Homeಮುಖಪುಟದೇಶಪ್ರೇಮದ ಆಯಾಮಗಳನ್ನರಸುತ್ತ ಈ ಬಾರಿಯ ನಾವು-ನಮ್ಮಲ್ಲಿ ಗಂಗಾವತಿಯಲ್ಲಿ...

ದೇಶಪ್ರೇಮದ ಆಯಾಮಗಳನ್ನರಸುತ್ತ ಈ ಬಾರಿಯ ನಾವು-ನಮ್ಮಲ್ಲಿ ಗಂಗಾವತಿಯಲ್ಲಿ…

’ವರ್ತಮಾನ ಕರ್ನಾಟಕ’ಕ್ಕೆ ಸ್ಪಂದಿಸಬೇಕೆನ್ನುವ ತುಡಿತದಿಂದ 2010ರಿಂದ ಆರಂಭಗೊಂಡ ವಿಸ್ತಾರತೆ ಈ ಬಾರಿಯ ಗಂಗಾವತಿ ಕಾರ್ಯಕ್ರಮದ ಪರಿಕಲ್ಪನೆಯಾದ "ದೇಶಪ್ರೇಮದ ಆಯಾಮಗಳು"ಎಂಬುವಲ್ಲಿಗೆ ಬಂದು ನಿಂತಿದೆ.

- Advertisement -
- Advertisement -

ಯುವ ಬರಹಗಾರರು, ಸಾಹಿತಿಗಳು, ಚಿಂತಕರು ಒಂದೆಡೆ ಸೇರಿ ಸಮಕಾಲೀನ ಸಮಾಜಕ್ಕೆ ಮುಖಾಮುಖಿಯಾಗುತ್ತ ತಮ್ಮ ಓದು-ಬರಹವನ್ನು ತಾವೇ ಓರೆಗೆ ಹಚ್ಚುವ ವಿಭಿನ್ನ ಕಾರ್ಯಕ್ರಮ-ಕಮ್ಮಟವೇ ನಾವು-ನಮ್ಮಲ್ಲಿ. 2002ರಿಂದ ಆರಂಭವಾಗಿ ಹಲವು ಪುಟ್ಟ ಹೆಜ್ಜೆಗಳ ದಿಟ್ಟ ಪಯಣ ನಡೆಸುತ್ತಿರುವ ನಾವು-ನಮ್ಮಲ್ಲಿ ಕಮ್ಮಟವು ಈ ಬಾರಿ ಗಂಗಾವತಿಯಲ್ಲಿ ಜರುಗಲಿದೆ.

ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಬಯಲು ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಜರುಗುವ ನಾವು ನಮ್ಮಲ್ಲಿ ಬಳಗ ಪ್ರತಿವರ್ಷವೂ ಹಿಗ್ಗುತ್ತಲೇ ಇದೆ.  ಸಾಹಿತಿ-ಬರಹಗಾರರಿಗೆ ಮಾತ್ರ ಸೀಮಿತವಾಗದಿರುವುದು, ಸಮಕಾಲೀನತೆಗೆ ತೆರೆದುಕೊಂಡಿರುವುದು ಮತ್ತು ಎಲ್ಲಾ ಜೀವಪರರನ್ನು ಮುಕ್ತವಾಗಿ ಅಪ್ಪಿಕೊಳ್ಳುವುದು ಇದಕ್ಕೆ ಬಹುಮುಖ್ಯ ಕಾರಣವಾಗಿದೆ.

ನಾವು ನಮ್ಮ ಬರಹಗಳ ಆಚೆಗೂ ’ವರ್ತಮಾನ ಕರ್ನಾಟಕ’ಕ್ಕೆ ಸ್ಪಂದಿಸಬೇಕೆನ್ನುವ ತುಡಿತದಿಂದ 2010ರಿಂದ ಆರಂಭಗೊಂಡ ವಿಸ್ತಾರತೆ ಈ ಬಾರಿಯ ಗಂಗಾವತಿ ಕಾರ್ಯಕ್ರಮದ ಪರಿಕಲ್ಪನೆಯಾದ “ದೇಶಪ್ರೇಮದ ಆಯಾಮಗಳು”ಎಂಬುವಲ್ಲಿಗೆ ಬಂದು ನಿಂತಿದೆ.

