Homeಮುಖಪುಟಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

- Advertisement -
- Advertisement -

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ವಯೋಮಿತಿಯನ್ನು 21 ವರ್ಷಕ್ಕೆ ಇಳಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಗುರುವಾರ ಕರೆ ನೀಡಿದ್ದಾರೆ. “ಇದರಿಂದ ಯುವಕರು ಸಕ್ರಿಯವಾಗಿ ರಾಜಕೀಯಕ್ಕೆ ಸೇರುತ್ತಾರೆ, ತಮ್ಮ ಪೂರ್ಣ ಸಾಮರ್ಥ್ಯದಿಂದ ಜನರಿಗೆ ಸೇವೆ ಸಲ್ಲಿಸುತ್ತಾರೆ” ಎಂದು ಹೇಳಿದರು.

ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಆಯೋಜಿಸಿದ್ದ ಮಕ್ಕಳ ಅಣಕು ಅಸೆಂಬ್ಲಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ ವಯೋಮಿತಿಯನ್ನು ಇಳಿಸುವ ನಿರ್ಣಯವನ್ನು ಅಣಕು ವಿಧಾನಸಭೆ ಅಂಗೀಕರಿಸಿದ್ದಕ್ಕಾಗಿ ರೇವಂತ್ ರೆಡ್ಡಿ ಶ್ಲಾಘಿಸಿದರು. ನಿರ್ಣಯವನ್ನು ರಾಷ್ಟ್ರಪತಿ ಮತ್ತು ಪ್ರಧಾನಿಗೆ ಕಳುಹಿಸುವಂತೆ ಸೂಚಿಸಿದರು.

ಮತದಾನದ ವಯೋಮಿತಿಯನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲಾಗಿದೆ. ಆದರೆ, ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿಯನ್ನು ಇಳಿಸಿಲ್ಲ. 21 ವರ್ಷ ವಯಸ್ಸಿನ ಯುವಕರು ಸಹ ಚುನಾವಣೆಗೆ ಸ್ಪರ್ಧಿಸುವಂತೆ ಈ ಕಾನೂನಿಗೆ ತಿದ್ದುಪಡಿ ತರಬೇಕು ಎಂದು ಅವರು ಹೇಳಿದರು.

ಈ ಕ್ರಮವು ಶಾಸಕಾಂಗದಲ್ಲಿ ಯುವಕರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

“21 ವರ್ಷ ವಯಸ್ಸಿನವರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. 21 ನೇ ವಯಸ್ಸಿನಲ್ಲಿ ಯುವಕರು ಶಾಸಕರಾಗಿ ದಕ್ಷತೆಯಿಂದ ಕೆಲಸ ಮಾಡಬಹುದು ಎಂದು ನಾನು ಬಲವಾಗಿ ನಂಬುತ್ತೇನೆ” ಎಂದು ಅವರು ಹೇಳಿದರು.

ಅಣಕು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜಕ್ಕೆ ಇಂತಹ ಉತ್ಪಾದಕ ಸಭೆಗಳು ಅಗತ್ಯ. ವಿಧಾನಸಭೆಯಲ್ಲಿ ಸದಸ್ಯರು ಎತ್ತುವ ಪ್ರಶ್ನೆಗಳು ಮತ್ತು ಸರ್ಕಾರ ನೀಡುವ ಉತ್ತರಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

“ಸರ್ಕಾರವನ್ನು ಪ್ರಶ್ನಿಸುವ ಹಾಗೂ ಬಯಲಿಗೆಳೆಯುವ ಜವಾಬ್ದಾರಿ ವಿರೋಧ ಪಕ್ಷಗಳ ಮೇಲಿದೆ. ಸಭಾ ನಾಯಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಇಬ್ಬರಿಗೂ ಸಮಾನ ಅವಕಾಶ ನೀಡಲಾಗುತ್ತಿದೆ, ಸದನವನ್ನು ಸಮರ್ಥವಾಗಿ ನಡೆಸುವ ಜವಾಬ್ದಾರಿ ಸ್ಪೀಕರ್ ಮೇಲಿದೆ” ಎಂದರು.

ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದರೂ ಸರ್ಕಾರ ಸಮನ್ವಯತೆಯಿಂದ ಸದನ ನಡೆಸಬೇಕು ಎಂದು ರೇವಂತ್ ರೆಡ್ಡಿ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೆಲವು ಶಕ್ತಿಗಳು ಕಲಾಪವನ್ನು ಸ್ಥಗಿತಗೊಳಿಸಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದರು.

ಮಾಜಿ ಪ್ರಧಾನಿಯವರಿಗೆ ನಮನ ಸಲ್ಲಿಸಿದ ಅವರು, ಜವಾಹರಲಾಲ್ ನೆಹರು ಅವರು ಶಿಕ್ಷಣ ಮತ್ತು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಯನ್ನು ತಂದರು. ದೇಶದಲ್ಲಿ ಕಡ್ಡಾಯ ಶಿಕ್ಷಣ ಜಾರಿಗೆ ತರಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಶ್ರಮಿಸಿದ್ದಾರೆ ಎಂದರು. ಮತದಾನದ ಹಕ್ಕನ್ನು 18ಕ್ಕೆ ಇಳಿಸಿದ ಕೀರ್ತಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಉಲ್ಲೇಖಿಸಿದರು.

ಇದನ್ನೂ ಓದಿ;ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿ ಲೈಂಗಿಕ ಕ್ರಿಯೆಯೂ ಅತ್ಯಾಚಾರ..’; ವ್ಯಕ್ತಿಯೋರ್ವನ 10 ವರ್ಷ ಜೈಲು ಶಿಕ್ಷೆ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...