Homeಮುಖಪುಟಜಾರ್ಖಂಡ್ | ಸಿಎಂ ಸೊರೇನ್ ವಿರುದ್ಧ ನಿಂದನೆ; ಬಿಜೆಪಿಯ ಶ್ಯಾಡೊ ಖಾತೆಗಳ ವಿರುದ್ಧ ಎಫ್‌ಐಆರ್

ಜಾರ್ಖಂಡ್ | ಸಿಎಂ ಸೊರೇನ್ ವಿರುದ್ಧ ನಿಂದನೆ; ಬಿಜೆಪಿಯ ಶ್ಯಾಡೊ ಖಾತೆಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ರಾಜ್ಯವನ್ನು ನಿಂದಿಸಿದ ಆರೋಪದ ಮೇಲೆ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ಅಪರಿಚಿತ ಆಪರೇಟರ್‌ಗಳ ವಿರುದ್ಧ ರಾಜ್ಯದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಮುಖ್ಯಮಂತ್ರಿಯ ಪ್ರತಿಷ್ಠೆಗೆ ಹಾನಿ ತರಲು ಬಿಜೆಪಿಯು ತನ್ನ ಬೆಂಬಲಿಗ “ಶ್ಯಾಡೋ ಖಾತೆಗಳನ್ನು” ನಡೆಸುತ್ತಿದೆ ಎಂದು ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಆರೋಪಿಸಿದ ನಂತರ ಕನಿಷ್ಠ ಎರಡು ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್

“ಸಿಎಂ ಮತ್ತು ರಾಜ್ಯದ ವಿರುದ್ಧ ಅಪ್ರಚಾರ ನಡೆಸಿದ್ದಕ್ಕಾಗಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಸೆಂಬ್ಲಿ ಚುನಾವಣೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಖಾತೆಗಳಿಂದ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮೂಲ ಕಂಪನಿಯಾದ ಮೆಟಾವನ್ನು ಪೊಲೀಸರು ಕೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಖಾತೆಗಳನ್ನು ನಿರ್ವಹಿಸುವ ವ್ಯಕ್ತಿಗಳ ಬಗ್ಗೆಯೂ ಅವರು ಮಾಹಿತಿ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೊದಲ ಎರಡು ಪ್ರಕರಣಗಳು ನವೆಂಬರ್ 8 ರಂದು ರಾಂಚಿಯ ಗೊಂಡಾ ಮತ್ತು ರಾತು ಪೊಲೀಸ್ ಠಾಣೆಗಳಲ್ಲಿ “ರಾಂಚಿ ಚೌಪಾಲ್” ಪುಟದ ವಿರುದ್ಧ ದಾಖಲಾಗಿದ್ದರೆ, ರಾಂಚಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ “ಜಾರ್ಖಂಡ್ ಚೌಪಾಲ್” ಪುಟದ ವಿರುದ್ಧ ಮೂರನೇ ಪ್ರಕರಣವನ್ನು ಬುಧವಾರ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್

