Homeಮುಖಪುಟ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಕುಕಿ ಉಗ್ರಗಾಮಿಗಳ “ಹತ್ಯೆ” ಘಟನೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ (ಸಿಆರ್‌ಪಿಎಫ್‌) ಪಡೆ “ಪಕ್ಷಪಾತವನ್ನು ಪ್ರದರ್ಶಿಸಿದೆ” ಎಂದು ಮಿಜೋರಾಂನ ವಿರೋಧ ಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ ಬುಧವಾರ ಆರೋಪಿಸಿದೆ. ಸಿಆರ್‌ಪಿಎಫ್‌ ಪಕ್ಷಪಾತ

ಶಂಕಿತ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಮೇಲೆ ದಾಳಿ ನಡೆಸಿದ ನಂತರ ಆರಂಭವಾದ ಗುಂಡಿನ ಚಕಮಕಿಯಲ್ಲಿ ಸೋಮವಾರ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕುಕಿ-ಜೊ ಸಂಘಟನೆಗಳು ಇದನ್ನು ನಿರಾಕರಿಸಿದ್ದು, ಮೃತಪಟ್ಟವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಭದ್ರತಾಪಡೆಗಳು ಹೊಂಚು ಹಾಕಿ ಕೊಂದಿದೆ ಎಂದು ಆರೋಪಿಸಿದ್ದಾರೆ. ಸಿಆರ್‌ಪಿಎಫ್‌ ಪಕ್ಷಪಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಹೇಳಿಕೆ ನೀಡಿರುವ ಮಿಜೋರಾಂನ ವಿಪಕ್ಷ ಮಿಜೊ ನ್ಯಾಷನಲ್ ಫ್ರಂಟ್, “ನಾವು CRPFನ ಈ ಕ್ರಮಗಳನ್ನು ಖಂಡಿಸುತ್ತೇವೆ. ಮಿಜೋ ಬುಡಕಟ್ಟುಗಳ ವಿರುದ್ಧ ಅವರ ತಾರತಮ್ಯದ ನಡವಳಿಕೆಯು ನಮ್ಮನ್ನು ತೀವ್ರ ಆತಂಕಕ್ಕೀಡು ಮಾಡಿದೆ” ಹೇಳಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಆಪಾದಿತ ಕ್ರಮಗಳು, ಮಣಿಪುರದಲ್ಲಿ ದುರ್ಬಲವಾದ ಪರಿಸ್ಥಿತಿಯನ್ನು ಉಲ್ಬಣಗೊಳಿಸುವ ಮತ್ತು ಶಾಂತಿಪಾಲಕರಾಗಿ CRPF ನ ವಿಶ್ವಾಸಾರ್ಹತೆಯನ್ನು ದುರ್ಬಲಗೊಳಿಸುವ ಅಪಾಯವನ್ನುಂಟುಮಾಡುತ್ತದೆ ಎಂದು ವಿರೋಧ ಪಕ್ಷವು ಹೇಳಿದೆ.

ಕುಕಿಗಳು ಮಿಜೋಸ್‌ನೊಂದಿಗೆ ನಿಕಟ ಜನಾಂಗೀಯ ಸಂಬಂಧಗಳನ್ನು ಹೊಂದಿದ್ದು, ತಮ್ಮನ್ನು “ಝೋ ಕುಟುಂಬದ” ಭಾಗವೆಂದು ಪರಿಗಣಿಸುತ್ತಾರೆ. ಮಿಜೋರಾಂನಲ್ಲಿ ಕುಕಿ ಜೋ ಸಮುದಾಯವು ಏಕೈಕ-ದೊಡ್ಡ ಜನಾಂಗೀಯ ಗುಂಪಾಗಿದೆ. ಡಿಸೆಂಬರ್‌ನಲ್ಲಿ ಮಿಜೋರಾಮ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಿಜೋ ನ್ಯಾಷನಲ್ ಫ್ರಂಟ್ ತನ್ನನ್ನು ಝೋ ನ್ಯಾಶನಲಿಸ್ಟ್ ಪಕ್ಷ ಎಂದು ಬಿಂಬಿಸಿಕೊಂಡಿದೆ.

ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲು ಐಜ್ವಾಲ್‌ನಲ್ಲಿ ಸಮಾರಂಭವನ್ನು ಆಯೋಜಿಸಿದ್ದಕ್ಕಾಗಿ ಮಿಜೋ ಸಂಘಟನೆಗಳ ಗುಂಪಿನ ಉನ್ನತ ಸಂಘವಾದ ಯಂಗ್ ಮಿಜೋ ಅಸೋಸಿಯೇಷನ್ ​​ಅನ್ನು ಪಕ್ಷವು ಶ್ಲಾಘಿಸಿದೆ. ಈ ಸಭೆಯಲ್ಲಿ ಸಂಘವು ಹತ್ಯೆಯನ್ನು ಖಂಡಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ತನಿಖೆಗೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿತು. “10 ಮಂದಿಯ ಕುಟುಂಬಗಳಿಗೆ ಆರ್ಥಿಕವಾಗಿ ಪರಿಹಾರ ನೀಡಬೇಕು ಮತ್ತು ಮಣಿಪುರದಲ್ಲಿನ ಅಶಾಂತಿಯನ್ನು ಆದಷ್ಟು ಬೇಗ ಪರಿಹರಿಸಬೇಕು” ಎಂದು ಸಂಘವು ಒತ್ತಾಯಿಸಿದೆ.

2023ರ ಮೇ ತಿಂಗಳಲ್ಲಿ, ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಹಳ್ಳಿಗಳನ್ನು ಕಾಪಾಡುವ ಶಸ್ತ್ರಸಜ್ಜಿತ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ. ಹಿಂಸಾಚಾರ ಪ್ರಾರಂಭವಾದಾಗಿನಿಂದ ಕನಿಷ್ಠ 237 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...