Homeಮುಖಪುಟಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

ಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

- Advertisement -
- Advertisement -

ಉಪರಾಷ್ಟ್ರಪತಿ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೋರ್ಟ್‌ಗೆ ರಾಜ್ಯಸಭೆಯಿಂದ ಡಾ.ಕೆ. ಲಕ್ಷ್ಮಣ್, ಡಾ. ಸುಮರ್ ಸಿಂಗ್ ಸೋಲಂಕಿ ಮತ್ತು ಡಾ. ಅನಿಲ್ ಸುಖದೇರಾವ್ ಬೋಂಡೆ ಸೇರಿದಂತೆ ಮೂವರು ಬಿಜೆಪಿ ಸಂಸದರನ್ನು ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.

ಜೆಎನ್‌ಯು ಕೋರ್ಟ್‌ ವಿಶ್ವವಿದ್ಯಾನಿಲಯದ ಸರ್ವೋಚ್ಚ ಪ್ರಾಧಿಕಾರವಾಗಿದ್ದು, ಅದು ಕಾರ್ಯಕಾರಿ ಮಂಡಳಿ ಮತ್ತು ಅಕಾಡೆಮಿಕ್ ಕೌನ್ಸಿಲ್‌ನ ಕ್ರಮಗಳನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿದೆ. ವಾರ್ಷಿಕವಾಗಿ ಸಭೆ ಸೇರುವ ಈ ಕೋರ್ಟ್ ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ, ಲೆಕ್ಕಪತ್ರಗಳು, ಆಡಿಟ್ ವರದಿ ಮತ್ತು ಬಜೆಟ್ ಅನ್ನು ಪರಿಗಣಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಲಕ್ಷ್ಮಣ್ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಅವರು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಲ್ಲಿ ಒಬ್ಬರು. ಅಷ್ಟೆ ಅಲ್ಲದೆ, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ಮುಂಬರುವ ಸಾಂಸ್ಥಿಕ ಚುನಾವಣೆಯ ರಾಷ್ಟ್ರೀಯ ಚುನಾವಣಾಧಿಕಾರಿಯಾಗಿ ಲಕ್ಷ್ಮಣ್ ಅವರನ್ನು ನೇಮಿಸಲಾಗಿದೆ.

ಡಾ. ಸುಮೇರ್ ಸಿಂಗ್ ಸೋಲಂಕಿ ಅವರು ಮಧ್ಯಪ್ರದೇಶದ ಸಂಸದರಾಗಿದ್ದು, ಅವರು ಈ ಹಿಂದೆ ಬರ್ವಾನಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ (ಇತಿಹಾಸ) ಕೆಲಸ ಮಾಡಿದ್ದರು. ಅವರು ಆರೆಸ್ಸೆಸ್‌ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಕೂಡಾ ಹೇಳಲಾಗುತ್ತದೆ.

ಮಹಾರಾಷ್ಟ್ರದವರಾಗಿರುವ ಡಾ. ಅನಿಲ್ ಸುಖದೇವರಾವ್ ಬೋಂಡೆ ಅವರು ವೈದ್ಯಕೀಯ ವೃತ್ತಿಪರರಾಗಿದ್ದು, ಪ್ರಸ್ತುತ ರಾಜಕೀಯಕ್ಕೆ ಇಳಿದಿದ್ದಾರೆ. ಸಂಸತ್ತಿನ ಕಳೆದ ಅಧಿವೇಶನದಲ್ಲಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ದೂರವಿಡುವಂತೆ ಅವರು ಧ್ವನಿ ಎತ್ತಿದ್ದರು.

ಜೆಎನ್‌ಯು ಕೋರ್ಟ್‌ ಸಭೆಯು ಅದರ ಉಪಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತದೆ. ಜೆಎನ್‌ಯು ಕೋರ್ಟ್‌ ಕಾರ್ಯಕಾರಿ ಮಂಡಳಿಯ ಸದಸ್ಯರು, ರೆಕ್ಟರ್, ವಿದ್ಯಾರ್ಥಿಗಳ ಡೀನ್‌ಗಳು, ಮುಖ್ಯ ರಕ್ಷಕ ಹಣಕಾಸು ಅಧಿಕಾರಿ, ವಿಶ್ವವಿದ್ಯಾಲಯದ ಗ್ರಂಥಪಾಲಕರು, ಹಿರಿಯ ವಾರ್ಡನ್‌ಗಳು ಮತ್ತು ಸಂಸತ್ತಿನ ಹತ್ತು ಪ್ರತಿನಿಧಿಗಳನ್ನು ಒಳಗೊಂಡಿದೆ.

ಸಂಸತ್ತಿನ ಪ್ರತಿನಿಧಿಗಳಲ್ಲಿ ಲೋಕಸಭೆಯ ಸ್ಪೀಕರ್ ನಾಮನಿರ್ದೇಶನ ಮಾಡಿದ ಆರು ಸದಸ್ಯರು ಮತ್ತು ರಾಜ್ಯಸಭೆಯ ಸ್ಪೀಕರ್‌ ನಾಮನಿರ್ದೇಶನ ಮಾಡಿದ ನಾಲ್ಕು ಸದಸ್ಯರು ಸೇರಿದ್ದಾರೆ. ಅಲ್ಲದೆ, ಉಪಕುಲಪತಿಯಿಂದ ನಾಮನಿರ್ದೇಶನಗೊಂಡ ಪ್ರತಿ ಮಾನ್ಯತೆ ಪಡೆದ ಸಂಸ್ಥೆಗಳ ಪ್ರತಿನಿಧಿಯೂ ಸಹ ಈ ಕೋರ್ಟ್‌ನ ಸದಸ್ಯರಾಗಿ ಉಳಿಯುತ್ತಾರೆ.

ಹೊಸ ನಾಮನಿರ್ದೇಶನಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಪುರುಷೋತ್ತಮ ಬಿಳಿಮಲೆ, ”ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಇದು ನಿರೀಕ್ಷಿತ ನಡೆಯಾಗಿದೆ. ಆದರೆ, ಜೆಎನ್‌ಯುವಿನಲ್ಲಿ ನಡೆಯುತ್ತಿದ್ದ ವಿದ್ವತ್‌ಪೂರ್ಣ ಚರ್ಚೆಗಳು, ಅಕಾಡೆಮಿಕ್ ಚರ್ಚೆಗಳು ಈಗ ನಡೆಯುತ್ತಿಲ್ಲ. ಈಗ ಏನಿದ್ದರೂ, ಗುರುಪೂಜೆ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಲ್ಲಿ ಬೆಲೆ. ಒಂದು ವಿಶ್ವವಿದ್ಯಾನಿಲಯವನ್ನು ಹಾಳುಗೆಡವಲು ಏನು ಮಾಡಬೇಕೊ ಅದನ್ನು ಬಿಜೆಪಿ ಮಾಡುತ್ತಲೆ ಬಂದಿದೆ. ಆದರೆ, ಭಾರತೀಯ ಇತಿಹಾಸದಲ್ಲಿ ಇದು ಒಂದು ಹಂತ ಅಷ್ಟೆ. ಆದರೆ, ಇದು ಹೀಗೆಯೆ ಇರುವುದಿಲ್ಲ, ಮುಂದೊಂದು ದಿನ ಇವೆಲ್ಲಾ ಇಲ್ಲವಾಗಿ ಎಲ್ಲವೂ ಸರಿಯಾಗುತ್ತದೆ ಎಂಬ ಆಶಾವಾದವಿದೆ” ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...