Homeಅಂತರಾಷ್ಟ್ರೀಯಶೇಖ್ ಹಸೀನಾರನ್ನು ವಾಪಸ್ ಕಳುಹಿಸುವಂತೆ ಭಾರತವನ್ನು ಕೇಳುತ್ತೇವೆ: ಮುಹಮ್ಮದ್ ಯೂನಸ್

ಶೇಖ್ ಹಸೀನಾರನ್ನು ವಾಪಸ್ ಕಳುಹಿಸುವಂತೆ ಭಾರತವನ್ನು ಕೇಳುತ್ತೇವೆ: ಮುಹಮ್ಮದ್ ಯೂನಸ್

- Advertisement -
- Advertisement -

ಆಗಸ್ಟ್‌ನಲ್ಲಿ ನಡೆದ ಸಾಮೂಹಿಕ ಪ್ರತಿಭಟನೆಯಿಂದ ತನ್ನ ಸರ್ಕಾರದ ಪತನದ ನಂತರ ಭಾರತಕ್ಕೆ ಪಲಾಯನ ಮಾಡಿದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸಲು ಮಧ್ಯಂತರ ಸರ್ಕಾರವು ಪ್ರಯತ್ನಿಸುತ್ತದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಭಾನುವಾರ ಹೇಳಿದ್ದಾರೆ.

ಮಧ್ಯಂತರ ಸರ್ಕಾರದ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಯೂನಸ್, ಧಾರ್ಮಿಕ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ನಾಗರಿಕರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಸರ್ಕಾರವು ತನ್ನ ಸರ್ವಾಂಗೀಣ ಪ್ರಯತ್ನಗಳನ್ನು ಮುಂದುವರೆಸಿದೆ ಎಂದು ಹೇಳಿದರು.

“ನಾವು ಪ್ರತಿ ಹತ್ಯೆಯಲ್ಲೂ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು.. ಉರುಳಿದ ನಿರಂಕುಶಾಧಿಕಾರಿ ಶೇಖ್ ಹಸೀನಾಳನ್ನು ವಾಪಸ್ ಕಳುಹಿಸುವಂತೆ ನಾವು ಭಾರತವನ್ನು ಕೇಳುತ್ತೇವೆ” ಎಂದು ಯೂನಸ್ ಹೇಳಿರುವುದಾಗಿ ಸರ್ಕಾರಿ-ಬಿಎಸ್ಎಸ್ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಕಳೆದ ತಿಂಗಳು ಯುಕೆ ಮೂಲದ ಫೈನಾನ್ಶಿಯಲ್ ಟೈಮ್ಸ್ ಪತ್ರಿಕೆ ಸಂದರ್ಶನದಲ್ಲಿ ನೀಡಿದ ಮಾತುಗಳಿಗೆ ಈ ಹೇಳಿಕೆಗಳು ವ್ಯಕ್ತಿಕ್ತವಾಗಿವೆ. ಯೂನಸ್ ಅವರು ತಮ್ಮ ಸರ್ಕಾರವು ತಕ್ಷಣವೇ ಭಾರತದಿಂದ ಹಸೀನಾರನ್ನು ಹಸ್ತಾಂತರಿಸುವಂತೆ ಕೇಳುವುದಿಲ್ಲ ಎಂದು ಹೇಳಿದ್ದರು.

ಹಸೀನಾ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಸುಮಾರು 1500 ಜನರು ಸಾವನ್ನಪ್ಪಿದ್ದಾರೆ. 19,931 ಇತರರು ಗಾಯಗೊಂಡಿದ್ದಾರೆ ಎಂದು ಆಗಸ್ಟ್ 8 ರಂದು ಅಧಿಕಾರ ವಹಿಸಿಕೊಂಡ ಯೂನಸ್ ಹೇಳಿದ್ದಾರೆ.

“ನಮ್ಮ ಸರ್ಕಾರವು ಪ್ರತಿ ಸಾವಿನ ಮಾಹಿತಿಯನ್ನು ಸಂಗ್ರಹಿಸಲು ಬಹಳ ಜಾಗರೂಕವಾಗಿದೆ” ಎಂದು ಅವರು ಹೇಳಿದರು. ಢಾಕಾದ 13 ಆಸ್ಪತ್ರೆಗಳು ಸೇರಿದಂತೆ ವಿವಿಧ ವಿಶೇಷ ಆಸ್ಪತ್ರೆಗಳಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸರ್ಕಾರ ವ್ಯವಸ್ಥೆ ಮಾಡಿದೆ ಎಂದರು.

77 ವರ್ಷದ ಹಸೀನಾ ಅವರು ಸರ್ಕಾರಿ ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಗೆ ಸಂಬಂಧಿಸಿದಂತೆ ತಮ್ಮ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಇತರರಿಂದ ಬೃಹತ್ ಪ್ರತಿಭಟನೆಗಳ ನಂತರ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದರು.

ಅವರು ಆಗಸ್ಟ್ 5 ರಂದು ದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಬಂದಿಳಿದರು. ಆಕೆಯನ್ನು ನಂತರ ಅನಿರ್ದಿಷ್ಟ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಂಬಲಾಗಿದೆ. ಅಂದಿನಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಹಸೀನಾ ಮತ್ತು ಅವರ ಪಕ್ಷದ ನಾಯಕರು ಜುಲೈ-ಆಗಸ್ಟ್ ಪ್ರತಿಭಟನೆಯ ಸಮಯದಲ್ಲಿ ಹಲವಾರು ಸಾವುನೋವುಗಳಿಗೆ ಕಾರಣವಾದ, ತಾರತಮ್ಯ-ವಿರೋಧಿ ವಿದ್ಯಾರ್ಥಿಗಳ ಆಂದೋಲನವನ್ನು ಕ್ರೂರವಾಗಿ ನಿಗ್ರಹಿಸಲು ಆದೇಶಿಸಿದ ಆರೋಪವನ್ನು ಎದುರಿಸುತ್ತಿದ್ದಾರೆ.

