Homeಮುಖಪುಟಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

ಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

- Advertisement -
- Advertisement -

ನವೆಂಬರ್ 16ರ ಶನಿವಾರದಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಆಯೋಜಿಸಿದ್ದ ಲಿಂಗ ಸಮಾನತೆ ಪರ ಮೆರವಣಿಗೆಗೆ ಟ್ರಾಫಿಕ್ ಅಡೆತಡೆಗಳನ್ನು ಉಲ್ಲೇಖಿಸಿ ಚೆನ್ನೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಲಿಂಗ ತಟಸ್ಥ ಸಮಾಜದ ಮಹತ್ವವನ್ನು ಒತ್ತಿಹೇಳಲು ಸಿಪಿಐ(ಎಂ) ರಾತ್ರಿ 10 ಗಂಟೆಗೆ ಅಣ್ಣಾ ಸಲೈನಲ್ಲಿರುವ ಪೆರಿಯಾರ್ ಪ್ರತಿಮೆಯಿಂದ ಮರೀನಾ ಬೀಚ್‌ನಲ್ಲಿರುವ ಕಾರ್ಮಿಕ ಪ್ರತಿಮೆಯವರೆಗೆ ಮಧ್ಯರಾತ್ರಿ ರ್ಯಾಲಿಯನ್ನು ಆಯೋಜಿಸಿತ್ತು. 2022ರಲ್ಲಿ ಕೂಡಾ ಸಿಪಿಐ(ಎಂ) ‘ರಾತ್ರಿ ನಮ್ಮದು’ ಎಂಬ ವಿಷಯದೊಂದಿಗೆ ಇದೇ ರೀತಿಯ ರ‍್ಯಾಲಿಯನ್ನು ನಡೆಸಿತ್ತು. ಸಿಪಿಐ(ಎಂ)ನ

ನವೆಂಬರ್ 16ರ ಶನಿವಾರ, ತಮಿಳುನಾಡು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಅಧ್ಯಕ್ಷ ಎ ಸೌಂದರಾಜನ್ ಮತ್ತು ನಟಿ ರೋಹಿಣಿ ಮೊಲ್ಲೇಟಿ ಅವರು ಪೆರಿಯಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಸಿಪಿಐ(ಎಂ) ಸೆಂಟ್ರಲ್ ಚೆನ್ನೈ ಕಾರ್ಯದರ್ಶಿ ಜಿ. ಸೆಲ್ವಾ ಅವರು ಲಿಂಗ ಸಮಾನತೆ ನಡಿಗೆಗೆ ಅನುಮತಿ ಕೋರಿದ್ದರು, ಆದರೆ ಚೆನ್ನೈ ಪೊಲೀಸರು ಅದಕ್ಕೆ ನಿರಾಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಲಿಂಗ ಸಮಾನತೆ ನಡಿಗೆಗಾಗಿ ಅರ್ಜಿದಾರರು ಅನುಮತಿ ಕೋರಿರುವ ಮಾರ್ಗವು ಅನುಮೋದಿತ ಮಾರ್ಗವಲ್ಲ. ವಾಹನ ದಟ್ಟಣೆ ಹೆಚ್ಚಿರುವ ಪ್ರಮುಖ ರಸ್ತೆಯಾಗಿರುವ ಈ ಮಾರ್ಗದಲ್ಲಿ ಅರ್ಜಿದಾರರು ಕೋರಿರುವ ಲಿಂಗ ಸಮಾನತೆ ನಡಿಗೆಗೆ ಅನುಮತಿ ನೀಡಿದರೆ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ರಾತ್ರಿ ವೇಳೆ ಪಾದಯಾತ್ರೆ ನಡೆಸಿದರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರಿಗೆ ತಿಳಿಸಲಾಗಿದೆ” ಎಂದು ಪೊಲೀಸ್ ಆದೇಶದಲ್ಲಿ ತಿಳಿಸಲಾಗಿದೆ. ಸಿಪಿಐ(ಎಂ)ನ

