Homeಮುಖಪುಟಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

”ಮೂಲವಾಸಿ ಬಚಾವೋ ಮಂಚ್” ಎಂಬ ಆದಿವಾಸಿ ಸಮುದಾಯದ ಸಂಘಟನೆಯನ್ನು ಛತ್ತೀಸ್‌ಗಢದ ಬಿಜೆಪಿ ಸರ್ಕಾರ ಒಂದು ವರ್ಷದವರೆಗೆ ನಿಷೇಧಿಸಿದೆ. ಅಕ್ಟೋಬರ್ 30 ರಂದು ಛತ್ತೀಸ್‌ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ, 2005 ರ ಅಡಿಯಲ್ಲಿ ನಿಷೇಧವನ್ನು ವಿಧಿಸಲಾಗಿದ್ದು, ಸಂಘಟನೆಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು “ನಿರಂತರವಾಗಿ ವಿರೋಧಿಸುತ್ತಿದ್ದು, ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರ ಆರೋಪಿಸಿದೆ. ಈ ಬಗ್ಗೆ ಹೋರಾಟಗಾರರು ಮತ್ತು ಜನಪರ ಸಂಘಟನೆಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿವೆ.

ಅಭಿವೃದ್ಧಿ ಯೋಜನೆಗಳಿಗಾಗಿ ನಿರ್ಮಿಸಲಾದ ಭದ್ರತಾ ಶಿಬಿರಗಳ ವಿರುದ್ಧ ಸಂಘಟನೆಯು ಜನರನ್ನು ಪ್ರಚೋದಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಸಂಘಟನೆಯು ಕಾನೂನು ಜಾರಿಯಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಜೊತೆಗೆ ಕಾನೂನಿನಿಂದ ಸ್ಥಾಪಿಸಲಾದ ಸಂಸ್ಥೆಗಳಿಗೆ ಅಸಹಕಾರವನ್ನು ಉತ್ತೇಜಿಸುತ್ತಿದೆ ಎಂದು ಸರ್ಕಾರ ಹೇಳಿದೆ. “ಈ ಮೂಲಕ ಸಂಘಟನೆಯು ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಮತ್ತು ನಾಗರಿಕರ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ. ಇದು ರಾಜ್ಯದ ಭದ್ರತೆಗೆ ಹಾನಿಕರವಾಗಿದೆ” ಎಂದು ಸರ್ಕಾರ ಹೇಳಿದೆ. ಛತ್ತೀಸ್‌ಗಢ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಹೋರಾಟಗಾರರು ಮತ್ತು ಜನಪರ ಸಂಘಟನೆಗಳು, ಮೂಲವಾಸಿ ಬಚಾವೋ ಮಂಚ್ ಮೇಲಿನ ನಿಷೇಧವನ್ನು ಸರ್ವಾಧಿಕಾರ ಎಂದು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವನ್ನು ವಿಮರ್ಶೆ ಮಾಡುವ ಧ್ವನಿಗಳನ್ನು ಮೌನಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೂಲವಾಸಿ ಬಚಾವೋ ಮಂಚ್ ಅನ್ನು ನಿಷೇಧಿಸುವುದಕ್ಕೆ ಆಧಾರವೇನಿದೆ? ಬಸ್ತಾರ್‌ನ ಆದಿವಾಸಿಗಳು ಈ ಸಂಘಟನೆಯನ್ನು ರೂಪಿಸಲು ಮಾಡುವಂತೆ ಮಾಡಿದವರು ಯಾರು? ಸರ್ಕಾರ ಆದಿವಾಸಿಗಳ ಬೇಡಿಕೆಗಳನ್ನು ಆಲಿಸಿದ್ದರೆ, ಗಣಿಗಾರಿಕೆ ನಿಲ್ಲಿಸಿದ್ದರೆ, ಕ್ಯಾಂಪ್‌ಗಳನ್ನು ನಿರ್ಮಿಸುವುದನ್ನು ನಿಲ್ಲಿಸಿ ಸಿಲ್ಗರ್‌ನಲ್ಲಿ ನಾಲ್ವರನ್ನು ಕೊಲ್ಲದೆ ಇದ್ದರೆ, ಮೂಲವಾಸಿ ಬಚಾವೊ ಮಂಚ್‌ನ ಅಗತ್ಯವೆ ಇರಲಿಲ್ಲ” ಎಂದು ಸಂಘಟನೆಯ ಕಾರ್ಯಕರ್ತೆ ಸೋನಿ ಸೋರಿ ಹೇಳಿದ್ದಾರೆ.

