Homeಮುಖಪುಟಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!

ಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!

- Advertisement -
- Advertisement -

ಗುಂಡೇಟಿಗೊಳಗಾಗಿ ಮೃತಪಟ್ಟ ವ್ಯಕ್ತಿಯ ಶವ ಸರ್ಕಾರಿ ಆಸ್ಪತ್ರೆಯಲ್ಲಿ ಇದ್ದಾಗಲೆ ಒಂದು ಕಣ್ಣು ಕಾಣೆಯಾಗಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿದೆ. ವ್ಯಕ್ತಿಯು ಮೃತಪಟ್ಟ ಕೆಲವೆ ಗಂಟೆಗಳಲ್ಲಿ ಇದು ನಡೆದಿದ್ದು, ಮೃತ ಶರೀರದಿಂದ ಇಲಿಗಳು ಕಚ್ಚಿ ತೆಗೆದಿದೆ ಎಂದು ವೈದ್ಯರು ದೂಷಿಸಿದ್ದಾಗಿ ಹೇಳಿದ್ದು, ಕುಟುಂಬ ಸದಸ್ಯರು ವೈದ್ಯರ ನಿರ್ಲಕ್ಷ್ಯ ಎಂದು ಹೇಳಿದ್ದಾರೆ. ಬಿಹಾರ

ನವೆಂಬರ್ 15 ರಂದು ಅಪರಿಚಿತ ದುಷ್ಕರ್ಮಿಗಳಿಂದ ಗುಂಡೇಟಿಗೊಳಗಾಗಿ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (NMCH) ದಾಖಲಾಗಿದ್ದ ಫಂತುಷ್ ಕುಮಾರ್ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದರು. ರಾತ್ರಿ ಮರಣೋತ್ತರ ಪರೀಕ್ಷೆ ನಡೆಸಲು ಸಾಧ್ಯವಾಗದ ಕಾರಣ ಅವರ ಶವವನ್ನು ಐಸಿಯು ಬೆಡ್ ಮೇಲೆ ಇಡಲಾಗಿತ್ತು. ಶನಿವಾರ ಬೆಳಗ್ಗೆ ಶವ ಪರೀಕ್ಷೆ ನಡೆಸಲಾಗಿತ್ತು. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಮೃತದೇಹವನ್ನು ಶವಾಗಾರದಿಂದ ತರುತ್ತಿದ್ದಾಗ ಎಡಗಣ್ಣು ಕಾಣೆಯಾಗಿದ್ದು, ಶವದ ಪಕ್ಕದಲ್ಲಿ ಸ್ಟ್ರೆಚರ್ ಮೇಲೆ ಸರ್ಜಿಕಲ್ ಬ್ಲೇಡ್ ಬಿದ್ದಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಕುಟುಂಬಿಕರು ಆರೋಪಿಸಿದ್ದು, ಕೆಲವು ವೈದ್ಯರು ಇಲಿಗಳು ಕಣ್ಣನ್ನು ಕಚ್ಚಿರಬಹುದು ಎಂದು ಶಂಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಎಂಸಿಎಚ್ ವೈದ್ಯಕೀಯ ಅಧೀಕ್ಷಕ ಬಿನೋದ್ ಕುಮಾರ್ ಸಿಂಗ್, ಈ ಬಗ್ಗೆ ತನಿಖೆ ನಡೆಸಲು ವೈದ್ಯಕೀಯ ತಂಡವನ್ನು ರಚಿಸಲಾಗಿದೆ, ಇದು ಗಂಭೀರ ಸಮಸ್ಯೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

“ವೈದ್ಯರ ಗುಂಪು ಇಲಿಗಳು ಕಣ್ಣನ್ನು ಕಚ್ಚಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ತನಿಖೆ ಮಾಡಲಾಗುತ್ತಿದೆ. ನಾವು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ” ಎಂದು ಅವರು ಹೇಳಿದರು.

“ಕಣ್ಣು ಹೇಗೆ ಹೋಗಿದೆ ಎಂಬುದು ಶವಪರೀಕ್ಷೆ ವರದಿ ಬಂದ ನಂತರವಷ್ಟೇ ತಿಳಿಯಬಹುದು. ಈ ಬಗ್ಗೆ ಆಸ್ಪತ್ರೆ ಆಡಳಿತವು ಅಲಂಗಂಜ್ ಪೊಲೀಸ್ ಠಾಣೆಗೆ ಔಪಚಾರಿಕ ದೂರು ಸಲ್ಲಿಸಿದೆ” ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಭಾನುವಾರ ಪಿಟಿಐ ಜೊತೆ ಮಾತನಾಡಿದ ಅಲಂಗಂಜ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜೀವ್ ಕುಮಾರ್, “ಆಸ್ಪತ್ರೆ ಆಡಳಿತ ಮಂಡಳಿ ನೀಡಿದ ಔಪಚಾರಿಕ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಾವು ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ. ಜೊತೆಗೆ, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಿಂದ ಸ್ಪಷ್ಟೀಕರಣವನ್ನು ಕೋರಿದ್ದೇವೆ. ನಾವು ಮೃತರ ಕುಟುಂಬ ಸದಸ್ಯರನ್ನು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತೇವೆ” ಎಂದು ಹೇಳಿದ್ದಾರೆ. ಮೃತರ ಕುಟುಂಬಸ್ಥರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...