Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಕುರ್ಚಿ ಮೇಲೆ ಕುಳಿತಿದ್ದಕ್ಕೆ ವಿರೋಧ, ಜಾತಿ ನಿಂದನೆ : ಆರೋಪ

ದಲಿತ ವ್ಯಕ್ತಿ ಕುರ್ಚಿ ಮೇಲೆ ಕುಳಿತಿದ್ದಕ್ಕೆ ವಿರೋಧ, ಜಾತಿ ನಿಂದನೆ : ಆರೋಪ

- Advertisement -
- Advertisement -

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಕುರ್ಚಿ ಮೇಲೆ ಕುಳಿತಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರಬಲ ಸಮುದಾಯದ ವ್ಯಕ್ತಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈ ಪೂರ್ವ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಲಿತ ವ್ಯಕ್ತಿ ಅಶೋಕ್ ಸಾಕೇತ್ ಎಂಬವರು ತನ್ನ ಮನೆ ಮುಂದೆ ಕುರ್ಚಿ ಹಾಕಿ ಕುಳಿತಿದ್ದಾಗ, ಅದೇ ದಾರಿಯಾಗಿ ಹೋಗುತ್ತಿದ್ದ ಪ್ರಬಲ ಸಮುದಾಯದ ವ್ಯಕ್ತಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ನವೆಂಬರ್ 10ರಂದು ಅಶೋಕ್ ಅವರು ಮನೆ ಮುಂದೆ ಕುರ್ಚಿ ಹಾಕಿ ಕುಳಿತಿದ್ದರು. ಈ ವೇಳೆ ಮನೆ ಮುಂದಿನ ರಸ್ತೆಯಲ್ಲಿ ಸಾಗುತ್ತಿದ್ದ ಪ್ರಬಲ ಸಮುದಾಯದ ಮಯಾಂಕ್ ದ್ವಿವೇದಿ ಎಂಬಾತ, ಅಶೋಕ್ ಕುಳಿತಿರುವುದನ್ನು ಕಂಡು ಕೋಪಗೊಂಡಿದ್ದಾರೆ. ಜಾತಿ ನಿಂದನೆ ಮಾಡಲು ಪ್ರಾರಂಭಿಸಿದ್ದಾರೆ ಎಂದು ವರದಿ ವಿವರಿಸಿದೆ.

ನೀನು ಕೆಳ ಜಾತಿಯವ, ನೀನು ನಮ್ಮ ಮುಂದೆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಯಾವುದೇ ಹಕ್ಕಿಲ್ಲ” ಎಂದು ಮಯಾಂಕ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಶೋಕ್, “ನಾನು ನನ್ನ ಮನೆ ಮುಂದೆ ಕುಳಿತಿದ್ದೇನೆ” ಎಂದು ಹೇಳಿದ್ದಾರೆ. ಈ ವೇಳೆ ಮತ್ತಷ್ಟು ಕೋಪಗೊಂಡ ಮಯಾಂಕ್, ಜಾತಿ ಉಲ್ಲೇಖಿಸಿ ಹೆಚ್ಚಿನ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅಶೋಕ್ ಪೊಲೀಸ್ ದೂರು ದಾಖಲಿಸಿದ್ದು, ದೂರು ನೀಡಲು ಹೋದಾಗ ಪೊಲೀಸ್ ಅಧಿಕಾರಿಗಳೂ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ದಿ ಮೂಕ್‌ನಾಯಕ್ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅಶೋಕ್, “ನಾನು ದೂರು ನೀಡಲು ಲಾರ್ ಪೊಲೀಸ್ ಠಾಣೆಗೆ ಹೋದಾಗ, ಪೊಲೀಸರು ನನ್ನ ದೂರನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬದಲಾಗಿ, ಅವರು ನನಗೆ ಜಾತಿ ನಿಂದನೆ ಮಾಡಿದ್ದಾರೆ. ಅದು ನನಗೆ ಬಹಳ ನೋವುಂಟು ಮಾಡಿದೆ. ಅಂತಿಮವಾಗಿ ಎಫ್ಐಆರ್ ದಾಖಲಾಗಿದೆ. ಆದರೆ, ಪೊಲೀಸರ ವರ್ತನೆ ನಿರಾಶಾದಾಯಕವಾಗಿತ್ತು” ಎಂದು ಹೇಳಿದ್ದಾರೆ.

ಎಫ್‌ಐಆರ್ ದಾಖಲಿಸಿದ ನಂತರ ಅಪರಿಚಿತ ವ್ಯಕ್ತಿಗಳು ತಮ್ಮ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ಅಶೋಕ್ ಹೇಳಿಕೊಂಡಿದ್ದಾರೆ. ನವೆಂಬರ್ 10ರ ಸಂಜೆ, ಅವರು ಪೊಲೀಸ್ ಠಾಣೆಯಿಂದ ಹಿಂತಿರುಗಿದ ಸ್ವಲ್ಪ ಸಮಯದ ನಂತರ, ಕೆಲ ವ್ಯಕ್ತಿಗಳು ಅವರ ಮನೆಗೆ ನುಗ್ಗಿ, ಬಾಗಿಲನ್ನು ಹಾನಿಗೊಳಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ. “ನೀನು ನಮ್ಮ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಿಯಲ್ವಾ.. ಇನ್ನು ಪರಿಣಾಮಗಳನ್ನು ಎದುರಿಸು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ ಎಂದು ಮೂಕನಾಯಕ್ ವರದಿ ವಿವರಿಸಿದೆ.

ದಾಳಿ ಮಾಡಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಅಶೋಕ್ ಕುಟುಂಬ ಪೊಲೀಸರಿಗೆ ಮನವಿ ಮಾಡಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ (ಎಸ್‌ಸಿ) ವಿಭಾಗದ ಅಧ್ಯಕ್ಷ ಪ್ರದೀಪ್ ಅಹಿರ್ವಾರ್, ಕೃತ್ಯವನ್ನು ಖಂಡಿಸಿದ್ದಾರೆ. “ನಮ್ಮ ಸಮಾಜದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರದ ಘಟನೆಗಳು ಮಿತಿ ಮೀರಿವೆ. ಈ ದುರದೃಷ್ಟಕರ ಘಟನೆಯು ಆಳವಾಗಿ ಬೇರೂರಿರುವ ಜಾತಿವಾದವನ್ನು ಎತ್ತಿ ತೋರಿಸುತ್ತದೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ : ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...