ದೇವನೂರು ಮಹಾದೇವ, ಭಾನುಮುಷ್ತಾಕ್, ಯು.ಆರ್.ಅನಂತಮೂರ್ತಿ, ಜಿ.ರಾಜಶೇಖರ್, ಫಣಿರಾಜ್, ಕೆ.ಟಿ.ಶಿವಪ್ರಸಾದ್‌, ಎಚ್‌.ನಾಗವೇಣಿ, ಹೆಚ್.ಎಸ್.ರಾಘವೇಂದ್ರರಾವ್, ಆಶಾದೇವಿ, ಓ.ಎಲ್.ನಾಗಭೂಷಣಸ್ವಾಮಿ, ವಿನಯಾ, ರಹಮತ್ ತರೀಕೆರೆ, ದಿನೇಶ್ ಅಮಿನ್ ಮಟ್ಟು, ಸುಗತ ಶ್ರೀನಿವಾಸರಾಜು, ಜಿ.ಎನ್.ದೇವಿ, ಅಜಿತ್ ಪಿಳ್ಳೆ, ಜಿ.ರಾಜಶೇಖರ್, ಫಣಿರಾಜು, ಕೆ.ನೀಲಾ, ಕೆ.ರಾಮಯ್ಯ, ರಾಜೇಂದ್ರ ಚೆನ್ನಿ ಒಳಗೊಂಡಂತೆ ಕರ್ನಾಟಕದ ಬಹುಪಾಲು ಹಿರಿ ಕಿರಿ ಬರಹಗಾರ್ತಿ ಬರಹಗಾರರು ನಾವುನಮ್ಮಲ್ಲಿ ಬಳಗದ ಬೆನ್ನಿಗಿರುವುದು ಕಾಲದ ಎಚ್ಚರವನ್ನು ಕಾಯ್ದುಕೊಳ್ಳಲು ನೆರವಾಗಿದೆ.

ಸ್ವಾತಂತ್ರ್ಯ ಚಳವಳಿಯ ಕಾಲ ಮತ್ತು ನಂತರದಲ್ಲಿ ಭಾರತೀಯರೆಲ್ಲರೂ ಒಂದು ಎಂಬ ಬೆಸುಗೆಗೆ ಕೆಲಸ ಮಾಡಿದ ದೇಶಪ್ರೇಮ ಎಂಬ ಪದವೀಗ ಜಾತಿ, ಧರ್ಮ, ಬಣ್ಣ, ಪ್ರದೇಶ, ಲಿಂಗದ ಆಧಾರದಲ್ಲಿ ಜನರನ್ನು ವಿಭಜಿಸಲು ಬಳಕೆಯಾಗುತ್ತಿರುವುದು ದುರಂತದ ಸಂಗತಿ. ಹಾಗಾಗಿ ನಿಜವಾದ ದೇಶಪ್ರೇಮವೆಂದರೇನು, ಅದರ ವಿವಿಧ ಆಯಾಮಗಳೇನು, ದೇಶಪ್ರೇಮದ ಅಪವ್ಯಾಖ್ಯಾನವನ್ನು ತಡೆಯಲು ನಾವು ಮಾಡಬೇಕಾದುದ್ದೇನು ಎಂಬುದರ ಮುಕ್ತ ಆರೋಗ್ಯಕರ ಚರ್ಚೆಗೆ ಈ ಬಾರಿಯ ನಾವು ನಮ್ಮಲ್ಲಿ ವೇದಿಕೆ ಸಿದ್ದಗೊಂಡಿದೆ.