ಧಾರ್ಮಿಕ ಅಲ್ಪಸಂಖ್ಯಾತರು ಹಿಂಸಾಚಾರಕ್ಕೆ ಒಳಗಾದ ಕೆಲವು ಪ್ರಕರಣಗಳಲ್ಲಿನ ಪ್ರತಿಯೊಂದು ಘಟನೆಯನ್ನು ತಮ್ಮ ಸರ್ಕಾರವು ತನಿಖೆ ನಡೆಸುತ್ತಿದೆ ಎಂದು ಯೂನಸ್ ಹೇಳಿದರು.

“ಹಿಂದೂ ಸಮುದಾಯದವರು ಮಾತ್ರವಲ್ಲದೆ ದೇಶದ ಯಾವುದೇ ನಾಗರಿಕರು ಹಿಂಸಾಚಾರಕ್ಕೆ ಬಲಿಯಾಗದಂತೆ ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ನಾವು ಈ ಪ್ರಯತ್ನಗಳನ್ನು ಮುಂದುವರಿಸುತ್ತೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದರು.

ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಬಾಂಗ್ಲಾದೇಶ ಸಂಪೂರ್ಣ ಅಸುರಕ್ಷಿತ ರಾಷ್ಟ್ರವಾಗಿತ್ತು. ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಅನಗತ್ಯ ಭಯವನ್ನು ಹರಡುವ ಪ್ರಯತ್ನ ನಡೆದಿದೆ ಎಂದು ಯೂನಸ್ ಹೇಳಿದ್ದಾರೆ.

“ಕೆಲವು ಸಂದರ್ಭಗಳಲ್ಲಿ, ಅವರು ಹಿಂಸಾಚಾರಕ್ಕೆ ಒಳಗಾಗಿದ್ದಾರೆ. ಆದರೆ, ಅದರ ಬಗ್ಗೆ ಎಲ್ಲ ಪ್ರಚಾರಗಳು ಸಂಪೂರ್ಣವಾಗಿ ಉತ್ಪ್ರೇಕ್ಷಿತವಾಗಿವೆ. ಆ ಸಣ್ಣ ಹಿಂಸಾಚಾರದ ಪ್ರಕರಣಗಳು ಮುಖ್ಯವಾಗಿ ರಾಜಕೀಯವಾಗಿವೆ” ಎಂದು ಅವರು ಹೇಳಿದರು.

ಘಟನೆಗಳಿಗೆ ಧಾರ್ಮಿಕ ಬಣ್ಣ ನೀಡಿ ದೇಶವನ್ನು ಮತ್ತೆ ಅಸ್ಥಿರಗೊಳಿಸುವ ಕೆಟ್ಟ ಪ್ರಯತ್ನಗಳು ನಡೆದಿವೆ ಎಂದ ಅವರು, ಸರ್ಕಾರ ಎಲ್ಲರ ಸಹಕಾರದಿಂದ ಪರಿಸ್ಥಿತಿಯನ್ನು ದೃಢವಾಗಿ ನಿಭಾಯಿಸಿದೆ ಎಂದರು.

ತಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ಎರಡು ತಿಂಗಳ ನಂತರ ದೇಶದಾದ್ಯಂತ ಸುಮಾರು 32,000 ಪೂಜಾ ಮಂಟಪಗಳಲ್ಲಿ ದುರ್ಗಾ ಪೂಜೆಯನ್ನು ಆಚರಿಸಲಾಯಿತು ಎಂದು ಅವರು ಹೇಳಿದರು.

ದುರ್ಗಾಪೂಜೆಯ ಸಂದರ್ಭದಲ್ಲಿ ಹಿಂದೂ ಸಮಾಜದ ಬಾಂಧವರು ಸರಾಗವಾಗಿ ಹಬ್ಬವನ್ನು ಆಚರಿಸಲು ಸರ್ಕಾರವು ವ್ಯಾಪಕ ಭದ್ರತಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.

170 ಮಿಲಿಯನ್ ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಹಿಂದೂಗಳು ಕೇವಲ ಶೇಕಡಾ 8 ರಷ್ಟಿದ್ದಾರೆ. ಅಲ್ಪಸಂಖ್ಯಾತ ಹಿಂದೂ ಸಮುದಾಯದ ಸದಸ್ಯರು ತಮ್ಮ ವ್ಯವಹಾರಗಳ ಧ್ವಂಸವನ್ನು ಮತ್ತು ಪ್ರತಿಭಟನೆಯ ಸಮಯದಲ್ಲಿ ಮತ್ತು ದೇವಾಲಯಗಳ ಧ್ವಂಸವನ್ನು ಎದುರಿಸುತ್ತಿದ್ದಾರೆ. ನಂತರ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿದರು.

ಇದನ್ನೂ ಓದಿ; ಮಣಿಪುರ | ಮುಂದುವರಿದ ಹಿಂಸಾಚಾರ : ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಎನ್‌ಪಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...