Homeಕರ್ನಾಟಕ2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

2 ಸಾವಿರ ಕೋಟಿ ರೂ ಖರ್ಚಾದರೂ ’ಸ್ಮಾರ್ಟ್‌’ ಆಗದ ತುಮಕೂರು.. ಏಕೆ?

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಎಂಬೋ ‘ಸಮರ್ಥ ನಗರ’ ಅಕ್ಷರಶಃ ಗಬ್ಬೆದ್ದು ಹೋಗಿದೆ. ನಗರದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ರಸ್ತೆಗಳ ಮೇಲೆ ಕಣ್ಣಾಡಿಸಿದರೆ ಸಾಕು ಇದು ಹದಗೆಟ್ಟ ಪರಿಸ್ಥಿತಿಯನ್ನು ಹೇಳುತ್ತವೆ. ಇಂಥಾ ಕೆಟ್ಟ ಪರಿಸ್ಥಿತಿ ಹಿಂದೆಲ್ಲೂ ಕಂಡಿರಲಿಲ್ಲವೆಂದು  ನಾಗರಿಕರು ಪಕ್ಷಾತೀತವಾಗಿ ಛೀಮಾರಿ ಹಾಕುತ್ತಿದ್ದಾರೆ.

ನಗರದ ಮೂಲೆ ಮೂಲೆಗಳಲ್ಲೂ ಅಗೆದ ಗುಂಡಿಗಳು, ಮೇಲೆದ್ದ ಮಣ್ಣಿನ ಗುಡ್ಡೆ, ಮಳೆ ಬಂದು ಕೊರಕಲಾದ ರಸ್ತೆಯ ಎರಡೂ ಬದಿಗಳು ಇವೆಲ್ಲವನ್ನೂ ನೋಡಿ ನರಕಯಾತನೆ ಅನುಭವಿಸುತ್ತಿದ್ದಾರೆ ಜನ. ಜನರಲ್ಲಿ ವ್ಯಕ್ತವಾಗುತ್ತಿರುವ ರೋಷಕ್ಕೆ ಮಿತಿಯೇ ಇಲ್ಲ. ಕಂಡಕಂಡಲ್ಲಿ ಜನ ಪಾಲಿಕೆ ಅಧಿಕಾರಿಗಳನ್ನು ಉಗಿಯುತ್ತಿದ್ದಾರೆ. ಸಮರ್ಥ ನಗರ ಎಂದರೆ ಇದೇನಾ ಎಂದು ಪ್ರಶ್ನಿಸುತ್ತಿದ್ದಾರೆ.

ನಗರದ ಯಾವ ಕಡೆ ಯಾವಾಗ ಗುಂಡಿ ತೋಡುತ್ತಾರೆ. ಯಾವ ಕಾರಣಕ್ಕಾಗಿ ಅಗೆಯುತ್ತಾರೆ. ಯಾವ ಉದ್ದೇಶಕ್ಕಾಗಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ತುಮಕೂರು ಮಹಾನಗರ ಪಾಲಿಕೆಯಿಂದ ಇದಕ್ಕೆ ಪರವಾನಿಗೆ ಪಡೆಯಲಾಗಿದೆಯೇ ಎಂದರೆ ಅದೂ ಕೂಡ ಇಲ್ಲವೆನ್ನುತ್ತಾರೆ ಕೆಲ ಪಾಲಿಕೆ ಸದಸ್ಯರು. ಸ್ಮಾರ್ಟ್ ಸಿಟಿ ನೆಪದಲ್ಲಿ ರಸ್ತೆಗಳನ್ನು ಅಗೆದುಬಗೆದು ಗುಂಡಿಮಾಡುತ್ತಿದ್ದಾರೆ. ಇವರನ್ನು ಕೇಳುವವರೇ ಇಲ್ಲವಾಗಿದೆ.

