Homeಮುಖಪುಟಸಂವಿಧಾನ ಓದದ ಮೋದಿ ಅದನ್ನು 'ಖಾಲಿ ಪುಸ್ತಕ' ಎನ್ನುತ್ತಾರೆ: ರಾಹುಲ್ ಗಾಂಧಿ

ಸಂವಿಧಾನ ಓದದ ಮೋದಿ ಅದನ್ನು ‘ಖಾಲಿ ಪುಸ್ತಕ’ ಎನ್ನುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

ನನ್ನ ಕೈಯ್ಯಲ್ಲಿ ಇರುವ ಸಂವಿಧಾನದ ಪ್ರತಿ ಪ್ರಧಾನಿ ಮೋದಿಗೆ, ಖಾಲಿಯಾಗಿರುವ ‘ಕೆಂಪು ಪುಸ್ತಕ’ವಾಗಿ ಕಾಣುವುದು ಏಕೆಂದರೆ ಅವರು ಎಂದಿಗೂ ಅದನ್ನು ಓದದ ಕಾರಣಕ್ಕೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಭಾರತದ ಆತ್ಮವನ್ನು ಒಳಗೊಂಡಿದೆ. ಅದು ರಾಷ್ಟ್ರೀಯ ಐಕಾನ್‌ಗಳಾದ ಬಿರ್ಸಾ ಮುಂಡಾ, ಡಾ ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ರೂಪಿಸಿದ ತತ್ವಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಸಂವಿಧಾನ ಓದದ

ರ‍್ಯಾಲಿಯಲ್ಲಿ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸಿದ ಅವರು, “ಪುಸ್ತಕದ ಕೆಂಪು ಬಣ್ಣದ ಬಗ್ಗೆ ಬಿಜೆಪಿಗೆ ಆಕ್ಷೇಪವಿದೆ, ಆದರೆ ಇದರ ಬಣ್ಣ ಕೆಂಪು ಅಥವಾ ನೀಲಿ ಎಂಬ ವಿಚಾರವಾಗಿ ನಮಗೆ ಯಾವುದೆ ತಕರಾರಿಲ್ಲ. ಅದನ್ನು (ಸಂವಿಧಾನ) ಸಂರಕ್ಷಿಸಲು ನಾವು ಬದ್ಧರಾಗಿದ್ದು, ಅನುಸರಿಸಲು ಸಿದ್ಧರಿದ್ದೇವೆ. ನಾನು ಹಿಡಿದಿರುವ ಈ ಸಂವಿಧಾನವು (ಪುಸ್ತಕ) ಖಾಲಿಯಾಗಿದೆ ಎಂದು ಮೋದಿ ಅವರು ಭಾವಿಸುತ್ತಾರೆ, ಏಕೆಂದರೆ ಅವರು ಅದನ್ನು ತಮ್ಮ ಜೀವಮಾನದಲ್ಲಿ ಓದಲಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆದರೆ ಮೋದಿ ಅವರೆ, ಈ ಪುಸ್ತಕವು ಖಾಲಿಯಾಗಿಲ್ಲ. ಇದು ಭಾರತದ ಆತ್ಮ ಮತ್ತು ಜ್ಞಾನವನ್ನು ಹೊಂದಿದೆ. ಇದು ಬಿರ್ಸಾ ಮುಂಡಾ, ಬುದ್ಧ, ಮಹಾತ್ಮ ಫುಲೆ, ಡಾ. ಅಂಬೇಡ್ಕರ್, ಮಹಾತ್ಮ ಗಾಂಧಿಯವರಂತಹ ರಾಷ್ಟ್ರೀಯ ಐಕಾನ್‌ಗಳು ರೂಪಿಸಿದ ತತ್ವಗಳನ್ನು ಒಳಗೊಂಡಿದೆ. ನೀವು ಪುಸ್ತಕವನ್ನು ಖಾಲಿ ಎಂದು ಕರೆದರೆ, ಈ ಎಲ್ಲಾ ಐಕಾನ್‌ಗಲನ್ನು ನೀವು ಅವಮಾನಿಸಿದಿರಿ ಎಂದರ್ಥ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದವರು ನಿರ್ಧಾರ ಕೈಗೊಳ್ಳುವಲ್ಲಿ ಪ್ರಾತಿನಿಧ್ಯವನ್ನು ಪಡೆಯಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಅವರು ಹೇಳಿದ್ದಾರೆ. ಸಂವಿಧಾನ ಓದದ

ನವೆಂಬರ್ 20 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ಪ್ರದರ್ಶಿಸಿದ “ಕೆಂಪು ಪುಸ್ತಕ” ವನ್ನು “ನಗರ ನಕ್ಸಲಿಸಂ” ಗೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ತೀವ್ರವಾಗಿ ವಿರೋಧಿಸಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಾಯಕರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಷ್ಟ್ರೀಯ ಐಕಾನ್‌ಗಳನ್ನು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಆದಿವಾಸಿಗಳ ಬದಲಿಗೆ ವನವಾಸಿ ಎಂದು ಉಲ್ಲೇಖಿಸುವ ಮೂಲಕ ಆದಿವಾಸಿಗಳನ್ನು ಅವಮಾನಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ. “ಆದಿವಾಸಿಗಳು ದೇಶದ ಮೊದಲ ಮಾಲೀಕರು. ಜಲ, ನೆಲ ಮತ್ತು ಕಾಡಿನ ಮೇಲೆ ಅವರಿಗೆ ಮೊದಲ ಹಕ್ಕಿದೆ. ಆದರೆ ಬಿಜೆಪಿಯು ಆದಿವಾಸಿಗಳು ಯಾವುದೇ ಹಕ್ಕುಗಳಿಲ್ಲದೆ ಕಾಡಿನಲ್ಲಿ ಉಳಿಯಬೇಕೆಂದು ಬಯಸುತ್ತದೆ. ಬಿರ್ಸಾ ಮುಂಡಾ ಇದಕ್ಕಾಗಿ ಹೋರಾಡಿ ತನ್ನ ಪ್ರಾಣ ತ್ಯಾಗ ಮಾಡಿದರು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಪ್ರಣಾಳಿಕೆಯನ್ನು ಎತ್ತಿ ಹಿಡಿದ ಗಾಂಧಿ, ಮಹಿಳೆಯರು, ರೈತರು ಮತ್ತು ಯುವಕರಿಗೆ ಮಾಸಿಕ 3,000 ಸಹಾಯ ಮತ್ತು ಉಚಿತ ಬಸ್ ಪ್ರಯಾಣ, 3 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮತ್ತು ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 4,000 ರೂ. ನೀಡುತ್ತದೆ ಎಂದು ಹೇಳಿದ್ದಾರೆ.

ಜಾತಿ ಗಣತಿಯ ಬೇಡಿಕೆಯನ್ನು ಪುನರುಚ್ಚರಿಸಿದ ಅವರು, ಮಹಾರಾಷ್ಟ್ರದಲ್ಲಿ ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗಗಳ ಸಂಖ್ಯೆ ಮತ್ತು ಸಂಪನ್ಮೂಲಗಳಲ್ಲಿ ಅವರ ಪಾಲನ್ನು ಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಪ್ರಸ್ತುತ ದೇಶದಲ್ಲಿ 8%ದಷ್ಟು ಬುಡಕಟ್ಟು ಸಮುದಾಯದ ಜನರು ಇದ್ದರೂ, ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಅವರ ಪಾಲು ಕೇವಲ 1% ಮಾತ್ರ ಇದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...