Homeಮುಖಪುಟ'ಅತ್ಯಂತ ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ...

‘ಅತ್ಯಂತ ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ ಮಕ್ಕಳಿಗೆ ಅನ್‌ಲೈನ್‌ ತರಗತಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ‘ಅತ್ಯಂತ ಗಂಭೀರ’ ಮಟ್ಟಕ್ಕೆ ತಲುಪಿದ್ದು, ಜನರು ವಾಸಿಸಲು ಯೋಗ್ಯವಲ್ಲದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ, ಭಾನುವಾರದಿಂದ (ನ.17) ಟ್ರಕ್‌ಗಳು ನಗರ ಪ್ರವೇಶಿಸುವುದನ್ನು ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳನ್ನು ತಾತ್ಕಾಲಿಕ ನಿಷೇಧಿಸಲಾಗಿದೆ.

10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು ಮುಂದಿನ ಆದೇಶದವರೆಗೆ ಆನ್‌ಲೈನ್‌ ಮೂಲಕ ನಡೆಯಲಿದೆ ಎಂದು ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳ ಪ್ರಕಾರ, ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೈನಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಅಥವಾ ಎಕ್ಯೂಐ 484 ರಷ್ಟಿತ್ತು. ಭಾನುವಾರ ಸಂಜೆ 4 ಗಂಟೆ ಹೊತ್ತಿಗೆ ಈ ಮಟ್ಟ 441 ಮತ್ತು 7 ಗಂಟೆಯ ಹೊತ್ತಿಗೆ 457 ಆಗಿತ್ತು.

ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ, ಗಾಳಿಯ ಸೂಚ್ಯಂಕ 0 ಯಿಂದ 50 ರ ನಡುವೆ ಇದ್ದರೆ ‘ಉತ್ತಮ ಗುಣಮಟ್ಟ’, 51 ರಿಂದ 100ರ ನಡುವೆ ಇದ್ದರೆ ‘ತೃಪ್ತಿದಾಯಕ ಗುಣಮಟ್ಟ’, 101 ರಿಂದ 200ರ ನಡುವೆ ಇದ್ದರೆ ‘ಮಧ್ಯಮ ಗುಣಮಟ್ಟ’, 201 ರಿಂದ 300 ರ ನಡುವೆಯಿದ್ದರೆ ‘ಕಳಪೆ ಗುಣಮಟ್ಟ’, 301 ರಿಂದ 400ರ ನಡುವೆಯಿದ್ದರೆ ‘ಅತ್ಯಂತ ಕಳಪೆ ಗುಣಮಟ್ಟ. ಆದರೆ, ದೆಹಲಿಯ ಗಾಳಿಯ ಸೂಚ್ಯಂಕ 500ರ ಸನಿಹ ತಲುಪಿದೆ. ಇದರಿಂದ ಮಾಲಿನ್ಯದ ಪ್ರಮಾಣ ಅರ್ಥೈಸಬಹುದು.

ಗಾಳಿಯ ಸೂಚ್ಯಂಕ 401 ರಿಂದ 450ರ ನಡುವೆಯಿದ್ದರೆ ‘ತೀವ್ರ ಕಳಪೆ ಗುಣಮಟ್ಟ’ವನ್ನು ಸೂಚಿಸುತ್ತದೆ. ಇನ್ನು 450ರ ಮಿತಿಗಿಂತ ಹೆಚ್ಚಿದ್ದರೆ, ‘ತೀವ್ರ ಪ್ಲಸ್’ ಎಂದು ಕರೆಯಲಾಗುತ್ತದೆ. ಈ ಹಂತಗಳಲ್ಲಿ, ಆರೋಗ್ಯವಂತ ಜನರು ವಾಯು ಮಾಲಿನ್ಯಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಕಾಯಿಲೆಗಳನ್ನು ಉಂಟಾಗುತ್ತದೆ.

ಏರುತ್ತಿರುವ ವಾಯು ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ (ಎನ್‌ಸಿಆರ್‌) ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು ಸೋಮವಾರದಿಂದ ‘ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್’ ಅಥವಾ GRAPಯ ಹಂತ 4ರ ಅನುಷ್ಠಾನಕ್ಕೆ ಆದೇಶ ನೀಡಿದೆ.

GRAP ಎಂಬುವುದು ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ಕೈಗೊಳ್ಳುವ ಕ್ರಮಗಳ ಒಂದು ಗುಂಪಾಗಿದೆ. ಇದರ ಅನುಷ್ಠಾನದ ಮೂಲಕ ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ ಮಟ್ಟವನ್ನು ಮತಷ್ಟು ಹೆಚ್ಚಾಗದಂತೆ ತಡೆಯಲು ಪ್ರಯತ್ನಿಸಲಾಗುತ್ತದೆ. ಈ ಕ್ರಮಗಳಲ್ಲಿ ಲಾಕ್‌ಡೌನ್‌ನಂತಹ ಕಠಿಣ ಆದೇಶಗಳೂ ಒಳಗೊಂಡಿವೆ.

ಗಾಳಿಯ ಗುಣಮಟ್ಟ ಕಳಪೆಯಾದರೆ, GRAPಯ 1ನೇ ಹಂತವನ್ನು ಜಾರಿಗೆ ತರಲಾಗುತ್ತದೆ. ಅತ್ಯಂತ ಕಳೆಪೆಯಾದರೆ ಮತ್ತು ತೀವ್ರ ಕಳಪೆ ಪ್ಲಸ್ ಆದರೆ, ಎರಡು, ಮೂರು ಮತ್ತು 4ನೇ ಹಂತಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ.

ಅಗತ್ಯ ವಸ್ತುಗಳನ್ನು ಸಾಗಿಸುವ ಮತ್ತು ಶುದ್ಧ ಇಂಧನವನ್ನು ಬಳಸುವ ಟ್ರಕ್‌ಗಳನ್ನು ಹೊರತುಪಡಿಸಿ, ಇತರ ಟ್ರಕ್‌ಗಳ ನಗರ ಪ್ರವೇಶವನ್ನು ದೆಹಲಿ ಸರ್ಕಾರ ತಾತ್ಕಾಲಿಕ ನಿಷೇಧಿಸಿದೆ. ಶಾಲಾ ತರಗತಿಗಳು ಆನ್‌ಲೈನ್‌ ಮೂಲಕ ನಡೆಸುವಂತೆ ಮತ್ತು ಕಚೇರಿಗಳು ಶೇ.50 ಸಾಮಾರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ. ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್‌ ಅವಕಾಶ ನೀಡುವಂತೆ ಸೂಚಿಸಿದೆ.

ಎಲೆಕ್ಟ್ರಿಕ್, ಸಿಎನ್‌ಜಿ ಮತ್ತು ಬಿಎಸ್‌-VI ಹೊರತುಪಡಿಸಿ, ದೆಹಲಿಯ ಹೊರಗಿನ ನೋಂದಣಿ ಹೊಂದಿರುವ
ಅನಿವಾರ್ಯವಲ್ಲದ ಲಘು ವಾಣಿಜ್ಯ ವಾಹನಗಳ ನಗರ ಪ್ರವೇಶವನ್ನೂ ನಿಷೇಧಿಸಲಾಗುವುದು” ಎಂದು ಸರ್ಕಾರ ಹೇಳಿದೆ.

ಮಕ್ಕಳು, ವೃದ್ಧರು ಮತ್ತು ಉಸಿರಾಟ ಅಥವಾ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಲು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಇರಲು ಮನವಿ ಮಾಡಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...