Homeಮುಖಪುಟಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

ಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

- Advertisement -
- Advertisement -

ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮುಂಚೆ ರಾಜ್ಯದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕಿಂತ ಸುಮಾರು ಏಳು ಪಟ್ಟು ಹೆಚ್ಚು ಹಣವನ್ನು ಸಾಮಾಜಿಕ ಮಾಧ್ಯಮದ ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ (Shadow Account) ಮೂಲಕ ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರ

ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಗಳು ಇದ್ದರೆ, ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಲ್ಲಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಇವೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

“ಮಹಾರಾಷ್ಟ್ರಾಸ್ ಶ್ಯಾಡೋ ಪಾಲಿಟಿಕ್ಸ್‌: ಹೌ ಮೆಟಾ ಪರ್ಮಿಟ್ಸ್, ಪ್ರಾಫಿಟ್ಸ್ ಫ್ರಂ ಆಂಡ್ ಪ್ರಮೋಟ್ ಶ್ಯಾಡೋ ಪೊಲಿಟಿಕಲ್ ಅಡ್ವಟೈಸ್‌ಮೆಂಟ್” ಎಂಬ ಶೀರ್ಷಿಕೆಯ ವರದಿಯನ್ನು ಟೆಕ್ ಜಸ್ಟಿಸ್ ಲಾ ಪ್ರಾಜೆಕ್ಟ್, ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್, ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ದಲಿತ ಐಕ್ಯತಾ ವೇದಿಕೆ ಜಂಟಿಯಾಗಿ ಪ್ರಕಟಿಸಿದೆ.

ಮಹಾಯುತಿ ಮೈತ್ರಿಕೂಟವು ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ ಮೂಲಕ ಜಾಹೀರಾತಿಗಾಗಿ 3.32 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯು ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ 50.47 ಲಕ್ಷ ರೂಪಾಯಿಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿನ ಜಾಹೀರಾತುಗಳು ಸೇರಿದಂತೆ ಎಲ್ಲಾ ಬೆಂಬಲಿಗ ರಾಜಕೀಯ ಜಾಹೀರಾತುಗಳು ಮತದಾನದ ಅವಧಿಯಲ್ಲಿ ಚುನಾವಣಾ ಆಯೋಗದಿಂದ ಪೂರ್ವ ಪ್ರಮಾಣೀಕರಣದ ಅಗತ್ಯವಿದೆ ಎಂದು ವರದಿಯು ಉಲ್ಲೇಖಿಸಿದೆ.

ಆಡಳಿತರೂಢ ಮಹಾಯುತಿ ಮೈತ್ರಿಯು ಕನಿಷ್ಠ ಐವತ್ತಾರು ಪೇಜ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಸುತ್ತದೆ ಎಂದು ವರದಿ ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಕೇಲವ ನಾಲ್ಕು ಪೇಜ್‌ಗಳನ್ನು ನಡೆಸುತ್ತಿವೆ ಎಂದು ತಿಳಿಸಿದೆ. ಆಡಳಿತಾರೂಢ ಮಹಾಯುತಿ ಒಕ್ಕೂಟವು ತನ್ನ ಬೆಂಬಲಿಗ ಖಾತೆಗಳ ಮೂಲಕ ಸುಮಾರು 33,000 ಜಾಹೀರಾತುಗಳನ್ನು ಹಾಕಿದ್ದರೆ, ವಿಪಕ್ಷಗಳು ಮೈತ್ರಿಗೆ ಸಂಬಂಧಿಸಿದ ಪುಟಗಳಲ್ಲಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ ಕೇವಲ 1,000 ಕ್ಕಿಂತ ಕಡಿಮೆ ಜಾಹೀರಾತುಗಳನ್ನು ನೀಡಿವೆ ಎಂದು ವರದಿ ಹೇಳಿದೆ.

ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 2.61 ಕೋಟಿ ರೂ. ಜಾಹಿರಾತಿಗಾಗಿ ಖರ್ಚು ಮಾಡಿದ್ದರೆ, ಶಿಂಧೆ ನೇತೃತ್ವದ ಶಿವಸೇನೆ 56.92 ಲಕ್ಷ ರೂ. ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 35.86 ಲಕ್ಷ ರೂ.ಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ.

“ಬಿಜೆಪಿಯು ಒಂದೊಂದು ವಿಭಿನ್ನ ಥೀಮ್‌ನೊಂದಿಗೆ ಹಲವು ಬೆಂಬಲಿಗ ಖಾತೆಗಳನ್ನು ನಡೆಸುತ್ತಿದೆ” ಎಂದು ವರದಿ ಹೇಳಿದೆ.

