Homeಮುಖಪುಟ'ಅತ್ಯಂತ ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ...

‘ಅತ್ಯಂತ ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ ಮಕ್ಕಳಿಗೆ ಅನ್‌ಲೈನ್‌ ತರಗತಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ‘ಅತ್ಯಂತ ಗಂಭೀರ’ ಮಟ್ಟಕ್ಕೆ ತಲುಪಿದ್ದು, ಜನರು ವಾಸಿಸಲು ಯೋಗ್ಯವಲ್ಲದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ, ಭಾನುವಾರದಿಂದ (ನ.17) ಟ್ರಕ್‌ಗಳು ನಗರ ಪ್ರವೇಶಿಸುವುದನ್ನು ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳನ್ನು ತಾತ್ಕಾಲಿಕ ನಿಷೇಧಿಸಲಾಗಿದೆ.

10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು ಮುಂದಿನ ಆದೇಶದವರೆಗೆ ಆನ್‌ಲೈನ್‌ ಮೂಲಕ ನಡೆಯಲಿದೆ ಎಂದು ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳ ಪ್ರಕಾರ, ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೈನಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಅಥವಾ ಎಕ್ಯೂಐ 484 ರಷ್ಟಿತ್ತು. ಭಾನುವಾರ ಸಂಜೆ 4 ಗಂಟೆ ಹೊತ್ತಿಗೆ ಈ ಮಟ್ಟ 441 ಮತ್ತು 7 ಗಂಟೆಯ ಹೊತ್ತಿಗೆ 457 ಆಗಿತ್ತು.

ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ, ಗಾಳಿಯ ಸೂಚ್ಯಂಕ 0 ಯಿಂದ 50 ರ ನಡುವೆ ಇದ್ದರೆ ‘ಉತ್ತಮ ಗುಣಮಟ್ಟ’, 51 ರಿಂದ 100ರ ನಡುವೆ ಇದ್ದರೆ ‘ತೃಪ್ತಿದಾಯಕ ಗುಣಮಟ್ಟ’, 101 ರಿಂದ 200ರ ನಡುವೆ ಇದ್ದರೆ ‘ಮಧ್ಯಮ ಗುಣಮಟ್ಟ’, 201 ರಿಂದ 300 ರ ನಡುವೆಯಿದ್ದರೆ ‘ಕಳಪೆ ಗುಣಮಟ್ಟ’, 301 ರಿಂದ 400ರ ನಡುವೆಯಿದ್ದರೆ ‘ಅತ್ಯಂತ ಕಳಪೆ ಗುಣಮಟ್ಟ. ಆದರೆ, ದೆಹಲಿಯ ಗಾಳಿಯ ಸೂಚ್ಯಂಕ 500ರ ಸನಿಹ ತಲುಪಿದೆ. ಇದರಿಂದ ಮಾಲಿನ್ಯದ ಪ್ರಮಾಣ ಅರ್ಥೈಸಬಹುದು.

ಗಾಳಿಯ ಸೂಚ್ಯಂಕ 401 ರಿಂದ 450ರ ನಡುವೆಯಿದ್ದರೆ ‘ತೀವ್ರ ಕಳಪೆ ಗುಣಮಟ್ಟ’ವನ್ನು ಸೂಚಿಸುತ್ತದೆ. ಇನ್ನು 450ರ ಮಿತಿಗಿಂತ ಹೆಚ್ಚಿದ್ದರೆ, ‘ತೀವ್ರ ಪ್ಲಸ್’ ಎಂದು ಕರೆಯಲಾಗುತ್ತದೆ. ಈ ಹಂತಗಳಲ್ಲಿ, ಆರೋಗ್ಯವಂತ ಜನರು ವಾಯು ಮಾಲಿನ್ಯಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಕಾಯಿಲೆಗಳನ್ನು ಉಂಟಾಗುತ್ತದೆ.

ಏರುತ್ತಿರುವ ವಾಯು ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ (ಎನ್‌ಸಿಆರ್‌) ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು ಸೋಮವಾರದಿಂದ ‘ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್’ ಅಥವಾ GRAPಯ ಹಂತ 4ರ ಅನುಷ್ಠಾನಕ್ಕೆ ಆದೇಶ ನೀಡಿದೆ.

GRAP ಎಂಬುವುದು ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ಕೈಗೊಳ್ಳುವ ಕ್ರಮಗಳ ಒಂದು ಗುಂಪಾಗಿದೆ. ಇದರ ಅನುಷ್ಠಾನದ ಮೂಲಕ ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ ಮಟ್ಟವನ್ನು ಮತಷ್ಟು ಹೆಚ್ಚಾಗದಂತೆ ತಡೆಯಲು ಪ್ರಯತ್ನಿಸಲಾಗುತ್ತದೆ. ಈ ಕ್ರಮಗಳಲ್ಲಿ ಲಾಕ್‌ಡೌನ್‌ನಂತಹ ಕಠಿಣ ಆದೇಶಗಳೂ ಒಳಗೊಂಡಿವೆ.

ಗಾಳಿಯ ಗುಣಮಟ್ಟ ಕಳಪೆಯಾದರೆ, GRAPಯ 1ನೇ ಹಂತವನ್ನು ಜಾರಿಗೆ ತರಲಾಗುತ್ತದೆ. ಅತ್ಯಂತ ಕಳೆಪೆಯಾದರೆ ಮತ್ತು ತೀವ್ರ ಕಳಪೆ ಪ್ಲಸ್ ಆದರೆ, ಎರಡು, ಮೂರು ಮತ್ತು 4ನೇ ಹಂತಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ.

ಅಗತ್ಯ ವಸ್ತುಗಳನ್ನು ಸಾಗಿಸುವ ಮತ್ತು ಶುದ್ಧ ಇಂಧನವನ್ನು ಬಳಸುವ ಟ್ರಕ್‌ಗಳನ್ನು ಹೊರತುಪಡಿಸಿ, ಇತರ ಟ್ರಕ್‌ಗಳ ನಗರ ಪ್ರವೇಶವನ್ನು ದೆಹಲಿ ಸರ್ಕಾರ ತಾತ್ಕಾಲಿಕ ನಿಷೇಧಿಸಿದೆ. ಶಾಲಾ ತರಗತಿಗಳು ಆನ್‌ಲೈನ್‌ ಮೂಲಕ ನಡೆಸುವಂತೆ ಮತ್ತು ಕಚೇರಿಗಳು ಶೇ.50 ಸಾಮಾರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ. ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್‌ ಅವಕಾಶ ನೀಡುವಂತೆ ಸೂಚಿಸಿದೆ.

ಎಲೆಕ್ಟ್ರಿಕ್, ಸಿಎನ್‌ಜಿ ಮತ್ತು ಬಿಎಸ್‌-VI ಹೊರತುಪಡಿಸಿ, ದೆಹಲಿಯ ಹೊರಗಿನ ನೋಂದಣಿ ಹೊಂದಿರುವ
ಅನಿವಾರ್ಯವಲ್ಲದ ಲಘು ವಾಣಿಜ್ಯ ವಾಹನಗಳ ನಗರ ಪ್ರವೇಶವನ್ನೂ ನಿಷೇಧಿಸಲಾಗುವುದು” ಎಂದು ಸರ್ಕಾರ ಹೇಳಿದೆ.

ಮಕ್ಕಳು, ವೃದ್ಧರು ಮತ್ತು ಉಸಿರಾಟ ಅಥವಾ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಲು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಇರಲು ಮನವಿ ಮಾಡಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...