Homeಮುಖಪುಟಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

ಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

- Advertisement -
- Advertisement -

ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮುಂಚೆ ರಾಜ್ಯದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕಿಂತ ಸುಮಾರು ಏಳು ಪಟ್ಟು ಹೆಚ್ಚು ಹಣವನ್ನು ಸಾಮಾಜಿಕ ಮಾಧ್ಯಮದ ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ (Shadow Account) ಮೂಲಕ ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರ

ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಗಳು ಇದ್ದರೆ, ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಲ್ಲಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಇವೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

“ಮಹಾರಾಷ್ಟ್ರಾಸ್ ಶ್ಯಾಡೋ ಪಾಲಿಟಿಕ್ಸ್‌: ಹೌ ಮೆಟಾ ಪರ್ಮಿಟ್ಸ್, ಪ್ರಾಫಿಟ್ಸ್ ಫ್ರಂ ಆಂಡ್ ಪ್ರಮೋಟ್ ಶ್ಯಾಡೋ ಪೊಲಿಟಿಕಲ್ ಅಡ್ವಟೈಸ್‌ಮೆಂಟ್” ಎಂಬ ಶೀರ್ಷಿಕೆಯ ವರದಿಯನ್ನು ಟೆಕ್ ಜಸ್ಟಿಸ್ ಲಾ ಪ್ರಾಜೆಕ್ಟ್, ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್, ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ದಲಿತ ಐಕ್ಯತಾ ವೇದಿಕೆ ಜಂಟಿಯಾಗಿ ಪ್ರಕಟಿಸಿದೆ.

ಮಹಾಯುತಿ ಮೈತ್ರಿಕೂಟವು ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ ಮೂಲಕ ಜಾಹೀರಾತಿಗಾಗಿ 3.32 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯು ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ 50.47 ಲಕ್ಷ ರೂಪಾಯಿಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿನ ಜಾಹೀರಾತುಗಳು ಸೇರಿದಂತೆ ಎಲ್ಲಾ ಬೆಂಬಲಿಗ ರಾಜಕೀಯ ಜಾಹೀರಾತುಗಳು ಮತದಾನದ ಅವಧಿಯಲ್ಲಿ ಚುನಾವಣಾ ಆಯೋಗದಿಂದ ಪೂರ್ವ ಪ್ರಮಾಣೀಕರಣದ ಅಗತ್ಯವಿದೆ ಎಂದು ವರದಿಯು ಉಲ್ಲೇಖಿಸಿದೆ.

ಆಡಳಿತರೂಢ ಮಹಾಯುತಿ ಮೈತ್ರಿಯು ಕನಿಷ್ಠ ಐವತ್ತಾರು ಪೇಜ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಸುತ್ತದೆ ಎಂದು ವರದಿ ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಕೇಲವ ನಾಲ್ಕು ಪೇಜ್‌ಗಳನ್ನು ನಡೆಸುತ್ತಿವೆ ಎಂದು ತಿಳಿಸಿದೆ. ಆಡಳಿತಾರೂಢ ಮಹಾಯುತಿ ಒಕ್ಕೂಟವು ತನ್ನ ಬೆಂಬಲಿಗ ಖಾತೆಗಳ ಮೂಲಕ ಸುಮಾರು 33,000 ಜಾಹೀರಾತುಗಳನ್ನು ಹಾಕಿದ್ದರೆ, ವಿಪಕ್ಷಗಳು ಮೈತ್ರಿಗೆ ಸಂಬಂಧಿಸಿದ ಪುಟಗಳಲ್ಲಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ ಕೇವಲ 1,000 ಕ್ಕಿಂತ ಕಡಿಮೆ ಜಾಹೀರಾತುಗಳನ್ನು ನೀಡಿವೆ ಎಂದು ವರದಿ ಹೇಳಿದೆ.

ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 2.61 ಕೋಟಿ ರೂ. ಜಾಹಿರಾತಿಗಾಗಿ ಖರ್ಚು ಮಾಡಿದ್ದರೆ, ಶಿಂಧೆ ನೇತೃತ್ವದ ಶಿವಸೇನೆ 56.92 ಲಕ್ಷ ರೂ. ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 35.86 ಲಕ್ಷ ರೂ.ಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ.

“ಬಿಜೆಪಿಯು ಒಂದೊಂದು ವಿಭಿನ್ನ ಥೀಮ್‌ನೊಂದಿಗೆ ಹಲವು ಬೆಂಬಲಿಗ ಖಾತೆಗಳನ್ನು ನಡೆಸುತ್ತಿದೆ” ಎಂದು ವರದಿ ಹೇಳಿದೆ.

