HomeUncategorizedಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ರಾಜ್ಯದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವ ವಲಸೆ ಕಾರ್ಮಿಕರು ಮತ ಚಲಾವಣೆಯಿಂದ ವಂಚಿತರಗುವ ಸಂಭವವಿದೆ ಎಂದು ವರದಿಗಳು ಉಲ್ಲೇಖಿಸಿದೆ. ಈ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ  ಮಹಾರಾಷ್ಟ್ರದ ಕಬ್ಬು ಕತ್ತರಿಸುವ ಮತ್ತು ಸಾರಿಗೆ ಅಸೋಸಿಯೇಷನ್ ಸಂಸ್ಥೆಯು  ಔರಂಗಾಬಾದ್ ಹೈಕೋರ್ಟ್ ಪೀಠವನ್ನು ಸಂಪರ್ಕಿಸಿದೆ. ಮಹಾರಾಷ್ಟ್ರ

ವಲಸೆ ಕಾರ್ಮಿಕರು ಮತ ಚಲಾಯಿಸಲು ಮತ್ತು ಅವರ ಕೆಲಸದ ಸ್ಥಳಗಳಿಂದ ಮರಳಲು ಅನುವು ಮಾಡಿಕೊಡಬೇಕು. ಇಲ್ಲವೇ, ಅಂಚೆ ಮತಪತ್ರಗಳು ಅಥವಾ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತಹ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸಂಘವು ನ್ಯಾಯಾಲಯವನ್ನು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವವರು ಮತ ಚಲಾಯಿಸುವ ಅವಕಾಶವನ್ನು ಕಳೆದುಕೊಳ್ಳಿದ್ದಾರೆ. ನವೆಂಬರ್ 15 ರಿಂದ ಕಬ್ಬು ಕತ್ತರಿಸುವ ಋತು ಪ್ರಾರಂಭವಾಗಲಿದೆ ಎಂದು ಸಂಘವು ಹೇಳಿದೆ.

ರಾಜ್ಯದ ವಿವಿಧ  ಜಿಲ್ಲೆಗಳಿಂದ ಲಕ್ಷಾಂತರ ಜನರು ಪಶ್ಚಿಮ ಮಹಾರಾಷ್ಟ್ರ ಮತ್ತು ಇತರ ಕಬ್ಬು ಬೆಳೆಯುವ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ ಸಂಘವು ಪೀಠವನ್ನು ಸಂಪರ್ಕಿಸಿದೆ.

ಆದಾಗ್ಯೂ, ವೆಸ್ಟ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್, ನವೆಂಬರ್ 20 ರಂದು ಕಾರ್ಮಿಕರು ತಮ್ಮ ಊರುಗಳಿಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿಕೊಂಡಿದೆ.

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ 12-15 ಲಕ್ಷ ಜನರು ಪಶ್ಚಿಮ ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಬ್ಬು ಬೆಳೆಯುವ ಪ್ರದೇಶಗಳಿಗೆ ತೆರಳುತ್ತಾರೆ ಎಂದು ತಮ್ಮ ಅರ್ಜಿಯಲ್ಲಿ ಸಂಘದ ಅಧ್ಯಕ್ಷ ಜೀವನ್ ರಾಥೋಡ್ ಹೇಳಿದ್ದಾರೆ.

ಪ್ರಸ್ತುತ ಕಟಾವು ಋತುವಿನಲ್ಲಿ, ಗಮನಾರ್ಹ ಸಂಖ್ಯೆಯ ಕಬ್ಬು ಕತ್ತರಿಸುವವರು ಈಗಾಗಲೇ ತಮ್ಮ ಮನೆಗಳನ್ನು ತೊರೆದು ಕೆಲಸಕ್ಕಾಗಿ ವಲಸೆ ಹೋಗಿದ್ದಾರೆ. ಹೀಗೆ ವಲಸೆ ಹೋಗಿರುವ ಅವರು 2025ರ ಏಪ್ರಿಲ್ ಅಥವಾ ಮೇ ವರೆಗೆ ಹಿಂತಿರುಗುವುದಿಲ್ಲ. ಇಷ್ಟು ದೊಡ್ಡ ವರ್ಗವು ತಮ್ಮ ಮತ ಚಲಾಯಿಸಲುವಲ್ಲಿ  ಗೈರುಹಾಜರಾದರೆ, ಅದು  ಪ್ರಜಾಪ್ರಭುತ್ವದ ಉದ್ದೇಶಕ್ಕೆ ಸೋಲಾಗುತ್ತದೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಚುನಾವಣೆಯ ದಿನದಂದು ಈ ಕಾರ್ಮಿಕರಿಗೆ ರಜೆ ಘೋಷಿಸಲು ಮಹಾರಾಷ್ಟ್ರ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯದ ಸಕ್ಕರೆ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ದೇಶದ ಅಗ್ರ ಸಕ್ಕರೆ ಉತ್ಪಾದಕ ರಾಜ್ಯವಾಗಿರುವ ಮಹಾರಾಷ್ಟ್ರವು 200ಕ್ಕೂ ಹೆಚ್ಚು ಖಾಸಗಿ ಮತ್ತು ಸಹಕಾರಿ ಕಾರ್ಖಾನೆ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದೆ. ಕಳೆದ ವರ್ಷ ರಾಜ್ಯವು ಸುಮಾರು 110 ಲಕ್ಷ ಟನ್‌ ಸಕ್ಕರೆ ಉತ್ಪದಿಸಿದೆ.

ಮಹಾರಾಷ್ಟ್ರದ ಪ್ರಮುಖ ಪಕ್ಷವಾಗಿದ್ದ ಶಿವಸೇನೆ, ಎನ್‌ಸಿಪಿ ಈ ಬಾರಿ ವಿಭಜನೆ ಹೊಂದಿದ್ದರಿಂದ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ, ಎನ್‌ಸಿಪಿ (ಅಜಿತ್ ಪವಾರ್), ಶಿವಸೇನೆ (ಶಿಂಧೆ), ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಉದ್ಧವ್ ಠಾಕ್ರೆ) ಪಕ್ಷಗಳು ಸೇರಿ 6 ಪ್ರಮುಖ ಪಕ್ಷಗಳು ಹೊಂದಿದೆ. ಹಾಗಾಗಿ ಈ ಬಾರಿ ಅಭ್ಯರ್ಥಿಗಳ ಗೆಲುವಿನ ಅಂತರವು ತೀರಾ ತೆಳುವಾಗಿರುತ್ತದೆ. ಹಾಗಾಗಿಯೆ ಈ ವಲಸೆ ಕಾರ್ಮಿಕರ ಮತಗಳು ಬಹಳ  ಪ್ರಮುಖವಾಗಿವೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಸರಕಾರಿ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕೈಗೊಳ್ಳುವ ಕ್ರಮಗಳಂತೆ, ಕಬ್ಬು ಕಡಿಯುವ ವಲಸೆ ಕಾರ್ಮಿಕರಿಗೆ ಕೂಡಾ ವ್ಯವಸ್ಥೆಗಳನ್ನು ಮಾಡಬಹುದು ಎಂದು ರಾಥೋಡ್‌ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...