Homeಮುಖಪುಟಪತಿ & ಸಂಬಂಧಿಕರಿಂದ 'ಬಾಡಿ ಶೇಮಿಂಗ್' ಕೂಡಾ ವೈವಾಹಿಕ ದೌರ್ಜನ್ಯ - ಕೇರಳ ಹೈಕೋರ್ಟ್

ಪತಿ & ಸಂಬಂಧಿಕರಿಂದ ‘ಬಾಡಿ ಶೇಮಿಂಗ್’ ಕೂಡಾ ವೈವಾಹಿಕ ದೌರ್ಜನ್ಯ – ಕೇರಳ ಹೈಕೋರ್ಟ್

- Advertisement -
- Advertisement -

ಪತ್ನಿಯ ದೇಹದ ಬಗ್ಗೆ ಪತಿ ಅಥವಾ ಅವರ ಕುಟುಂಬದ ಸದಸ್ಯರು ಅವಮಾನಿಸುವುದು (ಬಾಡಿ ಶೇಮಿಂಗ್) ಕೂಡಾ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 498A ಅಡಿಯಲ್ಲಿ ವೈವಾಹಿಕ ದೌರ್ಜನ್ಯಕ್ಕೆ ಸಮಾನವಾಗಿರುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಪತಿ & ಸಂಬಂಧಿಕರಿಂದ

ಬಾಡಿ ಶೇಮಿಂಗ್ ಮಾಡುವ ಕ್ರಿಯೆಗಳನ್ನು IPC ಯ ಸೆಕ್ಷನ್ 498A ಯ ವಿವರಣೆ (ಎ) ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಎ. ಬದರುದ್ದೀನ್ ಅವರ ಏಕಸದಸ್ಯ ಪೀಠ ತೀರ್ಪು ನೀಡಿದೆ. ಮಹಿಳೆಯೊಬ್ಬರು ತನ್ನ ಪತಿ, ಅವನ ತಂದೆ ಮತ್ತು ಅವನ ಸಹೋದರನ ಹೆಂಡತಿಯಿಂದ ವೈವಾಹಿಕ ಕ್ರೌರ್ಯ ಅನುಭವಿಸಿದ್ದಾಗಿ ಸಲ್ಲಿಸಲಾಗಿದ್ದ ಪ್ರಕರಣದ ತೀರ್ಪಿನಲ್ಲಿ ಹೈಕೋರ್ಟ್ ಈ ಬಗ್ಗೆ ಹೇಳಿದೆ. ಪತಿ & ಸಂಬಂಧಿಕರಿಂದ

ನಾನುಗೌರಿ ವಾಟ್ಸಾಪ್ ಗುಂಪಿಗೆ ಸೇರಿ
https://chat.whatsapp.com/BWTnQl3NBxtBGD0tyXHaPm3

ಬಾಡಿ ಶೇಮಿಂಗ್ ಮಾಡುವ ಕ್ರಿಯೆಗಳನ್ನು IPC ಯ ಸೆಕ್ಷನ್ 498A ಗೆ ವಿವರಣೆ (ಎ) ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. ಇದು ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವ ಅಥವಾ ಗಂಭೀರವಾದ ಗಾಯ ಅಥವಾ ಜೀವಕ್ಕೆ ಅಪಾಯವನ್ನುಂಟುಮಾಡುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆಯನ್ನು ಹೊಂದಿದೆ ಎಂದು ಕೋರ್ಟ್ ಹೇಳಿದೆ.

ಈ ಅರ್ಜಿಯ ವಿರುದ್ಧ ಮತ್ತೊಬ್ಬ ಮಹಿಳೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಾನು ಸಂತ್ರಸ್ತ ಮಹಿಳೆಯ ಗಂಡನ ಅಣ್ಣನ ಹೆಂಡತಿಯಾಗಿರುವುದರಿಂದ ಸೆಕ್ಷನ್ 498ಎ ಅಡಿಯಲ್ಲಿ ‘ಸಂಬಂಧಿ’ ಪದದ ವ್ಯಾಪ್ತಿಗೆ ಬರುವುದಿಲ್ಲ ಎಂಬ ವಾದವನ್ನು ಅವರು ಮಂಡಿಸಿದ್ದರು. ಆದರೆ ಕೋರ್ಟ್ ಈ ವಾದವನ್ನು ನಿರಾಕರಿಸಿದ್ದು ಅರ್ಜಿಯನ್ನು ವಜಾಗೊಳಿಸಿದೆ.

ಸಂತ್ರಸ್ತ ಮಹಿಳೆಯ ದೇಹದ ಆಕಾರಕ್ಕಾಗಿ ಅಪಹಾಸ್ಯ ಮಾಡಲಾಗುತ್ತಿತ್ತು ಮತ್ತು ಅವರ ಪತಿ ಈ ಮಹಿಳೆಗಿಂತ ಹೆಚ್ಚು ಸುಂದರ ಮತ್ತು ಹೆಚ್ಚು ಸೂಕ್ತವಾದ ಬೇರೆ ಮಹಿಳೆಯರನ್ನು ಹುಡುಕಬಹುದಿತ್ತು ಎಂದು ಹೇಳಿ ಅವಮಾನಿಸುತ್ತಿದ್ದರು ಎಂಬ ಆರೋಪವನ್ನು ನ್ಯಾಯಾಲಯವು ಎಫ್‌ಐಆರ್‌ನಲ್ಲಿ ಇರುವ ಬಗ್ಗೆ ಗಮನಿಸಿತ್ತು. ಜೊತೆಗೆ ಸಂತ್ರಸ್ತ ಮಹಿಳೆಯ ವೈದ್ಯಕೀಯ ಪದವಿಯ ಸತ್ಯಾಸತ್ಯತೆಯನ್ನು ಪ್ರಶ್ನಿಸಲಾಗುತ್ತಿತ್ತು ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ಪ್ರಾಥಮಿಕವಾಗಿ ಸೆಕ್ಷನ್ 498A ಅಡಿಯಲ್ಲಿ ವೈವಾಹಿಕ ಕ್ರೌರ್ಯದ ಅಪರಾಧವಾಗಿದೆ ಎಂದು ನ್ಯಾಯಾಲಯವು ತೀರ್ಪು ನೀಡಿದ್ದು, ಸಂತ್ರಸ್ತ ಮಹಿಳೆಯ ಗಂಡನ ಅಣ್ಣನ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...