2021ರ ಮೇ ತಿಂಗಳಲ್ಲಿ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಸಿಲ್ಗರ್ ಗ್ರಾಮದ ಬಳಿ ಪೋಲಿಸ್ ಗುಂಡಿನ ದಾಳಿಯಲ್ಲಿ ನಾಲ್ವರು ಕೊಲ್ಲಲ್ಪಟ್ಟಿದ್ದರು. ಈ ಪ್ರದೇಶದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸುವುದನ್ನು ಆದಿವಾಸಿಗಳ ಗುಂಪು ಪ್ರತಿಭಟಿಸಿದ ನಂತರ ಈ ಗುಂಡಿನ ದಾಳಿ ನಡೆದಿತ್ತು.

ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣದ ವಿರುದ್ಧದ ವೇದಿಕೆಯು ಮೂಲವಾಸಿ ಬಚಾವೋ ಮಂಚ್‌ನ ಕಾರ್ಯಕರ್ತರಾದ ಸುನೀತಾ ಪೊಟ್ಟಂ ಮತ್ತು ಸುರ್ಜು ಟೇಕಂ ಸೇರಿದಂತೆ ಹಲವಾರು ಸದಸ್ಯರನ್ನು ಕಟ್ಟುಕಥೆ ಕಟ್ಟಿ ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಜೂನ್‌ನಲ್ಲಿ, ಮಾವೋವಾದಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಸುನೀತಾ ಪೊಟ್ಟಮ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ, ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ 12 ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಏಪ್ರಿಲ್‌ನಲ್ಲಿ ಪೊಲೀಸರು ಸುರ್ಜು ಟೇಕಮ್‌ನನ್ನು ಕೂಡಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ಸಿಲ್ಗರ್ ಹತ್ಯೆಯ ನಂತರ ಮೂಲವಾಸಿ ಬಚಾವೋ ಮಂಚ್ ಸಿಲ್ಗರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದೆ ಮತ್ತು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಅರೆಸೈನಿಕ ಶಿಬಿರಗಳ ವಿರುದ್ಧ 30 ಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಆಯೋಜಿಸಿತ್ತು.

“ತಮ್ಮ ಹಳ್ಳಿಗಳಲ್ಲಿ ಪ್ರತಿಭಟನೆಗೆ ಕುಳಿತಿರುವ ಜನರ ನಡೆಯನ್ನು ಕಾನೂನುಬಾಹಿರವೆಂದು ಹೇಗೆ ಘೋಷಿಸಲು ಸಾಧ್ಯ” ಎಂದು ಸಮಾಜಶಾಸ್ತ್ರಜ್ಞೆ ಮತ್ತು ಹೋರಾಟಗಾರ್ತಿ ನಂದಿನಿ ಸುಂದರ್ ಸೋಮವಾರ ಪ್ರಶ್ನಿಸಿದ್ದಾರೆ. ಸಂಘಟನೆಯು ಅಭಿವೃದ್ಧಿಯನ್ನು ತಡೆಯುತ್ತಿದೆ ಎಂಬ ಸರ್ಕಾರದ ಆರೋಪ ಸುಳ್ಳಾಗಿದ್ದು, ಸಂಘಟನೆಯು ಭದ್ರತಾ ಶಿಬಿರಗಳ ಬದಲಿಗೆ ಶಾಲೆಗಳು ಮತ್ತು ಆರೋಗ್ಯ ಸೇವೆಗಳಿಗೆ ಒತ್ತಾಯಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...