ಚುನಾವಣೆಗೆ ಸಂಬಂಧಿಸಿದ ಸುಳ್ಳು ಹೇಳಿಕೆಗಳು ಮತ್ತು ಫೋರ್ಜರಿಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳು ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಸಹ ಈ ಪ್ರಕರಣಗಳಿಗೆ ಅನ್ವಯಿಸಿದ್ದಾರೆ ಎಂದು ವರದಿಯಾಗಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಮೊದಲನೆಯ ಮತದಾನ ನವೆಂಬರ್ 13 ನಡೆದಿದ್ದು, ಎರಡನೆಯ ಹಂತದ ಮತದಾನ ನವೆಂಬರ್ 20 ರಂದು ಮುಕ್ತಾಯಗೊಳ್ಳಲಿದೆ. ಮಹಾರಾಷ್ಟ್ರ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಒಕ್ಕೂಟವನ್ನು ಗುರಿಯಾಗಿಸಲು ಬಿಜೆಪಿಯು ಸಾಮಾಜಿಕ ಮಾಧ್ಯಮ ಪ್ರಚಾರಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿದ್ದು, 95,000 ವಾಟ್ಸಾಪ್ ಗುಂಪುಗಳನ್ನು ರಚಿಸಿದೆ ಎಂದು ಸೋರೆನ್ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ನಾವು ಶ್ಯಾಡೊ ಖಾತೆಗಳ ಮೂಲಕ ಪ್ರಚಾರ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಗಳ ವಿರುದ್ಧ ರಾಂಚಿಯ ಗೊಂಡಾ ಮತ್ತು ರತು ಪೊಲೀಸ್ ಠಾಣೆಗಳಲ್ಲಿ ಎರಡು ದೂರುಗಳನ್ನು ದಾಖಲಿಸಿದ್ದೇವೆ” ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ ವಕ್ತಾರ ವಿನೋದ್ ಪಾಂಡೆ ಪಿಟಿಐಗೆ ತಿಳಿಸಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದಿಂದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕೆ. ರವಿಕುಮಾರ್ ಅವರು ದೂರನ್ನು ಸ್ವೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯನ್ನು ಟೀಕಿಸಿರುವ ಸಿಎಂ ಸೊರೆನ್, “ಸರ್ವಾಧಿಕಾರಿಗಳು ಶತಕೋಟಿ ರೂಪಾಯಿಗಳನ್ನು ಹೊಂದಿರಬಹುದು. ಆದರೆ, ಅನ್ಯಾಯ ವಿಧಾನಗಳ ಮೂಲಕ ಗೆಲ್ಲುವ ಬದಲು ಸಿದ್ದಾಂತಗಳಿಗೆ ಅಂಟಿಕೊಳ್ಳುವುದು ಉತ್ತಮ. ನಾನು ನಿಮಗೆ ಒಂದು ಪ್ರಮುಖ ವರದಿಯನ್ನು ಪ್ರಸ್ತುತಪಡಿಸಲು ಬಯಸುತ್ತೇನೆ. ಶ್ಯಾಡೊ ಖಾತೆಗಳ ಮೂಲಕ ಅಪ್ರಚಾರ ಮಾಡುವ ಮೂಲಕ ನನ್ನ ಮತ್ತು ರಾಜ್ಯದ ಇಮೇಜ್‌ಗೆ ಹಾನಿ ಮಾಡಲು ಬಿಜೆಪಿಯು ಫೇಸ್‌ಬುಕ್ ಜಾಹೀರಾತುಗಳಿಗೆ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ” ಎಂದು ಹೇಳಿದ್ದಾರೆ.

‘ಜಾರ್ಖಂಡ್ ಚೌಪಾಲ್’ ಮತ್ತು ‘ರಾಂಚಿ ಚೌಪಾಲ್’ ನಂತಹ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಅಪಪ್ರಚಾರ ಮಾಡಲು ಕಳೆದ 30 ದಿನಗಳಲ್ಲಿ 72 ಲಕ್ಷ ರೂಪಾಯಿಗಳನ್ನು ಜಾಹೀರಾತುಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಈ ಪುಟಗಳ ವಿಷಯವನ್ನು ನೀವು ನೋಡಿದರೆ, ಅವರ ಏಕೈಕ ಉದ್ದೇಶ ನನ್ನ ಮತ್ತು ರಾಜ್ಯದ ಪ್ರತಿಷ್ಠೆಯನ್ನು ಹಾಳುಮಾಡುವುದು. ಧಾರ್ಮಿಕ ದ್ವೇಷವನ್ನು ಹರಡುವುದು ಮತ್ತು ಜನರು ತಮ್ಮೊಳಗೆ ಜಗಳವಾಡುವಂತೆ ಮಾಡುವುದು” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ನನ್ನ ಪ್ರತಿಷ್ಠೆಯನ್ನು ಹಾಳುಮಾಡಲು ಕೋಟಿಗಟ್ಟಲೆ ಖರ್ಚು ಮಾಡಿದ್ದರೂ, ನಾನು ಯಾವುದೇ ಪ್ರಚಾರಕ್ಕಾಗಿ ಒಂದು ರೂಪಾಯಿಯನ್ನು ಖರ್ಚು ಮಾಡಿಲ್ಲ. ನೀವು ಯಾವುದೇ ಸಾಮಾಜಿಕ ಮಾಧ್ಯಮದ ಜಾಹೀರಾತು ಲೈಬ್ರರಿಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು” ಎಂದು ಸೋರೆನ್ ಹೇಳಿದ್ದಾರೆ. ಅದಾಗ್ಯೂ, ಸೋರೆನ್ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.

ಇದನ್ನೂ ಓದಿ: ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...