Homeಎಕಾನಮಿಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ...

ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…

ಉತ್ತರಪ್ರದೇಶದ ಯುಪಿಪಿಸಿಎಲ್ ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಅವರ ಸಹಚರ ಇಕ್ಬಾಲ್ ಮಿರ್ಚಿ ಒಡೆತನದ ಡಿಎಚ್‍ಎಫ್‍ಎಲ್‍ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

- Advertisement -
- Advertisement -

ಕಳೆದ 70 ವರ್ಷದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ದುಡ್ಡಿನ ಮೇಲೆ ಮೋಜು-ಮಸ್ತಿ ನಡೆಸಿದೆ ಎಂದು ಆರೋಪಿಸುವ ಪ್ರಧಾನಿ ಮೋದಿ, ಇಲ್ಲಿಯ ಜನಸಾಮಾನ್ಯರು ಎದುರಿಸುತ್ತಿರುವ ದುಃಖ ದುಮ್ಮಾನಗಳ ನಿವಾರಣೆಗೆ ನಿಮ್ಮ ಯೋಜನೆಗಳೇನು ಎಂದು ಕೇಳುವವರಿಗೆ ದೇಶದ್ರೋಹದ ಪಟ್ಟ ಕಟ್ಟುವುದು ಬಹಿರಂಗವಾಗಿ ನಡೆದಿದೆ.

ಮತ್ತೊಂದೆಡೆ, ದೇಶದ್ರೋಹಿಗಳ ನಿಕಟ ಒಡನಾಡಿಯಾದ ವ್ಯಕ್ತಿ-ಸಂಸ್ಥೆಗಳ ವಹಿವಾಟು ಅಭಿವೃದ್ಧಿಗಾಗಿ ಕಾರ್ಮಿಕರ ಭವಿಷ್ಯನಿಧಿಯನ್ನೇ ಒತ್ತೆ ಇಟ್ಟು ದೇಶಾಭಿಮಾನ ಮೆರೆಯುತ್ತಿದೆ. ಭಾರತೀಯ ಸಂತ-ಸಂಸ್ಕೃತಿಯ ನೈಜ ವಾರಸುದಾರ ಎಂಬ ಖ್ಯಾತಿಯ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದಲ್ಲಿ ನಡೆದಿದೆ. ಕಾರ್ಮಿಕರ ಭವಿಷ್ಯನಿಧಿಯನ್ನು ದೇಶದ್ರೋಹಿ ಒಡನಾಡಿಯ ಅಭಿವೃದ್ಧಿಗೆ ಉದಾರವಾಗಿ ನೀಡಿ, ತಮ್ಮ ದೇಶಾಭಿಮಾನದ ನೈಜ ಸ್ವರೂಪ ತೋರಿದ್ದಾರೆ.

ಉತ್ತರಪ್ರದೇಶದ ವಿದ್ಯುತ್ ನಿಗಮ ನಿಯಮಿತದ (ಯುಪಿಪಿಸಿಎಲ್) ಕಾರ್ಮಿಕರಿಗೆ ಸೇರಿದ ಒಟ್ಟು 2,600 ಕೋಟಿ ರೂ.ಗಳನ್ನು ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿ ಪಾಲುದಾರಿಕೆಯ ಡಿಎಚ್‍ಎಫ್‍ಎಲ್‍ನಲ್ಲಿ (ಮಾರ್ಚ್ -2017 ಹಾಗೂ ಡಿಸೆಂಬರ್-2018ರ ಅವಧಿ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಡಿದ್ದಾರೆ.

ಮುಂಬೈ ಮೂಲದ ಈ ವಿವಾದಿತ ಕಂಪನಿಯಲ್ಲಿ ಬಂಡವಾಳ ಹೂಡಲು ಕಾರ್ಮಿಕರ ಭವಿಷ್ಯ ನಿದಿಯೇ ಬೇಕಿತ್ತೆ? ಅದೂ, ದೇಶದ್ರೋಹಿ ದಾವೂದ್ ಇಬ್ರಾಹಿಂ ಸಹಚರನಾಗಿದ್ದ ಇಕ್ಬಾಲ್ ಮಿರ್ಚಿ ಒಡೆತನದ ಸಂಸ್ಥೆಗೆ ಎಂಬುದೀಗ ಚರ್ಚೆಯ ವಸ್ತುವಾಗುತ್ತಿದೆ.

