Homeಮುಖಪುಟಮಣಿಪುರ | ಜಿರಿಬಾಮ್ ಸೇರಿದಂತೆ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನಃ AFSPA ಹೇರಿದ ಕೇಂದ್ರ...

ಮಣಿಪುರ | ಜಿರಿಬಾಮ್ ಸೇರಿದಂತೆ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನಃ AFSPA ಹೇರಿದ ಕೇಂದ್ರ ಸರ್ಕಾರ

- Advertisement -
- Advertisement -

ಮಣಿಪುರದ ಕಣಿವೆ ಪ್ರದೇಶಗಳ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯನ್ನು (AFSPA) ಮರು ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಗುರುವಾರ ಆದೇಶ ಹೊರಡಿಸಿದೆ. ಸುಮಾರು 19 ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದ ಹಿನ್ನಲೆ ಈ ಪ್ರದೇಶಗಳನ್ನು ಕಾಯಿದೆ ಜಾರಿಯಾಗುವಂತೆ ‘ಅಡಚಣೆಯ ಪ್ರದೇಶಗಳು’ (Disturbed Areas)’ ಎಂದು ಘೋಷಿಸಲಾಗಿದೆ. ಮಣಿಪುರ

ರಾಜ್ಯದ ಮೈತೇಯಿ ಪ್ರಾಬಲ್ಯವಿರುವ ಕಣಿವೆ ಪ್ರದೇಶಗಳಲ್ಲಿನ 19 ಪೊಲೀಸ್ ಠಾಣೆಗಳನ್ನು ಹೊರತುಪಡಿಸಿ ಮಣಿಪುರದಾದ್ಯಂತ ಜಾರಿಯಲ್ಲಿದ್ದ ‘ಡಿಸ್ಟರ್ಬ್ಡ್ ಏರಿಯಾಸ್’ ಸ್ಥಿತಿಯನ್ನು ಈಗ ವಿಸ್ತರಿಸಲಾಗಿದೆ. ಇಂಫಾಲ್ ಪಶ್ಚಿಮದ ಸೆಕ್ಮಾಯಿ ಮತ್ತು ಲಮ್ಸಾಂಗ್ ಪೊಲೀಸ್ ಠಾಣೆಗಳು, ಇಂಫಾಲ್ ಪೂರ್ವದ ಲಾಮ್ಲೈ, ಬಿಷ್ಣುಪುರದಲ್ಲಿ ಮೊಯಿರಾಂಗ್, ಲೀಮಾಖೋಂಗ್ ಕಾಂಗ್ಪೊಕ್ಪಿ, ಮತ್ತು ಜಿರಿಬಾಮ್ ಪೊಲೀಸ್ ಠಾಣೆ ಈ ವಿಸ್ತರಣೆಯಲ್ಲಿ ಸೇರಿದೆ ಎಂದು ಅಧಿಸೂಚನೆಯಲ್ಲಿ ಗೃಹ ಸಚಿವಾಲಯ ಹೇಳಿದೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಕಾನೂನು ಅಥವಾ ಸುವ್ಯವಸ್ಥೆಗೆ ವಿರುದ್ಧವಾಗಿ ವರ್ತಿಸುವ ಯಾವುದೇ ವ್ಯಕ್ತಿಯ ವಿರುದ್ಧ ಗುಂಡು ಹಾರಿಸಲು ಅಥವಾ ಬಲವನ್ನು ಪ್ರಯೋಗಿಸಲು ಸಶಸ್ತ್ರ ಪಡೆಗಳ ಅಧಿಕಾರಿಗೆ AFSPA ಕಾಯಿದೆಯು ಅಧಿಕಾರ ನೀಡುತ್ತದೆ. ಗುಂಡು ಹಾರಿಸುವಾಗ ವ್ಯಕ್ತಿಯು ಸಾವಿಗೀಡಾದರೂ ಕೂಡಾ ಕಾಯಿದೆಯು ಗುಂಡು ಹಾರಿಸಲು ಪಡೆಗಳಿಗೆ ಅಧಿಕಾರ ನೀಡುತ್ತದೆ. ಅದೇ ವೇಳೆ ಕಾಯಿದೆಯ ಅಡಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಯನ್ನು ಕಾನೂನು ಕ್ರಮದಿಂದ ಕಾಯಿದೆಯು ರಕ್ಷಿಸುತ್ತದೆ.

ಭದ್ರತಾ ಪರಿಸ್ಥಿತಿಯನ್ನು ಕಾಪಾಡಿಕೊಳ್ಳಲು ಈ ಆರು ಪ್ರದೇಶಗಳಲ್ಲಿ ‘ಡಿಸ್ಟರ್ಬ್ಡ್ ಏರಿಯಾಸ್’ ಸ್ಥಾನಮಾನವನ್ನು ಹೇರಲಾಗುತ್ತಿದೆ. ಜೊತೆಗೆ ಈ ಪ್ರದೇಶಗಳಲ್ಲಿ ದಂಗೆಕೋರ ಗುಂಪುಗಳ ಚಟುವಟಿಕೆಗಳನ್ನು ನಿಗ್ರಹಿಸಲು ಭದ್ರತಾ ಪಡೆಗಳ ಸುಸಂಘಟಿತ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಇದನ್ನು ಖಾತರಿಪಡಿಸಲಾಗಿದೆ ಎಂದು ಅದು ಹೇಳಿದೆ.

1980 ರಿಂದ ಮಣಿಪುರವು AFSPA ಅಡಿಯಲ್ಲಿ ‘ಡಿಸ್ಟರ್ಬ್ಡ್ ಏರಿಯಾ’ ಸ್ಥಾನಮಾನವನ್ನು ಹೊಂದಿದೆ. 2004 ರಲ್ಲಿ 32 ವರ್ಷದ ತಂಗ್ಜಮ್ ಮನೋರಮಾ ಹತ್ಯೆಯ ನಂತರ ಇಂಫಾಲ್ನ ಕೆಲವು ಭಾಗಗಳಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು. 2022 ರಿಂದ, ‘ಡಿಸ್ಟರ್ಬ್ಡ್ ಏರಿಯಾ’ ಎಂದು ಸೂಚಿಸಲಾದ ಪ್ರದೇಶಗಳನ್ನು ಹೆಚ್ಚಿಸಲಾಗಿದ್ದು, ಏಪ್ರಿಲ್ 1, 2023 ರಿಂದ ಜಾರಿಗೆ ತರಲಾಗಿತ್ತು. ಆದರೆ ಮೈತೇಯಿ ಪ್ರಾಬಲ್ಯದ ಕಣಿವೆಯ 19 ಪೊಲೀಸ್ ಠಾಣೆಗಳನ್ನು ಈ ವ್ಯಾಪ್ತಿಯಿಂದ ಹಿಂತೆಗೆದುಕೊಳ್ಳಲಾಗಿತ್ತು.

ಇದನ್ನೂ ಓದಿ: ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...