Homeಮುಖಪುಟಗಾಯಕ ಟಿಎಂ ಕೃಷ್ಣಗೆ 'ಎಂಎಸ್ ಸುಬ್ಬುಲಕ್ಷ್ಮಿ' ಹೆಸರಿನಲ್ಲಿ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಹೆಸರಿನಲ್ಲಿ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

- Advertisement -
- Advertisement -

ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ‘ಸಂಗೀತ ಕಲಾನಿಧಿ ಪ್ರಶಸ್ತಿ’ ನೀಡುವುದಕ್ಕೆ ಮದ್ರಾಸ್ ಹೈಕೋರ್ಟ್ ದಿ ಹಿಂದೂ ಪತ್ರಿಕೆಗೆ ಇಂದು (ನ.19) ನಿರ್ಬಂಧ ವಿಧಿಸಿದೆ.

ಸಂಗೀತ ಕಲಾನಿಧಿ ಪ್ರಶಸ್ತಿ ಮತ್ತು ನಗದು ಬಹುಮಾನವನ್ನು ಟಿಎಂ ಕೃಷ್ಣ ಅವರಿಗೆ ನೀಡಬಹುದು. ಆದರೆ, ಎಂ.ಎಸ್ ಸುಬ್ಬುಲಕ್ಷ್ಮಿ ಹೆಸರಿನಲ್ಲಿ ನೀಡಬಾರದು ಎಂದು ಕೋರ್ಟ್ ಹೇಳಿದೆ.

ಟಿಎಂ ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಸುಬ್ಬುಲಕ್ಷ್ಮಿ ಅವರ ಆಶಯಕ್ಕೆ ವಿರುದ್ದವಾಗಿದೆ. ಹಾಗಾಗಿ, ಪ್ರಶಸ್ತಿ ನೀಡಲು ಅವಕಾಶ ಕೊಡಬಾರದು ಎಂದು ಸುಬ್ಬುಲಕ್ಷ್ಮಿ ಅವರ ಮೊಮ್ಮಗ ಶ್ರೀನಿವಾಸನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ಜಯಚಂದ್ರನ್ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಶ್ರೀನಿವಾಸನ್ ಅವರ ಅರ್ಜಿಯನ್ನು ಪ್ರಶ್ನಿಸಿ ಮ್ಯೂಸಿಕ್ ಅಕಾಡೆಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಶ್ರೀನಿವಾಸನ್ ಅವರು ಸುಬ್ಬುಲಕ್ಷ್ಮಿ ಅವರ ಉಯಿಲಿನ ಫಲಾನುಭವಿಯಾಗಿರುವುದರಿಂದ ಅವರು ಅರ್ಜಿ ಸಲ್ಲಿಸಲು ಅರ್ಹರು ಎಂದಿದೆ.

ಟಿಎಂ ಕೃಷ್ಣ ಸುಬ್ಬುಲಕ್ಷ್ಮಿ ಅವರ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದ್ದಾಗಿ ಬರೆದುಕೊಂಡಿದ್ದರು. ಅವರು ಸುಬ್ಬುಲಕ್ಷ್ಮಿಅವರ ಗೌರವ ಹಾಳು ಮಾಡಿದ್ದಾರೆ. ಸುಬ್ಬುಲಕ್ಷ್ಮಿ ಮಾಡಿರುವ ಸಾಧನೆಗಳನ್ನು ‘ಬ್ರಾಹ್ಮಣತ್ವ’ ಅಳವಡಿಸಿಕೊಂಡದಕ್ಕೆ ದೊರೆತ ಪ್ರತಿಫಲ ಎಂದು ಲೇವಡಿ ಮಾಡಿದ್ದಾರೆ ಎಂದು ಶ್ರೀನಿವಾಸನ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದರು.

ಅಲ್ಲದೆ, ಅಕ್ಟೋಬರ್ 30, 1997ರಂದು ಸುಬ್ಬುಲಕ್ಷ್ಮಿ ಅವರು ಬರೆದ ಕೊನೆಯ ಉಯಿಲಿನಲ್ಲಿ ತನ್ನ ಹೆಸರಿನಲ್ಲಿ ಯಾವುದೇ ಟ್ರಸ್ಟ್‌, ಪ್ರತಿಷ್ಠಾನ, ಸ್ಮಾರಕ ಸ್ಥಾಪಿಸಬಾರದು. ತನ್ನ ಹೆಸರಿನಲ್ಲಿ ನಿಧಿ/ದೇಣಿಗೆ ಪಡೆಯಬಾರದು ಎಂದು ಹೇಳಿದ್ದಾರೆ. ಹಾಗಾಗಿ, ಅವರ ಹೆಸರಿನಲ್ಲಿ ಪ್ರಶಸ್ತಿ ಕೊಡುವುದು ಅವರ ಆದೇಶಕ್ಕೆ ವಿರುದ್ದವಾಗಿದೆ ಎಂದು ಶ್ರೀನಿವಾಸನ್ ಹೇಳಿದ್ದರು.

ಇದನ್ನೂ ಓದಿ : ನರ್ಸಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...