ಆರ್ಥಿಕ ದುರುಪಯೋಗದ ಗಂಭೀರ ಪ್ರಕರಣವಲ್ಲವೆ?
ಉತ್ತರಪ್ರದೇಶ ವಿದ್ಯುತ್ ನಿಗಮ ನಿಯಮಿತದ ಕಾರ್ಮಿಕರ 2,600 ಕೋಟಿ ರೂ.ಗಳಷ್ಟು ಭವಿಷ್ಯ ನಿಧಿಯನ್ನು ಬೇರೆ ಉದ್ದೆಶಗಳಿಗಾಗಿ ಬಳಸುವುದು ಅಪರಾಧ. ಯೋಗಿ ಆದಿತ್ಯನಾಥ ಸರ್ಕಾರದ ಕಾರ್ಮಿಕರಿಗೆ ಸೇರಿದ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾಮ್ಯದ ಭವಿಷ್ಯ ನಿದಿ-ಇಷ್ಟೊಂದು ಭಾರಿ ಮೊತ್ತದ ಹಣವನ್ನು ವಿವಾದಿತ ಕಂಪನಿಯೊಂದರಲ್ಲಿ ಹೂಡಿರುವುದು ಹತ್ತು ಹಲವು ಸಂಶಯಗಳಿಗೆ ಕಾರಣವಾಗುತ್ತಿದೆ.

ದೇಶಾಭಿಮಾನಿ ಮುಖ್ಯಮಂತ್ರಿ ಹಾಗೂ ದೇಶದ್ರೋಹಿಯ ಒಡನಾಡಿಯೊಬ್ಬರ ಒಡೆತನದ ಕಂಪನಿಯೊಂದಿಗಿರುವ ಸಂಬಂಧವೂ ಈಗ ಪ್ರಶ್ನಾರ್ಹವಾಗುತ್ತಿದೆ.

ತನಿಖೆ ಆರಂಭವೇ ಭ್ರಷ್ಟಾಚಾರಕ್ಕೆ ಸಾಕ್ಷಿ
ಓತಿಕಾಟಕ್ಕೆ ಬೇಲಿ ಸಾಕ್ಷಿ ಎಂಬಂತೆ, ಉತ್ತರಪ್ರದೇಶ ಸರಕಾರದ (ಇಂಧನ) ಪ್ರಧಾನ ಕಾರ್ಯದರ್ಶಿ ಅಲೋಕಕುಮಾರ್, ಪ್ರಕರಣದ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ನುಡಿಯುತ್ತಿದೆ.

ಈಗಾಗಲೇ, ವಿದ್ಯುತ್ ವಲಯ ಕಾರ್ಮಿಕರ ಟ್ರಸ್ಟ್ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಗುಪ್ತಾ ಅವರನ್ನು ಅಮಾನತುಗೊಳಿಸಿದ್ದು, ಪ್ರಕರಣದ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂಧನ ವಿಭಾಗ ನಿರ್ದೇಶಕ ಸುಧೀರ್ ಆರ್ಯ ಅವರಿಗೆ ಸೂಚಿಸಿದ್ದಾರೆ.

ಹೂಡಿಕೆ ವಾಪಸಾತಿಗೆ ಹೆಚ್ಚಿದ ಒತ್ತಡ
ಮತ್ತೊಂದು ಕಂಪನಿಯ ನೆರಳಲ್ಲಿ ಬೆಳೆಯುವ ಕಂಪನಿಯೊಂದಕ್ಕೆ ಪೂರ್ವಾಪರ ತಿಳಿಯದೇ ಕಾರ್ಮಿಕರ ಸಾವಿರಾರು ಕೋಟಿ ರೂ.ಗಳ ಭವಿಷ್ಯ ನಿಧಿ ಹೂಡಿದ್ದನ್ನು ಪ್ರಶ್ನಿಸಿದ್ದು ಮಾತ್ರವಲ್ಲ; ಬಂಡವಾಳ ಹೂಡಿಕೆಯನ್ನು ವಾಪಸ್ ಪಡೆಯಲು ಉತ್ತರಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯ ಎಂಜಿನಿಯರರ ಸಂಸ್ಥೆಯು (ಯುಪಿಎಸ್‍ಇಬಿಇಎ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದು ಆಗ್ರಹಿಸಿದೆ.

