Homeಮುಖಪುಟ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : 'ಮಹಾ' ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

- Advertisement -
- Advertisement -

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಸಮಗ್ರತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.₹53 ಕೋಟಿಗೆ 

ಏಕೆಂದರೆ, ಸ್ವಘೋಷಿತ ಸೈಬರ್ ಎಕ್ಸ್‌ಪರ್ಟ್‌ ಓರ್ವ ಹಣ ಪಡೆದು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವುದಾಗಿ ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾನೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಸೈಯದ್ ಶುಜಾ ಎಂಬಾತ ತಾನು ಯುಎಸ್ ರಕ್ಷಣಾ ಇಲಾಖೆಯ ತಂತ್ರಜ್ಞಾನ ಬಳಸಿಕೊಂಡು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇನೆ ಎಂದಿದ್ದಾನೆ. ಯುಎಸ್ ರಕ್ಷಣಾ ಇಲಾಖೆ ಜೊತೆ ತಾನು ಗುತ್ತಿಗೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾನೆ.₹53 ಕೋಟಿಗೆ 

ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಸೈಯದ್ ಶುಜಾ ಅನೇಕ ಚುನಾವಣೆಗಳ ಸಂದರ್ಭ ಆರೋಪಿಸಿದ್ದ. ವಿಶೇಷವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದ 2014ರ ಲೋಕಸಭೆ ಚುನಾವಣೆಯಲ್ಲಿ ಈ ಆರೋಪ ಮಾಡಿದ್ದ. ಈ ಬಾರಿ ಮಹಾರಾಷ್ಟ್ರದ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯ ನಾಯಕರೊಬ್ಬರು ನನ್ನನ್ನು ಸಂಪರ್ಕಿಸಿದ್ದಾರೆ ಎಂದಿದ್ದಾನೆ.

ಇಂಡಿಯಾ ಟುಡೇ ವರದಿಗಾರರು ಮಹಾರಾಷ್ಟ್ರದ ಸಂಸದರೊಬ್ಬರ ಆಪ್ತ ಸಹಾಯಕನಂತೆ ಸೈಯದ್ ಶುಜಾನನ್ನು ಸಂಪರ್ಕಿಸಿದ್ದರು. ಈ ವೇಳೆ ಆತ, ತನ್ನ ಬಳಿ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 281 ಕ್ಷೇತ್ರಗಳ ಆಕ್ಸೆಸ್ (ಪ್ರವೇಶ) ಇದ್ದು, ವಿವಿಪ್ಯಾಟ್ ವಿವರಗಳನ್ನು ಒದಗಿಸಿದರೆ 63 ಕ್ಷೇತ್ರಗಳ ಇವಿಎಂಗಳನ್ನು ಟ್ಯಾಂಪರ್ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು ತಿಳಿದು ಬಂದಿದೆ.

ವಿವಿಪ್ಯಾಟ್ ವಿವರ ಬಳಸಿಕೊಂಡು ನೀವು ಹೇಗೆ ಇವಿಎಂ ಟ್ಯಾಂಪರ್ ಮಾಡುತ್ತೀರಿ? ಎಂದು ವರದಿಗಾರ ಕೇಳಿದ್ದಕ್ಕೆ “ನಾನು ಫೈಲ್ ಪ್ರಿ ಪ್ರೋಗ್ರಾಂ ಮಾಡಿ ಇಟ್ಟಿರುತ್ತೇನೆ. ಉದಾಹರಣೆಗೆ ಅದು ಬಿಜೆಪಿ ಪರ ಫೈಲ್ ಆಗಿದ್ದರೆ, ಚುನಾವಣೆಯ ದಿನದಂದು ಟ್ರಾನ್ಸ್‌ಮಿಷನ್ ಪ್ರಾರಂಭವಾಗುವಾಗ, ಅವರ ಫೈಲ್ ತಡೆದು, ನನ್ನ ಫೈಲ್ ಅನ್ನು ಚುನಾವಣಾ ಆಯೋಗಕ್ಕೆ ಕಳುಹಿಸುತ್ತೇನೆ” ಎಂದು ಸೈಯದ್ ಶುಜಾ ಹೇಳಿಕೊಂಡಿರುವುದಾಗಿ ಇಂಡಿಯಾ ಟುಡೇ ವಿವರಿಸಿದೆ. ಇವಿಎಂಗಳು ಆನ್ ಇಲ್ಲದಿದ್ದರೂ ಟ್ರಾನ್ಸ್‌ಮಿಷನ್ ಮುಂದುವರಿಯುತ್ತದೆ ಎಂದು ಶುಜಾ ತಿಳಿಸಿದ್ದಾನೆ ಎಂದಿದೆ.

