Homeಮುಖಪುಟಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

- Advertisement -
- Advertisement -

ಜುಲೈ 5 ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಎರಡನೇ ಆರೋಪಿ ಸಂಭವ್ ಸೆಂಥಿಲ್‌ನನ್ನು ಬಂಧಿಸಲು ತಮಿಳುನಾಡು ಪೊಲೀಸರು ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ ಸೆಂಥಿಲ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ನೆಲೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆರ್ಮ್‌ಸ್ಟ್ರಾಂಗ್ ಕೊಲೆ

ದೀರ್ಘಕಾಲದಿಂದ ವಿವಾದಗಳನ್ನು ಹೊಂದಿದ್ದ ಮೂರು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಅವರ ಕೊಲೆಗೆ ಸಂಬಂಧಿಸಿದಂತೆ ಸೆಂಥಿಲ್‌ನ ಸಹಚರರಾದ ಕೃಷ್ಣಕುಮಾರ್ ಮತ್ತು ಅಪ್ಪು ಕೂಡ ಪೊಲೀಸರಿಗೆ ಬೇಕಾಗಿದ್ದಾರೆ. ಆರ್ಮ್‌ಸ್ಟ್ರಾಂಗ್ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವ್ಯಾಪಾರಿ ಕುಟುಂಬದ ಕಾನೂನು ಪದವೀಧರನಾಗಿರುವ ಆರೋಪಿ ಸೆಂಥಿಲ್ ತಮಿಳುನಾಡಿನಲ್ಲಿ ಆರು ಕೊಲೆಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ ಎಂದು ತಮಿಳುನಾಡು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಸುಲಿಗೆ, ಹಿಂಸಾಚಾರ ಮತ್ತು ‘ಕಟ್ಟೆ’ ಪಂಚಾಯತ್‌ಗಳನ್ನು ನಿರ್ವಹಿಸುವುದು ಸೇರಿದಂತೆ ಹಲವು ಅಪರಾಧಗಳಲ್ಲಿ ಅವನು ಭಾಗಿಯಾಗಿದ್ದರೂ, ಈ ವರೆಗೆ ಆತ ಪೊಲೀಸ್ ಬಲೆಗೆ ಬಿದ್ದಿಲ್ಲ ಎಂದು ವರದಿಯಾಗಿದೆ.

ವಾಷರ್‌ಮೆನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸೆಂಥಿಲ್ ಅವರನ್ನು A+ ಹಿಸ್ಟರಿ ಶೀಟರ್ ಎಂದು ವರ್ಗೀಕರಿಸಲಾಗಿದೆ. ಸೆಂಥಿಲ್ ಅಪಾಯಕಾರಿ ಆರೋಪಿಯಾಗಿದ್ದು, ಆತನ ಚಲನವಲನವನ್ನು ನಿರ್ಬಂಧಿಸಲು ಪೊಲೀಸರು ಬ್ಯೂರೋ ಆಫ್ ಇಮಿಗ್ರೇಷನ್‌ಗೆ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಅನ್ನು ಸಹ ಸಲ್ಲಿಸಿದ್ದಾರೆ. ರೆಡ್ ಕಾರ್ನರ್ ನೋಟಿಸ್ ಅಂತರಾಷ್ಟ್ರೀಯ ಕಾನೂನು ಜಾರಿ ಸಂಸ್ಥೆಗಳು ಸೆಂಥಿಲ್ ಅನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸಲು ಅನುವು ಮಾಡಿಕೊಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಚೆನ್ನೈ ಪೊಲೀಸ್ ಕಮಿಷನರ್ ಎಂ. ಅರುಣ್ ವಿಶೇಷ ತಂಡವನ್ನು ರಚಿಸಿದ್ದು, ಸೆಂಥಿಲ್ ಪತ್ತೆಗೆ ನಿರಂತರ ಶ್ರಮಿಸುತ್ತಿರುವುದಾಗಿ ಹೇಳಿದ್ದಾರೆ. ಹದಿನೇಳು ಪೊಲೀಸ್ ತಂಡಗಳು ಪ್ರಸ್ತುತ ಆರ್ಮ್‌ಸ್ಟ್ರಾಂಗ್ ಹತ್ಯೆಯನ್ನು ತನಿಖೆ ನಡೆಸುತ್ತಿವೆ, ಇದು ಇಲ್ಲಿಯವರೆಗೆ 27 ವ್ಯಕ್ತಿಗಳ ಬಂಧನ ನಡೆಸಲಾಗಿದೆ. ಇವರಲ್ಲಿ ಭಾರಿ ಕ್ರಿಮಿನಲ್‌ಗಳು, ರೌಡಿ ಶೀಟರ್‌ಗಳು ಮತ್ತು ಎಐಎಡಿಎಂಕೆ, ತಮಿಳು ಮಾನಿಲ ಕಾಂಗ್ರೆಸ್, ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಜಕೀಯ ಪಕ್ಷಗಳ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿವೆ.

ಕೊಲೆಯಾಗಿ ಸಮಯ ಕಳೆದರೂ, ಆರೋಪಿ ಸೆಂಥಿಲ್‌ನನ್ನು ಹುಡುಕಲು ಪೊಲೀಸರು ಆತನ ಸುಮಾರು 20 ವರ್ಷಗಳಷ್ಟು ಹಳೆಯ ಪೋಟೋವನ್ನು ಅವಲಂಬಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ವಿವರವಾದ 5,000 ಪುಟಗಳ ಚಾರ್ಜ್ ಶೀಟ್‌ನಲ್ಲಿ ಆರ್ಮ್‌ಸ್ಟ್ರಾಂಗ್ ಹತ್ಯೆ ಮಾಡಲು ಮೂರು ಗ್ಯಾಂಗ್‌ಗಳು ಸಹಕರಿಸಿವೆ ಎಂದು ಆರೋಪಿಸಿದೆ.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...