Homeಮುಖಪುಟಚುನಾವಣೆ ಹೊತ್ತಿನಲ್ಲಿ 'ಎಎಪಿ'ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮುಂಚೆಯೇ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಹಿರಿಯ ಸಚಿವ ಮತ್ತು ದೀರ್ಘಾವಧಿಯ ಪಕ್ಷದ ನಾಯಕ ಕೈಲಾಶ್ ಗಹ್ಲೋಟ್ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಗಹ್ಲೋಟ್ ಅವರು ಗೃಹ, ಸಾರಿಗೆ, ಐಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ದೆಹಲಿ ಸರ್ಕಾರದ ಪ್ರಮುಖ ಖಾತೆಗಳ ಉಸ್ತುವಾರಿ ವಹಿಸಿದ್ದರು.

ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಉದ್ದೇಶಿಸಿ ರಾಜೀನಾಮೆ ಪತ್ರ ಬರೆದಿರುವ ಅವರು, ಆಪ್ ಒಳಗಿನಿಂದ ಎದುರಿಸುತ್ತಿರುವ ಗಂಭೀರ ಸವಾಲುಗಳನ್ನು ಸೂಚಿಸಿದ್ದಾರೆ. “ರಾಜಕೀಯ ಮಹತ್ವಾಕಾಂಕ್ಷೆಗಳು ಜನರ ಮೇಲಿನ ನಮ್ಮ ಬದ್ಧತೆಯನ್ನು ಹಿಂದಿಕ್ಕಿವೆ, ಅನೇಕ ಭರವಸೆಗಳನ್ನು ಈಡೇರಿಸಲಾಗಿಲ್ಲ. ಉದಾಹರಣೆಗೆ ಯಮುನಾವನ್ನು ತೆಗೆದುಕೊಳ್ಳಿ, ನಾವು ಶುದ್ಧ ನದಿಯಾಗಿ ಮಾರ್ಪಾಡು ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಆದರೆ, ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಈಗ ಯಮುನಾ ನದಿಯು ಹಿಂದಿಗಿಂತ ಹೆಚ್ಚು ಕಲುಷಿತವಾಗಿದೆ” ಎಂದು ಅವರು ಹೇಳಿದ್ದಾರೆ.

ಎಎಪಿ “ಸ್ವಂತ ರಾಜಕೀಯ ಕಾರ್ಯಸೂಚಿಗಾಗಿ ಹೋರಾಡುತ್ತಿದೆ” ಮತ್ತು ಇದು “ದೆಹಲಿಯ ಜನರಿಗೆ ಮೂಲಭೂತ ಸೇವೆಗಳನ್ನು ಒದಗಿಸುವ ನಮ್ಮ ಸಾಮರ್ಥ್ಯವನ್ನು ತೀವ್ರವಾಗಿ ದುರ್ಬಲಗೊಳಿಸಿದೆ” ಎಂದು ಗಹ್ಲೋಟ್ ಹೇಳಿದರು. “ದೆಹಲಿ ಸರ್ಕಾರವು ತನ್ನ ಬಹುಪಾಲು ಸಮಯವನ್ನು ಕೇಂದ್ರದೊಂದಿಗೆ ಹೋರಾಡಿದರೆ ದಿಲ್ಲಿಯ ನಿಜವಾದ ಪ್ರಗತಿ ಸಾಧ್ಯವಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಅವರು ಹೇಳಿದರು.

“ನಾನು ದೆಹಲಿಯ ಜನರಿಗೆ ಸೇವೆ ಸಲ್ಲಿಸುವ ಬದ್ಧತೆಯೊಂದಿಗೆ ನನ್ನ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ್ದೇನೆ. ನಾನು ಅದನ್ನು ಮುಂದುವರಿಸಲು ಬಯಸುತ್ತೇನೆ. ಅದಕ್ಕಾಗಿಯೇ, ನಾನು ಎಎಪಿಯಿಂದ ಹಿಂದೆ ಸರಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದೇನೆ ಮತ್ತು ಆದ್ದರಿಂದ ನಾನು ಆಪ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಆದ್ಮಿ ಪಕ್ಷವು ನಿಮ್ಮ ಆರೋಗ್ಯ ಮತ್ತು ಭವಿಷ್ಯಕ್ಕಾಗಿ ನಾನು ಶುಭ ಹಾರೈಸುತ್ತೇನೆ” ಎಂದು ಅವರು ಬರೆದಿದ್ದಾರೆ.

ಗೆಹ್ಲೋಟ್ ಅವರ ಘೋಷಣೆಗೆ ಬಿಜೆಪಿ ತಕ್ಷಣವೇ ಪ್ರತಿಕ್ರಿಯಿಸಿತು. “ಆಮ್ ಆದ್ಮಿ ಪಕ್ಷವು ಖಾಸ್ (ವಿಶೇಷ) ಆದ್ಮಿ ಪಕ್ಷವಾಗಿ ಹೇಗೆ ಮಾರ್ಪಟ್ಟಿದೆ” ಎಂದು ಗಹ್ಲೋಟ್ ವಿವರಿಸಿದ್ದಾರೆ ಎಂದು ಪಕ್ಷದ ವಕ್ತಾರ ಶೆಹಜಾದ್ ಪೂನವಾಲ್ಲಾ ಹೇಳಿದ್ದಾರೆ. “ಅವರು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಮುರಿದಿದ್ದಾರೆ. ಎಎಪಿ ಅರವಿಂದ್ ಆದ್ಮಿ ಪಕ್ಷವಾಗಿದೆ. ಅವರ ನಾಯಕ ಅವುಗಳನ್ನು ಬಹಿರಂಗಪಡಿಸಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ; ದೀರ್ಘ ಶ್ರೇಣಿಯ ಹೈಪರ್‌ಸಾನಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಡಿಆರ್‌ಡಿಒ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...