ಸುಮಾರು 2600 ಕೋಟಿ ರೂ.ಗಳಿಗೂ ಅಧಿಕ ಹಣ ಡಿ.ಎಚ್.ಎಫ್.ಎಲ್ ನಲ್ಲಿದೆ. ಅದನ್ನು ಮರಳಿ ಪಡೆಯಬೇಕು. ಮಾತ್ರವಲ್ಲ ಪ್ರಧಾನ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಕಾಂಟ್ರಿಬ್ಯೂಟರಿ ಪ್ರಾವಿಡೆಂಟ್ ಫಂಡ್ (ಸಿಪಿಎಫ್) ಟ್ರಸ್ಟ್ ನಿಂದ ಇನ್ನು ಮುಂದೆ ಇಂತಹ ಖಾಸಗಿ ಸಂಸ್ಥೆಗಳಿಗೆ ಹಣ ಹೂಡುವುದಿಲ್ಲ ಎಂಬ ಬಗ್ಗೆ ಭರವಸೆ ನೀಡುವಂತೆ ಯುಪಿಎಸ್‍ಇಬಿಇಎ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಮಾರ್ ಮುಖ್ಯಮಂತ್ರಿ ಯೋಗಿ ಅವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.

ಅಲ್ಲದೇ, 2017ರ ಮಾರ್ಚ್‍ನಿಂದ2018-ಡಿಸೆಂಬರ್ ವರೆಗೆ ಡಿ.ಎಚ್.ಎಫ್‍.ಎಲ್ ನಲ್ಲಿ ವಿದ್ಯುತ್ ಕಾರ್ಮಿಕರ ಭವಿಷ್ಯ ನಿಧಿಯನ್ನು ಠೇವಣಿಯಾಗಿ ಇರಿಸಲಾಗಿದೆ. ಡಿಎಚ್‍ಎಫ್‍ಎಲ್ ಕಂಪನಿಯು ಇತರೆ ಖಾಸಗಿ ವಿವಾದಿತ ಕಂಪನಿಗಳೊಂದಿಗೆ ನಡೆಸುವ ವ್ಯಾಪಾರ-ವಹಿವಾಟುಗಳ ಹಿನ್ನೆಲೆಯಲ್ಲಿ ಮುಂಬೈ ಹೈಕೋರ್ಟ್ ಸಹ ಪ್ರಕರಣವೊಂದರಲ್ಲಿ ತಡೆಯಾಜ್ಞೆ ನೀಡಿದೆ.

ಸುಮಾರು 2,600 ಕೋಟಿ ರೂ.ಗಳಿಗೂ ಅಧಿಕ ಹಣ ಡಿಎಚ್‍ಎಫ್‍ಎಲ್ ನಲ್ಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಹೇಳುತ್ತಾರೆ. ಕಾರ್ಮಿಕರಿಗೆ ಸೇರಿದ ಭವಿಷ್ಯನಿಧಿಯು ಖಾಸಗಿ ಕಂಪನಿಯ ವ್ಯವಹಾರಕ್ಕೆ ವರ್ಗಾಯಿಸುವುದು ಗಂಭೀರ ಅಪರಾಧ. ಕಾರ್ಮಿಕರ ಸೇವಾ ನಿವೃತ್ತಿಯ ನಂತರ ಈ ಭವಿಷ್ಯನಿಧಿ ಅವರನ್ನು ಕಾಪಾಡುತ್ತದೆ. ಇಂತಹ ಹಣವನ್ನು ಖಾಸಗಿ ಕಂಪನಿಗೆ ನೀಡುವುದು ಎಷ್ಟು ಸರಿ ಎಂದು ಸಂಸ್ಥೆಯ ಎಂಜಿನಿಯರರು ಪ್ರಶ್ನಿಸುತ್ತಿದ್ದಾರೆ.

