Homeಮುಖಪುಟಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಬುಲ್ಡೋಜರ್ ಅ’ನ್ಯಾಯ’ದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ನಂತರ, ಉತ್ತರ ಪ್ರದೇಶದಾದ್ಯಂತ ಈ ಕ್ರಮಗಳಿಂದ ಸಂತ್ರಸ್ತರಾದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ತಮಗೆ ಆಗಿರುವ ನಷ್ಟಕ್ಕೆ ಪರಿಹಾರವನ್ನು ಪಡೆಯಲು ಕಾನೂನು ಕ್ರಮವನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ತನ್ನ ಬುಲ್ಡೋಜರ್ ಕ್ರಮದ ಬಗ್ಗೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಶ್ಲಾಘಿಸಿದೆ. ಸುಪ್ರೀಂಕೋರ್ಟ್ ತೀರ್ಪು

ಅದಾಗ್ಯೂ, ಸರಿಯಾದ ಪ್ರಕ್ರಿಯೆಯ ನಂತರ ಮತ್ತು ಅತಿಕ್ರಮಿತ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಮೇಲೆ ನೆಲಸಮವನ್ನು ನಡೆಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ಬುಲ್ಡೋಜರ್ ನ್ಯಾಯ”ವನ್ನು ಕಾನೂನುಬಾಹಿರ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಬುಧವಾರ ದೇಶದಾದ್ಯಂತ ಮಾರ್ಗಸೂಚಿಗಳನ್ನು ನೀಡಿತ್ತು. ಪೂರ್ವ ಶೋಕಾಸ್ ಸೂಚನೆ ಇಲ್ಲದೆ ಯಾವುದೇ ಆಸ್ತಿಯನ್ನು ಕೆಡವಬಾರದು ಮತ್ತು ಸಂತ್ರಸ್ತರಿಗೆ ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರ್ಟ್‌ ಹೇಳಿತ್ತು. ಸುಪ್ರೀಂಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಯಾಗ್‌ರಾಜ್‌ನಲ್ಲಿ ಪಂಪ್ ಸೆಟ್ ವ್ಯಾಪಾರ ನಡೆಸುತ್ತಿರುವ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಜೂನ್ 12, 2022 ರಂದು ಬುಲ್ಡೋಜರ್‌ನಿಂದ ಕೆಡವಲಾಯಿತು. ಪೊಲೀಸರು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಅವರ ವಿರುದ್ಧ ಐದು ಪ್ರಕರಣಗಳು ದಾಖಲಾಗಿವೆ ಮತ್ತು ಅಟಾಲಾ ಪ್ರದೇಶದಲ್ಲಿ ನಡೆದ ಕಲ್ಲು ತೂರಾಟದ ಘಟನೆಯಲ್ಲಿ ಅವರು ಪ್ರಮುಖ ಆರೋಪಿಯಾಗಿದ್ದಾರೆ ಎಂದು ಹೇಳಿದ್ದರು.

“ನಿರಂಕುಶ ರೀತಿಯಲ್ಲಿ ಮನೆಗಳನ್ನು ಕೆಡವಬಾರದು … ನನ್ನ ಎರಡು ಅಂತಸ್ತಿನ ಮನೆಯನ್ನು ಕೆಡವಿದಾಗ, ನನ್ನ ಹೆಂಡತಿ ಮತ್ತು ಮಗಳನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು” ಎಂದು ಮೊಹಮ್ಮದ್ ಹೇಳಿದ್ದು, ಸುಪ್ರೀಂಕೋರ್ಟ್‌ನ ತೀರ್ಪನ್ನು ಅವರು ಶ್ಲಾಘಿಸಿದ್ದಾರೆ. ಸ್ಥಳೀಯ ಆಡಳಿತವು ರಾತ್ರೋರಾತ್ರಿ ಈ ಕ್ರಮ ಕೈಗೊಂಡಿದ್ದು, ಯಾವುದೇ ಸೂಚನೆಯಿಲ್ಲದೆ ತನ್ನ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನೋಟಿಸ್ ಕಳುಹಿಸಿದ್ದೇವೆ ಎಂದು ಹೇಳಿರುವ ಸರ್ಕಾರದ ಪ್ರತಿಪಾದನೆ ಸಂಪೂರ್ಣ ಸುಳ್ಳಾಗಿದ್ದು… ಅವರು ಯಾವುದೇ ನೋಟಿಸ್ ಕಳುಹಿಸಿಲ್ಲ” ಎಂದು ಅವರು ಹೇಳಿದ್ದಾರೆ. ಧ್ವಂಸಗೊಂಡ ನಂತರ ನನ್ನ ಕುಟುಂಬವು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದು, ನಮಗೆ ಯಾರೂ ಸಹಾಯ ಮಾಡಲು ಮುಂದೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ

ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಜಿತ್ ಸಿಂಗ್, ಪ್ರಾಧಿಕಾರವು ಅನುಮೋದನೆ ಪಡೆಯದ ಮನೆ ಅಥವಾ ಅಂಗಡಿಗಳ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳುತ್ತದೆ. ಕೆಡವುವ ಮುನ್ನವೇ ನೋಟಿಸ್ ಜಾರಿ ಮಾಡಿ ಆ ವ್ಯಕ್ತಿಗೆ ತನ್ನ ಪರ ವಾದ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬರೇಲಿಯಲ್ಲಿ ಜುಲೈ 22 ರಂದು ಶಾಹಿ ಪ್ರದೇಶದ ಗೌಸ್‌ಗಂಜ್ ಗ್ರಾಮದಲ್ಲಿ 16 ಜನರ ಮನೆಗಳನ್ನು ನೆಲಸಮಗೊಳಿಸಲಾಗಿತ್ತು. ಇದರಲ್ಲಿ ತಝಿಯಾ ಮೆರವಣಿಗೆಯಲ್ಲಿ ಒಬ್ಬ ವ್ಯಕ್ತಿಯನ್ನು ಕೊಂದ ಘರ್ಷಣೆಯಲ್ಲಿ ಆರೋಪಿಗಳೆಂದು ಹೆಸರಿಸಲಾದ ಮನೆಗಳು ಸೇರಿದ್ದವು. ಸುಪ್ರೀಂ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಗೌಸ್‌ಗಂಜ್‌ನ ರಾಸಿದಾನ್, ನಫೀಸಾ ಮತ್ತು ಸೈರಾ ಖಾತೂನ್ ಅವರ ಮನೆಗಳನ್ನು ನೆಲಸಮಗೊಳಿಸಲಾಗಿದ್ದು, ಪರಿಹಾರಕ್ಕಾಗಿ ನ್ಯಾಯಾಲಯವನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...