Homeಮುಖಪುಟ'2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ' | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ...

‘2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ’ | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ ನಿರಾಕರಿಸಿದ ಬಿಜೆಪಿಯ ದೇವೇಂದ್ರ ಫಡ್ನವಿಸ್

- Advertisement -
- Advertisement -

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ರಾಜ್ಯದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿ ಸರ್ಕಾರ ರಚನೆ ಮಾಡುವ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು ಎಂಬ ವರದಿಗಳನ್ನು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶುಕ್ರವಾರ ನಿರಾಕರಿಸಿದ್ದಾರೆ. ಶರದ್ ಮತ್ತು

“ನಾನು ಮತ್ತು ನನ್ನ ಸೋದರ ಸಂಬಂಧಿ ಅಜಿತ್ ಪವಾರ್ ಉದ್ಯಮಿ ಅದಾನಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದೆವು” ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವಿಸ್, ಅದಾನಿ ಈ ಹಿಂದೆ ನಮ್ಮ ಯಾವುದೇ ಸಭೆಗಳಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಶರದ್ ಮತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯೂಸ್‌ಲಾಂಡ್ರಿ ಮತ್ತು ದಿ ನ್ಯೂಸ್ ಮಿನಿಟ್‌ಗೆ ನೀಡಿದ ಸಂದರ್ಶನಗಳಲ್ಲಿ ಮಾತನಾಡಿರುವ ಶರದ್ ಪವಾರ್ ಅವರು, ಅದಾನಿ ಅವರು 2019 ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿಯ ಬೆಂಬಲವನ್ನು ಕೋರುವ ಎನ್‌ಸಿಪಿಯ ಸಾಧ್ಯತೆಯ ಕುರಿತು ಚರ್ಚೆ ನಡೆಸಲಾಗಿತ್ತು ಆರೋಪಿಸಿದ್ದರು, ಇದರ ನಂತರ ಫಡ್ನವೀಸ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಾನು, ಅಜಿತ್ ಪವಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅದಾನಿ ಉಪಸ್ಥಿತರಿದ್ದರು ಎಂದು ಶರದ್ ಪವಾರ್ ಹೇಳಿಕೊಂಡಿದ್ದಾರೆ. ಅದಕ್ಕೂ ಮುಂಚೆ ಅಜಿತ್ ಪವಾರ್ ಅವರು ಕೂಡಾ ಈ ಸಭೆಯ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

2019ರ ಚುನಾವಣೆಯ ನಂತರ ಶರದ್ ಪವಾರ್ ಅವರ ಎನ್‌ಸಿಪಿಯಿಂದ ಬಂಡೆದ್ದಿದ್ದ ಅಜಿತ್ ಪವಾರ್ ಅವರ ಬಣದೊಂದಿಗೆ ಬಿಜೆಪಿ ರಚಿಸಿದ್ದ 3 ದಿನಗಳ ಸರ್ಕಾರಕ್ಕೆ ಮುನ್ನವೆ ಈ ಸಭೆ ನಡೆದಿತ್ತು. ಮೂರೂವರೆ ದಿನಗಳ ಅವಧಿಯ ಅಲ್ಪಾವಧಿ ಸರ್ಕಾರದಲ್ಲಿ ಫಡ್ನವಿಸ್ ಮುಖ್ಯಮಂತ್ರಿ ಮತ್ತು ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಅದಾಗ್ಯೂ, ನಾಟಕೀಯ ಬೆಳವಣಿಗೆಯ ನಂತರ, ಅಜಿತ್ ಪವಾರ್ ಅವರು ಮತ್ತೆ ಅವಿಭಜಿತ ಎನ್‌ಸಿಪಿಗೆ ಮರಳಿದ್ದು ಮೂರು ದಿನಗಳ ಸರ್ಕಾರ ಉರುಳಿತ್ತು. ಅದರ ನಂತರ ಎನ್‌ಸಿಪಿಯು ಕಾಂಗ್ರೆಸ್ ಮತ್ತು ಅವಿಭಜಿತ ಶಿವಸೇನೆಯೊಂದಿಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಆದಾಗ್ಯೂ, 2022ರ ಜೂನ್ ತಿಂಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪು ಬಂಡಾಯವೆದ್ದು, ಬಿಜೆಪಿ ಜೊತೆಗೆ ಸೇರಿದ ನಂತರ ಸರ್ಕಾರವು ಪತನವಾಯಿತು.

ಇದರ ನಂತರ ಶಿಂಧೆ ಅವರು ಬಿಜೆಪಿ ಜೊತೆಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು ಇದರಲ್ಲಿ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಅದಾಗಿ ಒಂದು ವರ್ಷದ ನಂತರ, ಹಲವಾರು ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಮತ್ತೆ ಬಂಡಾಯವೆದ್ದು ಆಡಳಿತರೂಢ ಸಮ್ಮಿಶ್ರ ಸರ್ಕಾರಕ್ಕೆ ಸೇರಿ, ಅವರೂ ಉಪಮುಖ್ಯಮಂತ್ರಿಯಾದರು.

ಅಜಿತ್ ಪವಾರ್ ಅವರ ವಿಭಜನೆಯ ಪರಿಣಾಮವಾಗಿ ಎನ್‌ಸಿಪಿಯ ಒಂದು ಬಣ ಅವರನ್ನು ಬೆಂಬಲಿಸಿದ್ದರೆ, ಇನ್ನೊಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿತು.

288 ಅಸೆಂಬ್ಲಿ ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಮೂರು ದಿನಗಳ ನಂತರ ನಡೆಯಲಿದೆ. ಶಿವಸೇನೆ ಮತ್ತು ಎನ್‌ಸಿಪಿ ವಿಭಜನೆಯ ನಂತರ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.

ಇದನ್ನೂ ಓದಿ: ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...