HomeUncategorizedಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ರಾಜ್ಯದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವ ವಲಸೆ ಕಾರ್ಮಿಕರು ಮತ ಚಲಾವಣೆಯಿಂದ ವಂಚಿತರಗುವ ಸಂಭವವಿದೆ ಎಂದು ವರದಿಗಳು ಉಲ್ಲೇಖಿಸಿದೆ. ಈ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ  ಮಹಾರಾಷ್ಟ್ರದ ಕಬ್ಬು ಕತ್ತರಿಸುವ ಮತ್ತು ಸಾರಿಗೆ ಅಸೋಸಿಯೇಷನ್ ಸಂಸ್ಥೆಯು  ಔರಂಗಾಬಾದ್ ಹೈಕೋರ್ಟ್ ಪೀಠವನ್ನು ಸಂಪರ್ಕಿಸಿದೆ. ಮಹಾರಾಷ್ಟ್ರ

ವಲಸೆ ಕಾರ್ಮಿಕರು ಮತ ಚಲಾಯಿಸಲು ಮತ್ತು ಅವರ ಕೆಲಸದ ಸ್ಥಳಗಳಿಂದ ಮರಳಲು ಅನುವು ಮಾಡಿಕೊಡಬೇಕು. ಇಲ್ಲವೇ, ಅಂಚೆ ಮತಪತ್ರಗಳು ಅಥವಾ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತಹ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸಂಘವು ನ್ಯಾಯಾಲಯವನ್ನು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ ಸುಮಾರು 12 ಲಕ್ಷಕ್ಕೂ ಹೆಚ್ಚು ಕಬ್ಬು ಕಡಿಯುವವರು ಮತ ಚಲಾಯಿಸುವ ಅವಕಾಶವನ್ನು ಕಳೆದುಕೊಳ್ಳಿದ್ದಾರೆ. ನವೆಂಬರ್ 15 ರಿಂದ ಕಬ್ಬು ಕತ್ತರಿಸುವ ಋತು ಪ್ರಾರಂಭವಾಗಲಿದೆ ಎಂದು ಸಂಘವು ಹೇಳಿದೆ.

ರಾಜ್ಯದ ವಿವಿಧ  ಜಿಲ್ಲೆಗಳಿಂದ ಲಕ್ಷಾಂತರ ಜನರು ಪಶ್ಚಿಮ ಮಹಾರಾಷ್ಟ್ರ ಮತ್ತು ಇತರ ಕಬ್ಬು ಬೆಳೆಯುವ ಪ್ರದೇಶಗಳಿಗೆ ವಲಸೆ ಹೋಗಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಮತದಾರರು ತಮ್ಮ ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ಕೋರಿ ಸಂಘವು ಪೀಠವನ್ನು ಸಂಪರ್ಕಿಸಿದೆ.

ಆದಾಗ್ಯೂ, ವೆಸ್ಟ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್, ನವೆಂಬರ್ 20 ರಂದು ಕಾರ್ಮಿಕರು ತಮ್ಮ ಊರುಗಳಿಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿಕೊಂಡಿದೆ.

ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಿಂದ 12-15 ಲಕ್ಷ ಜನರು ಪಶ್ಚಿಮ ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಬ್ಬು ಬೆಳೆಯುವ ಪ್ರದೇಶಗಳಿಗೆ ತೆರಳುತ್ತಾರೆ ಎಂದು ತಮ್ಮ ಅರ್ಜಿಯಲ್ಲಿ ಸಂಘದ ಅಧ್ಯಕ್ಷ ಜೀವನ್ ರಾಥೋಡ್ ಹೇಳಿದ್ದಾರೆ.

ಪ್ರಸ್ತುತ ಕಟಾವು ಋತುವಿನಲ್ಲಿ, ಗಮನಾರ್ಹ ಸಂಖ್ಯೆಯ ಕಬ್ಬು ಕತ್ತರಿಸುವವರು ಈಗಾಗಲೇ ತಮ್ಮ ಮನೆಗಳನ್ನು ತೊರೆದು ಕೆಲಸಕ್ಕಾಗಿ ವಲಸೆ ಹೋಗಿದ್ದಾರೆ. ಹೀಗೆ ವಲಸೆ ಹೋಗಿರುವ ಅವರು 2025ರ ಏಪ್ರಿಲ್ ಅಥವಾ ಮೇ ವರೆಗೆ ಹಿಂತಿರುಗುವುದಿಲ್ಲ. ಇಷ್ಟು ದೊಡ್ಡ ವರ್ಗವು ತಮ್ಮ ಮತ ಚಲಾಯಿಸಲುವಲ್ಲಿ  ಗೈರುಹಾಜರಾದರೆ, ಅದು  ಪ್ರಜಾಪ್ರಭುತ್ವದ ಉದ್ದೇಶಕ್ಕೆ ಸೋಲಾಗುತ್ತದೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಚುನಾವಣೆಯ ದಿನದಂದು ಈ ಕಾರ್ಮಿಕರಿಗೆ ರಜೆ ಘೋಷಿಸಲು ಮಹಾರಾಷ್ಟ್ರ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯದ ಸಕ್ಕರೆ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ದೇಶದ ಅಗ್ರ ಸಕ್ಕರೆ ಉತ್ಪಾದಕ ರಾಜ್ಯವಾಗಿರುವ ಮಹಾರಾಷ್ಟ್ರವು 200ಕ್ಕೂ ಹೆಚ್ಚು ಖಾಸಗಿ ಮತ್ತು ಸಹಕಾರಿ ಕಾರ್ಖಾನೆ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದೆ. ಕಳೆದ ವರ್ಷ ರಾಜ್ಯವು ಸುಮಾರು 110 ಲಕ್ಷ ಟನ್‌ ಸಕ್ಕರೆ ಉತ್ಪದಿಸಿದೆ.

ಮಹಾರಾಷ್ಟ್ರದ ಪ್ರಮುಖ ಪಕ್ಷವಾಗಿದ್ದ ಶಿವಸೇನೆ, ಎನ್‌ಸಿಪಿ ಈ ಬಾರಿ ವಿಭಜನೆ ಹೊಂದಿದ್ದರಿಂದ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ, ಎನ್‌ಸಿಪಿ (ಅಜಿತ್ ಪವಾರ್), ಶಿವಸೇನೆ (ಶಿಂಧೆ), ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಉದ್ಧವ್ ಠಾಕ್ರೆ) ಪಕ್ಷಗಳು ಸೇರಿ 6 ಪ್ರಮುಖ ಪಕ್ಷಗಳು ಹೊಂದಿದೆ. ಹಾಗಾಗಿ ಈ ಬಾರಿ ಅಭ್ಯರ್ಥಿಗಳ ಗೆಲುವಿನ ಅಂತರವು ತೀರಾ ತೆಳುವಾಗಿರುತ್ತದೆ. ಹಾಗಾಗಿಯೆ ಈ ವಲಸೆ ಕಾರ್ಮಿಕರ ಮತಗಳು ಬಹಳ  ಪ್ರಮುಖವಾಗಿವೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಸರಕಾರಿ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕೈಗೊಳ್ಳುವ ಕ್ರಮಗಳಂತೆ, ಕಬ್ಬು ಕಡಿಯುವ ವಲಸೆ ಕಾರ್ಮಿಕರಿಗೆ ಕೂಡಾ ವ್ಯವಸ್ಥೆಗಳನ್ನು ಮಾಡಬಹುದು ಎಂದು ರಾಥೋಡ್‌ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...