ಇನ್ನು ಈ ಕುರಿತು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ಆಡಳಿತಕ್ಕೆ ಸವಾಲು
ತಮ್ಮ ಕಣ್ಣು ತಪ್ಪಿಸಿ ಪ್ರಕರಣ ನಡೆದಿದೆ ಎನ್ನುವುದಾದರೆ ತನಿಖೆ ತೀವ್ರಗೊಳಿಸಲಿ ಎಂದು ಅಖಿಲ ಭಾರತ ವಿದ್ಯುತ್ ಎಂಜಿನಿಯರರ ಒಕ್ಕೂಟದ ಅಧ್ಯಕ್ಷ ಶೈಲೇಂದ್ರ ದುಬೆ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪಾರದರ್ಶಕ ಆಡಳಿತಕ್ಕೆ ಸವಾಲು ಹಾಕಿದ್ದಾರೆ. ಖಾಸಗಿ ಕಂಪನಿಗೆ ಹೂಡಿದ ಹಣವನ್ನು ಶೀಘ್ರವೇ ವಾಪಸ್ ಪಡೆಯಬೇಕು. ಯಾರ ಆದೇಶದ ಮೇರೆಗೆ ಮಂಡಳಿಯು ಕಾರ್ಮಿಕರ ಭವಿಷ್ಯನಿಧಿಯನ್ನು ಖಾಸಗಿ ಕಂಪನಿಯಲ್ಲಿ ಹೂಡಲು ನಿರ್ಧರಿಸಿತು?. ಮಂಡಳಿಯು ಬಹುದೊಡ್ಡ ತಪ್ಪು ಮಾಡಿದೆ. ಬಹುಕೋಟಿ ರೂ.ಗಳ ಹಗರಣ ಇದಾಗಲಿದೆ. ತನಿಖೆಯ ಮೂಲಕವೇ ಬಯಲಿಗೆಳೆಯಬೇಕು ಎಂದು ಆಗ್ರಹಿಸಿದ್ದಾರೆ.

ದುಬೈಯ ವಿವಾದಿತ “ಮಿರ್ಚಿ’ ಸಂಪರ್ಕ
ಭೂ ಅಕ್ರಮಗಳಿಗೆ ಸಂಬಂಧಿಸಿದಂತೆ ದೇಶದ್ರೋಹಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ವ್ಯವಹಾರಗಳು ಬಯಲಿಗೆ ಬರುತ್ತಿದ್ದಂತೆ, ಜಾರಿ ನಿರ್ದೇಶನಾಲಯವು ಡಿ.ಎಚ್.ಎಫ್.ಎಲ್ ಸನ್ ಬ್ಲಿಂಕ್ ರಿಯಲ್ ಎಸ್ಟೇಟ್ ಸಂಸ್ಥೆಗಳ ವಹಿವಾಟುಗಳನ್ನು ಪರಿಶೀಲಿಸಿ ತನಿಖೆಗೆ ಒಳಪಡಿಸಿತ್ತು. ಈ ವಹಿವಾಟುಗಳಿಂದ ದುಬೈಯಲ್ಲಿರುವ “ಮಿರ್ಚಿ’ ಸಂಸ್ಥೆಯ ಮೂಲಕವೇ ದಾವೂದ್ ಗುಂಪಿಗೆ ಹಣ ರವಾನೆಯಾಗುತ್ತಿತ್ತು.
ಡಿ.ಎಚ್.ಎಫ್.ಎಲ್ ಸಂಸ್ಥೆಯ ಅಧ್ಯಕ್ಷ ಕಪಿಲ್ ವಾಧವನ್ ಹಾಗೂ ಆತನ ಸಹೋದರ ಧೀರಜ್ ಅವರನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಸುಮಾರು 2186 ಕೋಟಿ ರೂ.ಗಳ ಸಾಲ ನೀಡಿದ್ದರ ಬಗ್ಗೆ ಪ್ರಶ್ನಿಸಿತ್ತು.

ಕಾರ್ಮಿಕರ ಭವಿಷ್ಯ ನಿಧಿಯನ್ನು ಖಾಸಗಿ ಕಂಪನಿಗೆ ಅದರಲ್ಲೂ ವಿವಾದಿತ ಕಂಪನಿಯಲ್ಲಿ ತೊಡಗಿಸಿದ ಉತ್ತರಪ್ರದೇಶ ಸರ್ಕಾರ ಗಂಭೀರ ಅಪರಾಧ ಎಸಗಿದ್ದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಕೋಟ್ಯಂತರ ರೂ.ಗಳ ದುರುಪಯೋಗಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತರಿಸಬೇಕು ಎಂಬ ಆಗ್ರಹ ಹೆಚ್ಚುತ್ತಿದೆ.
(ಮಾಹಿತಿ ಮೂಲ: ನ್ಯಾಷನಲ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...