“ಬಿಜೆಪಿಯ ಬೆಂಬಲಿಗ ಪುಟಗಳ ಮೂಲಕ ಹರಿಬಿಡಲಾದ ವಿಷಯವು ಇತರರಿಗಿಂತ ಭಿನ್ನವಾಗಿದ್ದು, ಅದು ಬಹಿರಂಗವಾಗಿ ಇಸ್ಲಾಮೋಫೋಬಿಕ್, ಭಯ ಹುಟ್ಟಿಸುವ ಮತ್ತು ದ್ವೇಷದ ಮಾತುಗಳಿಂದ ತುಂಬಿರುವ ಜಾಹಿರಾತುಗಳಿಂದ ತುಂಬಿದೆ. ಈ ಜಾಹೀರಾತುಗಳು ಮೆಟಾದ ನೀತಿಗಳನ್ನು ಉಲ್ಲಂಘಿಸುತ್ತಿವೆ ಎಂಬುದಕ್ಕೆ ಹಲವು ಪುರಾವೆಗಳ ಹೊರತಾಗಿಯೂ, ಮೆಟಾ ಅವುಗಳನ್ನು ತೆಗೆದುಹಾಕುವುದಿಲ್ಲ. ಜೊತೆಗೆ ಅಧಿಕೃತ ಜಾಹೀರಾತು ಪುಟಗಳಿಗಿಂತ ಹೆಚ್ಚಾಗಿ ಇದನ್ನು ಪ್ರಚಾರ ಮಾಡುತ್ತದೆ” ಎಂದು ವರದಿ ಹೇಳಿದೆ.

ಬಿಜೆಪಿಯ ಬೆಂಬಲಿಗ ಖಾತೆಗಳು ದ್ವೇಷಪೂರಿತ ಮತ್ತು ಕೋಮು ವಿಭಜಕ ವಿಷಯವನ್ನು ಮುಂದಿಡುತ್ತಿವೆ ಎಂದು ವರದಿ ಹೇಳಿದೆ.

“ಬಿಜೆಪಿಯ ಅಧಿಕೃತ ಪುಟವು ಪ್ರಾಥಮಿಕವಾಗಿ ಅಭಿವೃದ್ಧಿ ಮತ್ತು ಕೃಷಿಯ ಮೇಲೆ ಜಾಹೀರಾತುಗಳನ್ನು ಪ್ರಕಟಿಸುತ್ತದೆ. ಇದರಲ್ಲಿ ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪುಟಗಳು ಹೇಳಿರುವ ವಿಷಯಗಳಿಗೆ ನಿಕಟ ಹೋಲಿಕೆಯನ್ನು ಹೊಂದಿರುತ್ತದೆ. ಆದರೆ, ಅವರ ಬೆಂಬಲಿಗ ಬಿಜೆಪಿ ಖಾತೆಗಳ ಜಾಲವು ಪ್ರಧಾನವಾಗಿ ಜಾತಿ ಕೋಟಾದ ಸುತ್ತ ನಿರೂಪಣೆಗಳನ್ನು ಹುಟ್ಟುಹಾಕುತ್ತದೆ. ವಿಪಕ್ಷಗಳು ಮರಾಠರ ಹಕ್ಕುಗಳನ್ನು ಎತ್ತಿಹಿಡಿಯುತ್ತಿಲ್ಲ ಎಂದು ದಾಳಿ ಮಾಡಲು ಅದನ್ನು ಬಳಸುತ್ತದೆ.” ಎಂದು ವರದಿ ಉಲ್ಲೇಖಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಮಹಾ ವಿಕಾಸ್ ಅಘಾಡಿ ನಡೆಸುತ್ತಿರುವ ಬೆಂಬಲಿಗ ಪುಟಗಳಲ್ಲಿ ಯಾವುದೇ ದ್ವೇಷ ಭಾಷಣ ಅಥವಾ ಕೋಮುವಾದದ ವಿಷಯಗಳು ಹೊಂದಿರುವುದಿಲ್ಲ ಎಂದು ಅದು ಹೇಳಿಕೊಂಡಿದೆ.

ಬಿಜೆಪಿಯ ಬೆಂಬಲಿಗ ಪುಟಗಳು ಬಿಜೆಪಿಯ ಅಧಿಕೃತ ಪುಟಕ್ಕಿಂತ ಹತ್ತು ಪಟ್ಟು ಹೆಚ್ಚಿನ ಕಾಮೆಂಟ್‌ಗಳನ್ನು ಪಡೆಯುತ್ತವೆ ಎಂದು ವರದಿ ಹೇಳಿದೆ. “ಇಂತದ್ದೆ ರಾಜಕೀಯ ಪಕ್ಷಗಳ ಪುಟ ಎಂದು ತಿಳಿಯದಂತೆ ರಾಜಕೀಯವಾಗಿ ಸೂಕ್ಷ್ಮ ವಿಷಯವನ್ನು ಪ್ರಸಾರ ಮಾಡಲು ಇಂತಹ ಬೆಂಬಲಿಗ ಖಾತೆಗಳನ್ನು ಬಳಸಲಾಗುತ್ತದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...