ಆದರೆ ಭಾಷಣದ ವಿಷಯವು ವಿವಾದಾಸ್ಪದವಾಗಿರುವುದರಿಂದ ನಾವು ಅದನ್ನು ನಂತರ ರದ್ದುಗೊಳಿಸಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಆಗಿರುವ ಜೋಯಾ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಪತ್ರಿಕೆಯಲ್ಲಿ ಬರೆದ ಬರಹದ ನಂತರ ಗುರುಗ್ರಾಲ್‌ ಯುನಿವರ್ಸಿಟಿಯ ರಾಜ್ಯಶಾಸ್ತ್ರ ವಿಭಾಗವು ತನ್ನನ್ನು ಸಂಪರ್ಕಿಸಿತ್ತು ಎಂದು ಹೇಳಿದ್ದಾರೆ.

“ಪ್ಯಾಲೆಸ್ತೀನ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆಯ ಕುರಿತು ಸರ್ಕಾರ ಮತ್ತು ಸರ್ಕಾರೇತರ ಮಟ್ಟದಲ್ಲಿ ಈ ಚರ್ಚೆಯನ್ನು ನಡೆಸುವುದು ಬಹಳ ಮುಖ್ಯ ಎಂದು ಅವರು ನನಗೆ ಹೇಳಿದ್ದರು. ಹಾಗಾಗಿ ನಾನು ಅದಕ್ಕೆ ತಕ್ಷಣ ಒಪ್ಪಿಕೊಂಡೆ” ಎಂದು ಜೋಯಾ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಉಪನ್ಯಾಸ ಶೀರ್ಷಿಕೆಯ ಬಗ್ಗೆ ವಿಚಾರಿಸಲು ನವೆಂಬರ್ 5 ರಂದು ಸಂಘಟಕರು ಮತ್ತೆ ನನಗೆ ಕರೆ ಮಾಡಿದ್ದರು. ಅಂದು ಅವರು ನವೆಂಬರ್ 12 ರಂದು ನಿಗದಿಯಾಗಿದ್ದ ಕಾರ್ಯಕ್ರಮದ ಸಾರಿಗೆ ಸೇರಿದಂತೆ ಭಾಷಣದ ವ್ಯವಸ್ಥೆಯನ್ನು ಖಚಿತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅದೇ ವೇಳೆ ಅವರು ಕಾರ್ಯಕ್ರಮಕ್ಕೆ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಅದಾಗ್ಯೂ, ನವೆಂಬರ್ 10 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಯೋಜಕರಿಗೆ ಆರೋಗ್ಯ ಸರಿಯಾಗಿಲ್ಲ ಎಂದು ತಿಳಿಸಲಾಯಿತು. “ಆರೋಗ್ಯದ ಸಮಸ್ಯೆಯಾಗಿದ್ದರೆ, ನೀವು ಮೊದಲೇ ಏರ್ಪಡಿಸಿದ ಈವೆಂಟ್ ಅನ್ನು ರದ್ದುಗೊಳಿಸುವುದು ಯಾಕೆ? ಅವರು ಪ್ಯಾಲೆಸ್ಟೈನ್ ಕುರಿತು ಭಾಷಣವನ್ನು ನಡೆಸಲು ಆಸಕ್ತಿ ಹೊಂದಿದ್ದರು ಎಂಬುದು ಅಧ್ಯಾಪಕರ ಹೇಳಿಕೆಯಾಗಿದೆ, ಆದರೂ ಅಂತಿಮವಾಗಿ ಅದು ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪಶ್ಚಿಮ ಏಷ್ಯಾದ ಅಧ್ಯಯನಗಳ ಕೇಂದ್ರದಲ್ಲಿ ಭಾರತ, ಇರಾನ್, ಪ್ಯಾಲೇಸ್ಟಿನಿಯನ್ ಮತ್ತು ಲೆಬನಾನಿನ ರಾಯಭಾರಿಗಳನ್ನು ಒಳಗೊಂಡ ಮೂರು ಸೆಮಿನಾರ್‌ಗಳನ್ನು ರದ್ದುಗೊಳಿಸಲಾಗಿತ್ತು.

ಅಕ್ಟೋಬರ್ 7, 2023 ರಂದು ಪ್ರಾರಂಭವಾದ ಗಾಜಾ ವಿರುದ್ಧದ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಹಿನ್ನೆಲೆಯಲ್ಲಿ ಇದು ನಡೆದಿದೆ. 2023ರ ಅಕ್ಟೋಬರ್‌ನಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳಿಂದ 16,500 ಮಕ್ಕಳು ಸೇರಿದಂತೆ 40,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...