Homeಕರ್ನಾಟಕಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ | ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮದ ಸುಳಿವು ನೀಡಿದ...

ಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ | ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮದ ಸುಳಿವು ನೀಡಿದ ಡಿಸಿಎಂ ಶಿವಕುಮಾರ್

- Advertisement -
- Advertisement -

ಕೇಂದ್ರ ಸಚಿವ ಹಾಗೂ ರಾಜ್ಯ ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ‘ಜನಾಂಗೀಯ’ ಹೇಳಿಕೆ ನೀಡಿದ್ದ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಶನಿವಾರ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದಾರೆ. ಕುಮಾರಸ್ವಾಮಿ ವಿರುದ್ಧ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, “ಜಮೀರ್ ಹೇಳಿದ್ದು ತಪ್ಪು. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥನಾಗಿ ನಾನು ಇದನ್ನು ಹೇಳುತ್ತಿದ್ದೇನೆ. ಅವರ ತಪ್ಪುಗಳನ್ನು ತಿದ್ದಿಕೊಳ್ಳಲು ಹೇಳಿದ್ದೆ. ಅವರು ಕ್ಷಮೆಯಾಚಿಸಿದ್ದಾರೆ” ಎಂದು ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ಜಮೀರ್ ಖಾನ್ ಅವರು ಕುಮಾರಸ್ವಾಮಿ ಅವರನ್ನು “ಕಾಳಾ” ಮತ್ತು “ಕಾಲಿಯಾ” (ಕಪ್ಪು ಚರ್ಮದ ವ್ಯಕ್ತಿ) ಎಂದು ಸಂಬೋಧಿಸಿದ್ದರು. ಮುಸ್ಲಿಂ ಸಮುದಾಯದಿಂದ ಹಣ ಸಂಗ್ರಹಿಸಿ ಗೌಡರ ಕುಟುಂಬವನ್ನು ಖರೀದಿಸುವುದಾಗಿಯೂ ಹೇಳಿದ್ದರು.

ಕುಮಾರಸ್ವಾಮಿ ವಿರುದ್ಧ ಜಮೀರ್ ದಾಳಿ ನಡೆಸಿರುವುದು ವೈಯಕ್ತಿಕ ವಿಚಾರ. ಆದರೆ ಜಮೀರ್ ಬಣ್ಣ ಮತ್ತು ದೇವೇಗೌಡರ ಕುಟುಂಬವನ್ನು ಖರೀದಿಸುವ ಬಗ್ಗೆ ಮಾತನಾಡಬಾರದಿತ್ತು. ಜಮೀರ್ ಹೇಳಿಕೆ ತಪ್ಪು ಎಂದು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಜಮೀರ್ ಆ ಮಟ್ಟಿಗೆ ಹೋಗಬಾರದಿತ್ತು ಎಂದು ಹೇಳಿದ್ದಾರೆ.

ಅವರ ತಪ್ಪುಗಳನ್ನು ಸರಿಪಡಿಸಿಕೊಳ್ಳುವಂತೆ ವೈಯಕ್ತಿಕವಾಗಿ ಸಲಹೆ ನೀಡಿದ್ದು, ಕ್ಷಮೆಯಾಚಿಸಿದ್ದಾರೆ. ಆದರೆ ಅವರ ವಿರುದ್ಧ ಯಾವ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಅವರನ್ನು ಸರಿಪಡಿಸಲಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ. ಜಮೀರ್ ಅವರು ಹೇಳಿಕೊಳ್ಳುವಂತೆ, ಪ್ರೀತಿಯಿಂದ ಕೂಡ ಅಂತಹ ಟೀಕೆಗಳನ್ನು ಮಾಡಬಾರದಿತ್ತು ಎಂದು ಶಿವಕುಮಾರ್ ಪ್ರತಿಪಾದಿಸಿದ್ದಾರೆ.

ಇದೇ ವೇಳೆ, ಶಿವಕುಮಾರ್ ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ಜಮೀರ್ ಅವರು ಈ ಹಿಂದೆ ಜೆಡಿಎಸ್‌ನಲ್ಲಿದ್ದಾಗ ಇಬ್ಬರೂ ತುಂಬಾ ಆತ್ಮೀಯರಾಗಿದ್ದರು. ಹಾಗಾಗಿ ಅವರು ಕುಮಾರಸ್ವಾಮಿ ಅವರನ್ನು ಪ್ರೀತಿಯಿಂದ ಸಂಬೋಧಿಸಿರಬಹುದು ಎಂದು ಹೇಳಿದ್ದಾರೆ.

ಜಮೀರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಶುಕ್ರವಾರ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. “ಚನ್ನಪಟ್ಟಣ ಉಪಚುನಾವಣೆ ವೇಳೆ ಝಮೀರ್ ನೀಡಿದ ಹೇಳಿಕೆ ಪಕ್ಷಕ್ಕೆ ದಕ್ಕೆ ತಂದಿರುವುದು ಸ್ಪಷ್ಟವಾಗಿದೆ. ಪಕ್ಷದ ಹಿನ್ನಡೆಗೆ ಜಮೀರ್ ಬೆಲೆ ತೆರಬೇಕಾಗುತ್ತದೆ. ಅವರು ರಾಜಕೀಯ ಪ್ರಬುದ್ಧತೆಯನ್ನು ಕಳೆದುಕೊಂಡಿರುವುದರಿಂದ, ಪಕ್ಷವು ಅವರನ್ನು ಮುಖ್ಯವಾಹಿನಿಯ ನಾಯಕ ಎಂದು ಬಿಂಬಿಸಬಾರದು” ಎಂದು ಹುಸೇನ್ ಹೇಳಿದ್ದಾರೆ.

ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಮೇಲೆ ಜಮೀರ್ ಹೇಳಿಕೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೀಶ್ವರ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಯೋಗೇಶ್ವರ್, ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...