ಒಂದು ಕಡೆ 24*7 ಕುಡಿಯುವ ನೀರು ಒದಗಿಸಲು ಪೈಪ್ ಲೈನ್ ಅಳವಡಿಸುವ ಕಾಮಗಾರಿ, ಇದು ಮುಗಿಯಿತು ಅಂದರೆ ಜಿಯೋ ನೆಟ್‌ವರ್ಕ್‌ಗೆ ಕೇಬಲ್ ಹಾಕುವ ಕಾಮಗಾರಿ, ಇದು ಮುಗಿಯುತಪ್ಪ ಅನ್ನುವುದರೊಳಗೆ 24*7 ಗ್ಯಾಸ್ ಪೈಪ್ ಗಾಮಗಾರಿ, ಅಯ್ಯೋ ಎಲ್ಲವೂ ಪೂರ್ಣವಾಗಿದೆ ಇನ್ನೇನು ನೆಮ್ಮದಿಯಾಗಿರಬಹುದು ಅಂತೀರಾ. ಇಲ್ಲ ಮತ್ತೆ ಅಗೆತ. ಆ ಕಡೆ ಮತ್ತು ಈ ಕಡೆ ಮನೆಗಳಿಗೆ ಸಂಪರ್ಕ ಕಲ್ಪಿಸಲು ಅಗೆತ. ಹೀಗೆ ಮಾಡಿ ತುಮಕೂರೆಂಬೋ ತುಮಕೂರಿನ ರಸ್ತೆಗಳನ್ನೇ ಹಾಳುಗೆಡವಿದ್ದಾರೆ.

ಮಳೆ ಬಂದರೆ ಕೆಸರು, ಹೆಜ್ಜೆ ಇಡಲು ಆಗದಷ್ಟು ಕೆಸರು. ವಾಹನಗಳು ಸಂಚರಿಸಿದರೆ ಸಾಕು ರಸ್ತೆಯಲ್ಲಿ ನಡೆದುಹೋಗುವವರು ಜೀವ ಹಿಡಿದುಕೊಂಡೇ ಓಡಾಡಬೇಕು. ಕೆಸರು ಮೇಲೆ ರಪ್ ಅಂತ ಎಲ್ಲಿ ಸಿಡಿಯುತ್ತೋ ಅನ್ನುವ ಭಯ. ಭೂಮಿ ನೆನೆದು ಸಿಕ್ಕಿಕೊಳ್ಳುವ ಕಾರುಗಳು, ಲಾರಿಗಳು, ಇದಾದ ಮೇಲೆ ಭೂಮಿ ಒಣಗಿತು ಅನ್ನಿ. ದೂಳು, ವಾಹಗಳು ಬಂದರೆ ಸಾಕು ದೂಳು ಮೈಮೇಲೆ ಸುರಿಯುತ್ತದೆ. ಉಸಿರು ಕಟ್ಟಿದಂತಾಗುತ್ತದೆ. ಪರ್ಟಿಕ್ಯೂಲೇಟ್ ಮ್ಯಾಟರ್ ಅತಿ ಹೆಚ್ಚು ಇದ್ದು ಮಾಲಿನ್ಯ ನಗರವಾಗಿರುವ ತುಮಕೂರು ಅದ್ಹೇಗೆ ಸ್ಮಾರ್ಟ್ ಸಿಟಿ ಅನಿಸಿಕೊಳ್ಳುತ್ತೋ ಆ ಸ್ಮಾರ್ಟ್ ಸಿಟಿ ನಿರ್ಮಾತೃಗಳಿಗೇ ಗೊತ್ತು. ಆದರೆ ಜನರಂತು ಬಾಯಿಗೆ ಬಂದಂತೆ ಕ್ಯಾಕರಿಸುತ್ತಿದ್ದಾರೆ.