“ಬಿಜೆಪಿಯ ಬೆಂಬಲಿಗ ಪುಟಗಳ ಮೂಲಕ ಹರಿಬಿಡಲಾದ ವಿಷಯವು ಇತರರಿಗಿಂತ ಭಿನ್ನವಾಗಿದ್ದು, ಅದು ಬಹಿರಂಗವಾಗಿ ಇಸ್ಲಾಮೋಫೋಬಿಕ್, ಭಯ ಹುಟ್ಟಿಸುವ ಮತ್ತು ದ್ವೇಷದ ಮಾತುಗಳಿಂದ ತುಂಬಿರುವ ಜಾಹಿರಾತುಗಳಿಂದ ತುಂಬಿದೆ. ಈ ಜಾಹೀರಾತುಗಳು ಮೆಟಾದ ನೀತಿಗಳನ್ನು ಉಲ್ಲಂಘಿಸುತ್ತಿವೆ ಎಂಬುದಕ್ಕೆ ಹಲವು ಪುರಾವೆಗಳ ಹೊರತಾಗಿಯೂ, ಮೆಟಾ ಅವುಗಳನ್ನು ತೆಗೆದುಹಾಕುವುದಿಲ್ಲ. ಜೊತೆಗೆ ಅಧಿಕೃತ ಜಾಹೀರಾತು ಪುಟಗಳಿಗಿಂತ ಹೆಚ್ಚಾಗಿ ಇದನ್ನು ಪ್ರಚಾರ ಮಾಡುತ್ತದೆ” ಎಂದು ವರದಿ ಹೇಳಿದೆ.

ಬಿಜೆಪಿಯ ಬೆಂಬಲಿಗ ಖಾತೆಗಳು ದ್ವೇಷಪೂರಿತ ಮತ್ತು ಕೋಮು ವಿಭಜಕ ವಿಷಯವನ್ನು ಮುಂದಿಡುತ್ತಿವೆ ಎಂದು ವರದಿ ಹೇಳಿದೆ.

“ಬಿಜೆಪಿಯ ಅಧಿಕೃತ ಪುಟವು ಪ್ರಾಥಮಿಕವಾಗಿ ಅಭಿವೃದ್ಧಿ ಮತ್ತು ಕೃಷಿಯ ಮೇಲೆ ಜಾಹೀರಾತುಗಳನ್ನು ಪ್ರಕಟಿಸುತ್ತದೆ. ಇದರಲ್ಲಿ ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪುಟಗಳು ಹೇಳಿರುವ ವಿಷಯಗಳಿಗೆ ನಿಕಟ ಹೋಲಿಕೆಯನ್ನು ಹೊಂದಿರುತ್ತದೆ. ಆದರೆ, ಅವರ ಬೆಂಬಲಿಗ ಬಿಜೆಪಿ ಖಾತೆಗಳ ಜಾಲವು ಪ್ರಧಾನವಾಗಿ ಜಾತಿ ಕೋಟಾದ ಸುತ್ತ ನಿರೂಪಣೆಗಳನ್ನು ಹುಟ್ಟುಹಾಕುತ್ತದೆ. ವಿಪಕ್ಷಗಳು ಮರಾಠರ ಹಕ್ಕುಗಳನ್ನು ಎತ್ತಿಹಿಡಿಯುತ್ತಿಲ್ಲ ಎಂದು ದಾಳಿ ಮಾಡಲು ಅದನ್ನು ಬಳಸುತ್ತದೆ.” ಎಂದು ವರದಿ ಉಲ್ಲೇಖಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಮಹಾ ವಿಕಾಸ್ ಅಘಾಡಿ ನಡೆಸುತ್ತಿರುವ ಬೆಂಬಲಿಗ ಪುಟಗಳಲ್ಲಿ ಯಾವುದೇ ದ್ವೇಷ ಭಾಷಣ ಅಥವಾ ಕೋಮುವಾದದ ವಿಷಯಗಳು ಹೊಂದಿರುವುದಿಲ್ಲ ಎಂದು ಅದು ಹೇಳಿಕೊಂಡಿದೆ.

ಬಿಜೆಪಿಯ ಬೆಂಬಲಿಗ ಪುಟಗಳು ಬಿಜೆಪಿಯ ಅಧಿಕೃತ ಪುಟಕ್ಕಿಂತ ಹತ್ತು ಪಟ್ಟು ಹೆಚ್ಚಿನ ಕಾಮೆಂಟ್‌ಗಳನ್ನು ಪಡೆಯುತ್ತವೆ ಎಂದು ವರದಿ ಹೇಳಿದೆ. “ಇಂತದ್ದೆ ರಾಜಕೀಯ ಪಕ್ಷಗಳ ಪುಟ ಎಂದು ತಿಳಿಯದಂತೆ ರಾಜಕೀಯವಾಗಿ ಸೂಕ್ಷ್ಮ ವಿಷಯವನ್ನು ಪ್ರಸಾರ ಮಾಡಲು ಇಂತಹ ಬೆಂಬಲಿಗ ಖಾತೆಗಳನ್ನು ಬಳಸಲಾಗುತ್ತದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...