“ಇವಿಎಂ ತೆರೆದಾಗ, ಹೊಸ ಫೈಲ್ ಬರುತ್ತದೆ. ನಂತರ ಟ್ರಾನ್ಸ್‌ಮಿಷನ್ ಎಣಿಸಲಾಗುತ್ತದೆ. ಈ ಪ್ರಕ್ರಿಯೆ ಬಹಳ ಸುಲಭದ್ದಾಗಿದೆ. ಇವಿಎಂ ಟ್ಯಾಂಪರ್ ಮಾಡಿದ ಮುಂದಿನ ಮೂರು ದಿನಗಳವರೆಗೆ ನಾನು ಜಾಗರೂಕನಾಗಿರಬೇಕು. ಟ್ರಾನ್ಸ್‌ಮಿಷನ್ ಆಗುತ್ತಿದೆಯೋ ಇಲ್ಲವೋ ಎಂದು ಪ್ರತಿ ಗಂಟೆಗೆ ಸ್ಕ್ಯಾನ್ ಮಾಡಬೇಕು” ಎಂದು ಶುಜಾ ಹೇಳಿಕೊಂಡಿದ್ದಾನೆ.

ಗಣಿತಶಾಸ್ತ್ರದಲ್ಲಿ ಪಿಹೆಚ್‌ಡಿ ಮೈನರ್ ಆಗಿರುವ ಶುಜಾ ಇವಿಎಂ ಹ್ಯಾಕ್ ಮಾಡುವ ತನ್ನ ಕೆಲಸಕ್ಕಾಗಿ 6 ಮಿಲಿಯನ್ ಡಾಲರ್ (ಅಂದಾಜು ರೂ. 52-53 ಕೋಟಿ) ಬೇಡಿಕೆಯಿಟ್ಟಿದ್ದಾನೆ. ಇವಿಎಂ ಹ್ಯಾಕಿಂಗ್ ಕುರಿತು ಶುಜಾ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ, ಶುಜಾ ಇವಿಎಂಗಳನ್ನು ಹ್ಯಾಕ್ ಮತ್ತು ರಿಗ್ಗಿಂಗ್ ಮಾಡಿರುವುದಾಗಿ ಆರೋಪಿಸಿ ಚುನಾವಣಾ ಆಯೋಗ ದೆಹಲಿ ಪೊಲೀರಿಗೆ ದೂರು ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಕೈಪ್ ಮೂಲಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶುಜಾ, 2014 ರಲ್ಲಿ ತನ್ನ ತಂಡದ ಸದಸ್ಯರನ್ನು ಕೊಂದ ನಂತರ ದೇಶದಲ್ಲಿ ಬೆದರಿಕೆ ಇದೆ ಎಂದು ಭಾವಿಸಿದ್ದರಿಂದ ಭಾರತದಿಂದ ಪಲಾಯನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಚುನಾವಣೆಯಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದರಿಂದ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರನ್ನು ‘ಕೊಲ್ಲಲಾಗಿದೆ’ ಎಂದು ಶುಜಾ ಆರೋಪಿಸಿದ್ದಾನೆ.

ಇವಿಎಂ ಟ್ಯಾಂಪರಿಂಗ್‌ನ ಆರೋಪಗಳು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸಿತ್ತು. ಗೆದ್ದ ಶಿವಸೇನಾ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯೋರ್ವ ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಹ್ಯಾಕ್ ಮಾಡಲು ಮೊಬೈಲ್ ಮೂಲಕ ಒಟಿಪಿ ಕ್ರಿಯೇಟ್ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಚುನಾವಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಆಗಿದೆ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಇದು ಒಂದು ರಾಷ್ಟ್ರೀಯ ಪಕ್ಷದ ಕೀಳು ನಡೆ ಎಂದು ಹೇಳಿಕೊಂಡಿತ್ತು.

ಹರಿಯಾಣದ ಸುಮಾರು 26 ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆದ ಕುರಿತು ಅನುಮಾನ ವ್ಯಕ್ತಪಡಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇವಿಎಂಗಳ ಬ್ಯಾಟರಿಯ ಭಿನ್ನತೆಗಳ ಕುರಿತು ಗಮನ ಸೆಳೆದಿತ್ತು. ಆದರೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...