Homeಮುಖಪುಟಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

ಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

- Advertisement -
- Advertisement -

ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಜೊತೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಕಾರ್ಯದಕ್ಷತಾ ಇಲಾಖೆ (ಡಿಒಜಿಒ)ಯ ಉಸ್ತುವಾರಿಯಾಗಿ ನಾಮನಿರ್ದೇಶನಗೊಂಡಿರುವ ಭಾರತ ಮೂಲದ ಉದ್ಯಮಿ ಹಾಗೂ ರಾಜಕಾರಣಿ ವಿವೇಕ್ ರಾಮಸ್ವಾಮಿ ಯುಎಸ್ ಸರ್ಕಾರಿ ಉದ್ಯೋಗಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಗುರುವಾರ (ನ.16) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, “ಎಲೋನ್ ಮಸ್ಕ್ ಮತ್ತು ನಾನು ಲಕ್ಷಾಂತರ ಚುನಾಯಿತ ಫೆಡರಲ್ ಅಧಿಕಾರಶಾಹಿಗಳನ್ನು ವಾಷಿಂಗ್ಟನ್ ಡಿಸಿ ಅಧಿಕಾರಶಾಹಿಯಿಂದ ತೆಗೆದು ಹಾಕಲು ಸಿದ್ಧರಿದ್ದೇವೆ. ಈ ರೀತಿ ನಾವು ಈ ದೇಶವನ್ನು ಉಳಿಸುತ್ತೇವೆ” ಎಂದು ನೇರವಾಗಿ ಹೇಳಿದ್ದಾರೆ.

ಅಧಿಕಾರಶಾಹಿಯನ್ನು ನಿಭಾಯಿಸಲು ಮಸ್ಕ್‌ನ ವಿಧಾನವನ್ನು ವಿವರಿಸಿದ ರಾಮಸ್ವಾಮಿ, “ನೀವು ಇನ್ನೂ ಎಲೋನ್ ಅವರನ್ನು ಭೇಟಿ ಮಾಡಿದ್ದೀರೋ..ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ‘ಉಳಿ ತರುವುದಿಲ್ಲ..ಗರಗಸ’ ತರಲಿದ್ದಾರೆ (ನಿಧಾನವಲ್ಲ, ತ್ವರಿತ ಕಡಿತ) ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ವಿವೇಕ್ ರಾಮಸ್ವಾಮಿ ಅಮೆರಿಕದ ನವೀಕರಣ ಸಾಮರ್ಥ್ಯದ ಬಗ್ಗೆ ತಮ್ಮ ನಂಬಿಕೆಯನ್ನು ಒತ್ತಿ ಹೇಳಿದ್ದು, ದೇಶವು ಬದಲಾಯಿಸಲಾಗದ ಅವನತಿಯಲ್ಲಿದೆ ಎಂಬ ಕಲ್ಪನೆಯನ್ನು ತಿರಸ್ಕರಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ನಾವು ಮುಂದುವರೆದಿದ್ದೇವೆ. ಅಮೆರಿಕ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ.

ದೇಶದ ಭವಿಷ್ಯವನ್ನು ‘ಹೊಸ ಉದಯ’ ಎಂದು ಬಣ್ಣಿಸಿದ ಸ್ವಾಮಿ, ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಅರ್ಹತೆಯ ಮೂಲಕ ಯಶಸ್ವಿಯಾಗುತ್ತೇವೆ ಎಂದು ತಿಳಿದು ನಮ್ಮ ಮಕ್ಕಳು ಮುನ್ನಡೆಯಲಿದ್ದಾರೆ. ನಿಮಗೆ ಅನಿಸಿದ್ದನ್ನು ಮಾತನಾಡಲು ನೀವು ಮುಕ್ತರಾಗಿರುತ್ತೀರಿ. ಉತ್ತಮ ವ್ಯಕ್ತಿಗೆ ಅವರ ಹಿನ್ನೆಲೆಯ ಹೊರತಾಗಿಯೂ ಕೆಲಸ ಸಿಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಅಂತವನ್ನು ಕಡಿಮೆ ಮಾಡಲು ದಕ್ಷತೆ ಇಲಾಖೆಯ ಪ್ರಗತಿಯ ಕುರಿತು ಪ್ರತಿ ವಾರ ನಾನು ಮತ್ತು ಎಲೋನ್ ಲೈವ್ ಬಂದು ಮಾತನಾಡುತ್ತೇವೆ. ಜನರೊಂದಿಗೆ ಸಾಧ್ಯವಾದಷ್ಟು ಪಾರದರ್ಶಕವಾಗಿರಲು ಪ್ರಯತ್ನಿಸುತ್ತೇವೆ ಎಂದು ರಾಮಸ್ವಾಮಿ ಭರವಸೆ ನೀಡಿದ್ದಾರೆ.

ವಿವೇಕ್ ರಾಮಸ್ವಾಮಿಯ ಈ ಹೇಳಿಕೆ ಸಂಚಲನ ಸೃಷ್ಟಿಸಿದ್ದು, ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಭಾರತೀಯ ಉದ್ಯೋಗಳಲ್ಲೂ ಆತಂಕ ಉಂಟು ಮಾಡಿದೆ ಎಂದು ವರದಿಗಳು ಹೇಳಿವೆ.

ಎಲೋನ್ ಮಸ್ಕ್ ಮತ್ತು ವಿವೇಕ್ ರಾಮಸ್ವಾಮಿ ಉಸ್ತುವಾರಿ ವಹಿಸಲಿರುವ ಡಿಒಜಿಒ ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡಲಿದೆ. ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಗೆ ಚಾಲನೆ ನೀಡಲು, ಸರ್ಕಾರಕ್ಕೆ ಉದ್ಯಮಶೀಲತೆಯ ವಿಧಾನವನ್ನು ರಚಿಸಲು ವೈಟ್ ಹೌಸ್, ಆಫೀಸ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಬಜೆಟ್‌ನೊಂದಿಗೆ ಕೆಲಸ ಮಾಡಲಿದೆ ಟ್ರಂಪ್ ಹೇಳಿದ್ದಾರೆ.

 ಇದನ್ನೂ ಓದಿ : COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...