Homeಕರ್ನಾಟಕ'ಕನಕದಾಸ ಅಧ್ಯಯನ ಕೇಂದ್ರ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವಮಾನ: ಬೇಸರ ಹೊರಹಾಕಿದ ದಲಿತ ಸಾಹಿತಿ ಗಂಗಪ್ಪ...

‘ಕನಕದಾಸ ಅಧ್ಯಯನ ಕೇಂದ್ರ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವಮಾನ: ಬೇಸರ ಹೊರಹಾಕಿದ ದಲಿತ ಸಾಹಿತಿ ಗಂಗಪ್ಪ ತಳವಾರ

- Advertisement -
- Advertisement -

ಕನಕ ಜಯಂತಿ ಪ್ರಯುಕ್ತ ಸೋಮವಾರ (ನ.18) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಗ್ರ ‘ತತ್ವಪದ ಯೋಜನೆಯ 18 ಸಂಪುಟಗಳ ಬಿಡುಗಡೆ’ ಸಮಾರಂಭದಲ್ಲಿ ದಲಿತ ಸಾಹಿತಿ ಗಂಗಪ್ಪ ತಳವಾರ ಅವರನ್ನು ಅವಮಾನಿಸಿರುವ ಆರೋಪ ಕೇಳಿ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ದಲಿತ ಸಾಹಿತಿ ಗಂಗಪ್ಪ ತಳವಾರ ಅವರು ಭಾವಾನುವಾದ ಮಾಡಿರುವ ಗುಟ್ಟಹಳ್ಳಿ ಆಂಜನಪ್ಪ ಅವರ “ಸುಜ್ಞಾನ ಭೋಧ ತತ್ವಗಳು ಸಂಪುಟ”ವನ್ನು ಬಿಡುಗಡೆಗೊಳಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಸಾಹಿತಿಗಳು ಸೇರಿದಂತೆ ಹಲವಾರು ಗಣ್ಯರನ್ನು ಆಮಂತ್ರಿಸಿ, ಗೌರವ ಸೂಚಿಸಲಾಗಿದೆ. ಆದರೆ, ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಂಗಪ್ಪ ತಳವಾರ ಅವರನ್ನು ಸೌಜನ್ಯಕ್ಕೂ ಹೆಸರು ಕರೆಯದೆ ಅವಮಾನಿಸಲಾಗಿದೆ ಎಂಬ ಆರೋಪ ‘ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ’ದ ಮುಖ್ಯಸ್ಥರಾದ ಕಾ.ತಾ. ಚಿಕ್ಕಣ್ಣ ಅವರ ಮೇಲೆ ಕೇಳಿಬಂದಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಗಂಗಪ್ಪ ಅವರು, “ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ಕರೆ ಮಾಡಿ ಆಹ್ವಾನಿಸಿದ್ದ ಕಾರಣಕ್ಕೆ ನಾನು ಕಾರ್ಯಕ್ರಮಕ್ಕೆ ಹೋಗಿದ್ದೆ. ಇದಕ್ಕಾಗಿ ಸುಮಾರು 4 ಸಾವಿರ ರೂಪಾಯಿ ಖರ್ಚು ಮಾಡಿದ್ದೆ. ‘ಸುಜ್ಞಾನ ಭೋಧ ತತ್ವಗಳು’ ಸಂಪುಟಕ್ಕಾಗಿ ಕೆಲಸ ಮಾಡಿದ್ದ 18 ಮಂದಿ ಸಾಹಿತಿಗಳಲ್ಲಿ 6-7 ಜನರು ಬಂದಿದ್ದರು. ಅವರೆಲ್ಲರ ಹೆಸರು ಕರೆದು ಗೌರವಿಸಲಾಗಿದೆ. ಆದರೆ, ನನ್ನನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ಬಹಳಷ್ಟು ನೋವಾಗಿದೆ. ನಾನು ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಎದುರು ಧಿಕ್ಕಾರ ಕೂಗಬೇಕೆಂದಿದ್ದೆ. ನಮ್ಮದೇ ಕಾರ್ಯಕ್ರಮ ಬೇಡ ಎಂದು ಸುಮ್ಮನಾದೆ. ಕೊನೆಗೆ ನಾನೇ ಬರೆದ ಪುಸ್ತಕ ಕೇಳಿದರೆ, 106 ರೂಪಾಯಿ ಹಣ ಪಡೆದು ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಕನಕದಾಸ ಅಧ್ಯಯನ ಕೇಂದ್ರದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಮೂಲಕ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ಧರಣಿ ಕೂರುತ್ತೇನೆ” ಎಂದು ಗಂಗಪ್ಪ ಅವರು ಎಚ್ಚರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ.ತಾ. ಚಿಕ್ಕಣ್ಣ, “ನಮ್ಮ ನಿರೂಪಕರು ಎಲ್ಲಾ ಸಾಹಿತಿಗಳ ಹೆಸರು ಕರೆದಿದ್ದಾರೆ. ಆದರೆ, ಕೆಲವರು ಗಂಗಪ್ಪ ಅವರ ಹೆಸರು ಕರೆದಿಲ್ಲ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಹೆಸರು ಕರೆಯಲಾಗಿದೆ ಅವರು ಗಮನಿಸಿಲ್ಲ ಎನ್ನುತ್ತಿದ್ದಾರೆ. ಒಂದು ವೇಳೆ ಹೆಸರು ಕರೆದಿರದಿದ್ದರೆ ಅದು ನಮ್ಮ ತಪ್ಪು, ಒಪ್ಪಿಕೊಳ್ಳುತ್ತೇನೆ. ಈ ಬಗ್ಗೆ ನಾನು ಗಂಗಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಅವರು ಬೇಸರಗೊಂಡಿದ್ದಾರೆ. ನಾವು ಈ ಬಗ್ಗೆ ಪರಿಶೀಲನೆ ಮಾಡಿ ಎಲ್ಲಿ ತಪ್ಪಾಗಿದೆ ಎಂದು ನೋಡುತ್ತೇವೆ” ಎಂದರು.

ಇದನ್ನೂ ಓದಿ : ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಸರ್ಕಾರಿ ಸಿಬ್ಬಂದಿ ವಿರುದ್ಧ ಕ್ರಮ: ಜಿ.ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...