ಆಗಸ್ಟ್‌ ಆರಂಭದಲ್ಲಿ ನಡೆಯಬೇಕಿದ್ದ ಈ ಬಾರಿಯ ನಾವು ನಮ್ಮಲ್ಲಿ ಕಾರ್ಯಕ್ರಮ ಕರ್ನಾಟಕಕ್ಕೆ ಅಪ್ಪಳಿಸಿದ ಪ್ರವಾಹ ಕಾರಣಕ್ಕೆ ಮೂಂದೂಡಿ ಈಗ ನವೆಂಬರ್‌ 16-17ರ ಶನಿವಾರ-ಭಾನುವಾರಕ್ಕೆ ನಿಗಧಿಯಾಗಿದೆ. ಗಂಗಾವತಿಯ ಐಎಂಎ ಸಭಾಂಗಣದಲ್ಲಿ ನಡೆಯುವ ನಾವು-ನಮ್ಮಲ್ಲಿ ಕಮ್ಮಟವನ್ನು ನವೆಂಬರ್‌ 16ರ ಶನಿವಾರ ಬೆಳಿಗ್ಗೆ 10:30ಕ್ಕೆ ಹಿರಿಯ ಚಿಂತಕರು ಮತ್ತು ಹೋರಾಟಗಾರರಾದ ಜಿ.ರಾಮಕೃಷ್ಣರವರು ಉದ್ಘಾಟಿಸಲಿದ್ದಾರೆ. ಹೋರಾಟಗಾರ್ತಿ, ಚಿಂತಕಿ ಕೆ.ನೀಲಾರವರು ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಲಿದ್ದು, ಶೈಲಜಾ ಹಿರೇಮಠ, ಜೆ.ಭಾರದ್ವಾಜ್‌, ಸಿ.ಎಚ್‌ ನಾರಿನಾಳ್‌ ಉಪಸ್ಥಿತರಿರುತ್ತಾರೆ.

ಮಧ್ಯಾಹ್ನ 2 ಗಂಟೆಗೆ “ಭಾರತೀಯತೆಯ ವ್ಯಾಖ್ಯಾನಗಳು” ಗೋಷ್ಠಿ ಜರುಗಲಿದ್ದು ಚಿಂತಕರಾದ ಶಿವಸುಂದರ್‌ ಮತ್ತು ಅಂಕಣಕಾರರಾದ ಎ.ನಾರಾಯಣರವರು ಮಾತನಾಡಲಿದ್ದಾರೆ. ಡಾ.ಪ್ರಕಾಶ್‌ ಬಡವನಹಳ್ಳಿ ಮತ್ತು ಡಾ.ನರಸಿಂಹಮೂರ್ತಿ ಹಳೇಹಟ್ಟಿಯವರು ಪ್ರತಿಕ್ರಿಯೆ ನೀಡಲಿದ್ದಾರೆ. ಸಂಜೆ 4ಗಂಟೆಗೆ ಅರ್ಹನಿಶಿ ಪ್ರಕಾಶನ ಹೊರತಂದಿರುವ ನಾಗರಾಜ ಕೋರಿಯವರ “ತನುಬಿಂದಿಗೆ” ಕಥಾಸಂಕಲನ ಬಿಡುಗಡೆಯಾಗಲಿದೆ. ಯುವ ಲೇಖಕರಾದ ಚಿದಾನಂದಸಾಲಿ ಪುಸ್ತಕ ಬಿಡುಗಡೆ ಮಾಡಲಿದ್ದು ಅಮರೇಶ ನುಗಡೋಣಿಯವರು ಅಧ್ಯಕ್ಷೀಯ ನುಡಿಗಳನ್ನಾಡಲಿದ್ದಾರೆ.

ಸಂಜೆ 5:30ಕ್ಕೆ ಎಲ್ಲರ ಮೆಚ್ಚಿನ ಕವಿಗೋಷ್ಠಿ ನಡೆಯಲಿದ್ದು ಗಜಲ್‌ ಕವಿ ಆರಿಫ್‌ ರಾಜಾ ಆಶಯ ಮಾತುಗಳನ್ನಾಡಿದರೆ, ಹಿರಿಯ ಸಾಹಿತಿಗಳಾದ ಮಾಲತಿ ಪಟ್ಟಣಶೆಟ್ಟಿಯವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ನಾಡಿನ ಮತ್ತು ಮುಖ್ಯವಾಗಿ ಹೈದರಾಬಾದ್‌ ಕರ್ನಾಟಕದ ಯುವಕವಿಗಳು ಕವನ ವಾಚಿಸಲು ಸಿದ್ದರಿದ್ದಾರೆ. ಅಲ್ಲಿಗೆ ಮೊದಲ ದಿನ ಕಮ್ಮಟ ಕೊನೆಗೊಳ್ಳಲಿದೆ.