ರಸ್ತೆಯ ಎರಡು ಬದಿಯನ್ನು ಅಗೆದವರು ಅದರ ಮೇಲೆ ಟಾರ್ ಮುಖವನ್ನೂ ತೋರಿಸಿ ತೇಪೆ ಹಚ್ಚುವ ಕೆಲಸವನ್ನೂ ಮಾಡಿಲ್ಲ. ಹೀಗಾಗಿ ತುಮಕೂರು ಸ್ಮಾರ್ಟ್ ಸಿಟಿ ಜನರಿಂದ ಗೇಲಿಗೆ ಒಳಗಾಗಿದೆ. ಆದರೆ ನಿತ್ಯವೂ ಪೊಲೀಸರು, ಟ್ರಾಫಿಕ್ ಪೊಲೀಸರು ವಾಹನಗಳನ್ನು ಹಿಡಿದು, ಹೆಲ್ಮೆಟ್ ಧರಿಸಿಲ್ಲ. ಡಿ.ಎಲ್. ಹೊಂದಿಲ್ಲ, ಹೊಗೆ ಪರೀಕ್ಷೆ ನಡೆಸಿಲ್ಲ ಹೀಗೆ ಹಲವು ರೀತಿಯಲ್ಲಿ ಜನರಿಂದ ವಸೂಲಿ ಮಾಡುತ್ತಲೇ ಇದ್ದಾರೆ. ಏನ್ ರಸ್ತೆಗಳು ಹೀಗಿವೆಯಲ್ಲಾ ಎಂದರೆ ಅದರ ಬಗ್ಗೆ ನಮ್ಮನ್ನು ಕೇಳಬೇಡಿ ಅನ್ನುತ್ತಾರೆ. ರಸ್ತೆಗಳ ಉತ್ತಮವಾಗಿರಬೇಕು. ಆಗ ದಂಡ ವಿಧಿಸಿದರೂ ಕಟ್ಟಬಹುದು. ಆದರೆ ನಮ್ಮ ನಗರದ ಯಾವುದೇ ರಸ್ತೆಗಳು ಚನ್ನಾಗಿವೆ ಎಂದು ಹೇಳವುದಕ್ಕೇ ಆಗುವುದಿಲ್ಲ ಎನ್ನುತ್ತಾರೆ ಬೈಕ್ ಸವಾರರು.

ಸಮರ್ಥ ನಗರದ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತಿರತ್ತಿರ 2 ಸಾವಿರ ಕೋಟಿ ರೂಪಾಯಿ ನಗರ ಪಾಲಿಕೆಗೆ ಬಂದಿದೆ. ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು, ಪಾರ್ಕ್ ಗಳ ಅಭಿವೃದ್ದಿ, ಬಸ್ ನಿಲ್ದಾಣಗಳ ನಿರ್ಮಾಣ ಹೀಗೆ ಹಲವು ಕಾಮಗಾರಿಗಳನ್ನು ಮಾಡುವ ಮೂಲಕ ಕೋಟಿ ಕೋಟಿ ಲೂಟಿ ಮಾಡುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿರತರಾಗಿದ್ದಾರೆ. ಸ್ಮಾರ್ಟ್ ಸಿಟಿ ಅಂದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಯ್ಯೋ ಈ ಕಾಮಗಾರಿಗಳು ಎಷ್ಟು ಬೇಗ ಮುಗಿಯುತ್ತೋ ಅಂತ ಕಾಯುತ್ತಿದ್ದಾರೆ. ಆದರೆ ಮಬ್ಬು ಭಕ್ತರು, ಸ್ಮಾರ್ಟಿ ಸಮರ್ಥಕರು ಅಭಿವೃದ್ಧಿ ಕೆಲಸ ನಡೆಯುತ್ತಿದೆ ಅಂದರೆ ಸಹಿಕೊಳ್ಳಬೇಕು ಎಂದು ಮಂಡುವಾದ ಮಾಡುತ್ತಿದ್ದಾರೆ. ಆದರೆ ಜನ ಮಾತ್ರ ಕಾಮಗಾರಿಗಳು ಮುಗಿಯುತ್ತೋ ಇಲ್ಲವೋ? ಎಂಬ ಗೊಂದಲದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...