ಆದಾಗ್ಯೂ, ಸಿಪಿಐಎಂ ರ‍್ಯಾಲಿಯನ್ನು ಕೈಬಿಟ್ಟು ಅಣ್ಣಾ ಸಲೈನಲ್ಲಿ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ನೂರಾರು ಜನರು ಸೇರಿದ್ದರು ಎಂದು ವರದಿಯಾಗಿದೆ. ಸಭೆಯಲ್ಲಿ ಕ್ರಾಂತಿಗೀತೆಗಳನ್ನು ಹಾಡಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ರ‍್ಯಾಲಿಗೆ ಏಕೆ ಅನುಮತಿ ನಿರಾಕರಿಸಲಾಯಿತು ಎಂಬ ಪ್ರಶ್ನೆಗೆ ತಮಿಳುನಾಡು ಸರ್ಕಾರ ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಉತ್ತರಿಸಬೇಕು ಎಂದು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸೆಂಟ್ರಲ್ ಚೆನ್ನೈ ಸದಸ್ಯ ನಿಖಿಲ್ ದೇವ್ ಹೇಳಿದ್ದಾರೆ.

“ಇದೇ ಚೆನ್ನೈನಲ್ಲಿ, ಹ್ಯಾಪಿ ಸ್ಟ್ರೀಟ್ಸ್ ಕಾರ್ಯಕ್ರಮವನ್ನು ನಡೆಸಲಾಯಿತು, ಆದರೆ ಪೊಲೀಸರು ಅದಕ್ಕೆ ಅನುಮತಿ ನಿರಾಕರಣೆ ಮಾಡಿಲ್ಲ. ರಾತ್ರಿಯಲ್ಲಿ ಸಾಕಷ್ಟು ರೆಸ್ಟೋರೆಂಟ್‌ಗಳು ತೆರೆದಿರುತ್ತವೆ, ಹಾಗಾಗಿ ಮೌಂಟ್ ರೋಡ್‌ನಲ್ಲಿ ಭಾರಿ ದಟ್ಟಣೆಯನ್ನು ಉಂಟಾಗುತ್ತದೆ. ಪೊಲೀಸರು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ಆದರೆ ಸಿಪಿಐ(ಎಂ) ಕಾರ್ಯಕ್ರಮ ಆಯೋಜಿಸಿದರೆ ಅದನ್ನು ನಿರಾಕರಿಸುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಪೆರಿಯಾರ್ ಸಿದ್ಧಾಂತವನ್ನು ಅನುಸರಿಸುತ್ತಿದೆ, ಆದರೂ ಕೂಡಾ ಅನುಮತಿ ನಿರಾಕರಿಸಲಾಗಿದ್ದು ಏಕೆ ಎಂದು ನಿಖಿಲ್ ಪ್ರಶ್ನಿಸಿದ್ದಾರೆ. “ಈ ಮೆರವಣಿಗೆ ಸಾಮಾನ್ಯ ಕಾರಣಕ್ಕಾಗಿ ನಡೆಯುತ್ತಿದೆ. ಸಮಾಜದಲ್ಲಿ ಲಿಂಗ ರಾಜಕೀಯವು ಬಹಳ ಮುಖ್ಯವಾಗಿದ್ದು, ಅಲ್ಲಿ ಮಹಿಳೆಯರು ಮತ್ತು ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳನ್ನು ಸರಿಯಾಗಿ ನಡೆಸಿಕೊಳ್ಳಲಾಗುತ್ತಿಲ್ಲ. ಮಹಿಳೆಯರ ಮೇಲೆ ಅಪರಾಧಗಳು ಮತ್ತು ದೌರ್ಜನ್ಯಗಳು ನಡೆಯುತ್ತಿವೆ. ರಾಜಕೀಯ ಪಕ್ಷವಾಗಿ, ನಾವು ರಾತ್ರಿ ಎಲ್ಲರಿಗೂ ಎಂದು ಸಮಾಜಕ್ಕೆ ನೆನಪಿಸಲು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...