ನವೆಂಬರ್‌ 17ರ ಭಾನುವಾರ ಬೆಳಿಗ್ಗೆ 9:30ಕ್ಕೆ ಎರಡನೇ ದಿನ ಕಮ್ಮಟ ಆರಂಭವಾಗಲಿದ್ದು ಮೊದಲ ಗೋಷ್ಠಿ “ಈ ಹೊತ್ತಿನ ಚುನಾವಣಾ ಬಿಕ್ಕಟ್ಟುಗಳು” ಕುರಿತು ನಡೆಯಲಿದೆ. ಬಸವತತ್ವದ ಶಾಸಕ ಎಂದೇ ಖ್ಯಾತರಾದ ಬಸವಕಲ್ಯಾಣದ ಶಾಸಕರಾದ ಬಿ.ನಾರಾಯಣ್‌ರಾವ್‌ ಮತ್ತು ಹೋರಾಟಗಾರರಾದ ಸಿದ್ದನಗೌಡ ಪಾಟೀಲ್‌ರವರು ಮಾತನಾಡಲಿದ್ದು, ನಯನಾ ಮೋಟಮ್ಮ ಮತ್ತು ಲಿಂಗರಾಜ ಹಟ್ಟಿಯವರು ಪ್ರತಿಕ್ರಿಯೆ ನೀಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಪ್ರಜಾಪ್ರಭುತ್ವ: ಆಶಯ ಮತ್ತು ಕನಸು ಗೋಷ್ಟಿ ನಡೆಯಲಿದ್ದು ಆರ್‌.ಪ್ರತಿಭಾ, ಅಶ್ವಿನಿ ಮದನಕರ, ಕೊಟ್ರಪ್ಪ ಹಿರೇಮಾಗಡಿಯವರು ಮಾತನಾಡಲಿದ್ದಾರೆ. ಹೈದರಾಬಾದ್‌ ಕರ್ನಾಟಕ ಹೋರಾಟಗಾರ ರಝಾಕ್‌ ಉಸ್ತಾದ್‌ರವರು ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಕೊನೆಯದಾಗಿ ಮಧ್ಯಾಹ್ನ 3;30ಕ್ಕೆ ಸಮಾರೋಪ ಗೋಷ್ಠಿ ಜರುಗಲಿದ್ದು ಬಳ್ಳಾರಿಯ ಲೋಹಿಯಾ ಪ್ರಕಾಶನದ ಚನ್ನಬಸವಣ್ಣನವರು ಸಮಾರೋಪ ಮಾತುಗಳನ್ನಾಡಲಿದ್ದು, ವಿಜಯಪುರ ಅಕ್ಕಮಹಾದೇವಿ ವಿ.ವಿಯ ಉಪಕುಲಪತಿಗಳಾದ ಡಾ.ಸಬೀಹಾರವರು ಗೋಷ್ಠಿಯ ಅಧ್ಯಕ್ಷೀಯ ಮಾತಗಳನ್ನಾಡಲಿದ್ದಾರೆ. ಡಾ.ಶಿವಕುಮಾರ ಮಾಲಿಪಾಟೀಲ್‌, ಸಂಗಮೇಶ ಸುಗ್ರೀವ ಮತ್ತು ಮಹಾಲಕ್ಷ್ಮಿ ಕೇಸರಹಟ್ಟಿಯವರು ಉಪಸ್ಥಿತರಿರುತ್ತಾರೆ.

ಒಟ್ಟಿನಲ್ಲಿ ಎರಡು ದಿನಗಳ ಕಾಲ ಸಮಾನ ಆಶಯದ ಮನಸ್ಸುಗಳು ಸಮಾಜದ ಕರೆಗೆ ಕಿವಿಯಾಗುವ, ದನಿಯಾಗುವ ಮಹತ್ವಪೂರ್ಣ ಕಾರ್ಯಕ್ರಮ ಇದಾಗಲಿದ್ದು ಭಾಗವಹಿಸಲು ಆಸಕ್ತಿಯುಳ್ಳವರು ನಾವು ನಮ್ಮಲ್ಲಿ ಬಳಗದ ಜಾಜಿ ದೇವೆಂದ್ರಪ್ಪ 9481662735 ಮತ್ತು ಟಿ.ಎಂ ಉಷಾರಾಣಿ: 9036550365 ಇವರನ್ನು ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...