Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...