Homeಫ್ಯಾಕ್ಟ್‌ಚೆಕ್FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ...

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

- Advertisement -
- Advertisement -

ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ಮಂಡನೆಗೆ ಮುಂದಾಗಿರುವ ನಡುವೆ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ, ಸಂಘ ಪರಿವಾರ ಮತ್ತು ಅದರ ಮಿತ್ರ ಪಕ್ಷಗಳು ರೈತರು, ದೇವಸ್ಥಾನಗಳು, ಮಠಗಳು, ಸರ್ಕಾರಿ ಶಾಲಾ-ಕಾಲೇಜುಗಳು ಸೇರಿದಂತೆ ಹಲವರ ಜಮೀನುಗಳನ್ನು ವಕ್ಫ್‌ ಬೋರ್ಡ್ ಕಬಳಿಸುತ್ತಿದೆ ಎಂಬ ಆರೋಪ ಮಾಡಿದೆ.

ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್ ರೈತರ ಜಮೀನುಗಳನ್ನು ತನ್ನದೆಂದು ಹೇಳುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಒಂದು ತಿಂಗಳು ಬಿಜೆಪಿ ಮತ್ತು ಸಂಘ ಪರಿವಾರ ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದ್ದಿತ್ತು. ಕೊನೆಗೆ ಸರ್ಕಾರ ಯಾವುದೇ ರೈತರಿಗೆ ವಕ್ಫ್‌ ಭೂಮಿ ಸಂಬಂಧ ನೋಟಿಸ್ ನೀಡುವುದಿಲ್ಲ. ಕೊಟ್ಟ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ ಬಳಿಕ, ಈಗ ವಿಷಯ ಸ್ವಲ್ಪ ತಣ್ಣಗಾಗಿದೆ.

ಪ್ರತಿದಿನ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲ ಸುದ್ದಿ ವಾಹಿನಿಗಳಲ್ಲಿ ಅಲ್ಲಲ್ಲಿ ವಕ್ಫ್‌ ಬೋರ್ಡ್ ಜಮೀನು ಸಂಬಂಧ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಈಗಲೂ ಹಂಚಲಾಗುತ್ತಿದೆ. ಇದರ ಭಾಗವಾಗಿ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹಬ್ಬಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಇಂದು (ನ.20) ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹರಿದಾಡುತ್ತಿರುವುದು ಗಮನಾರ್ಹ

ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ನವೆಂಬರ್ 19ರಂದು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡು “ವಕ್ಫ್‌ ಬೋರ್ಡ್ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನ ತನ್ನದೆಂದು ಹೇಳಿದೆ. ಅದಕ್ಕೆ ಯುಬಿಟಿ (ಶಿವಸೇನೆ ಉದ್ದವ್ ಠಾಕ್ರೆ ಬಣ) ಮತ್ತು ಕಾಂಗ್ರೆಸ್‌ ಬೇಡ ಎಂಬುವುದಾಗಿ ಹೇಳುತ್ತಿರುವುದು” ಎಂದು ಬರೆದುಕೊಂಡಿದ್ದರು. ನಿತೇಶ್ ರಾಣೆ ಹಂಚಿಕೊಂಡಿದ್ದ ಫೋಟೋ ಮೇಲೆ ‘ಸಕಾಲ್’ ಎಂಬ ಲೋಗೋ ಇತ್ತು.

सनातनी Rinki (@rynkee) ಎಂಬ ಎಕ್ಸ್‌ ಬಳಕೆದಾರರು ನವೆಂಬರ್ 18ರಂದು ಸಕಾಲ್ ಲೋಗೋ ಇರುವ ಅದೇ ಪೋಟೋವನ್ನು ಹಂಚಿಕೊಂಡು “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನೂ ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ. ಎಂವಿಎ ಉಲಮಾ ಮಂಡಳಿಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಪ್ರೀತಿಯ ಹಿಂದೂಗಳೇ..ನಿಮಗೆ ಕ್ರೊನೋಲಜಿ ಅರ್ಥವಾಗಿರಬಹುದು. ಬಟೇಂಗೆ ತೊ ಕಟೇಂಗೆ, ಏಕೆ ಹೈ ತೋ ಸೇಫ್‌ ಹೈ, ಮಹಾಯುತಿ ಏಕೈಕ ಆಯ್ಕೆ” ಎಂದು ಬರೆದುಕೊಂಡಿದ್ದರು.

Kreately.in ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ” ಎಂದು ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು.

ಈ ಪೋಸ್ಟರ್‌ ಅನ್ನು ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ @MrSinha ಹಂಚಿಕೊಂಡು “ಸಾಕೆಂದರೆ, ಸಾಕು. ಅವರು ಕೈ ಮೀರುತ್ತಿದ್ದಾರೆ, ಅವರನ್ನು ನಿಲ್ಲಿಸಬೇಕಾಗಿದೆ” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ‘ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ಕಬಳಿಸಿದೆ’ ಎಂಬರ್ಥ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಈ ಕುರಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಹಲವರು ಪೋಸ್ಟರ್ ಹಂಚಿಕೊಂಡಿರುವ ಸಕಾಲ್ ನ್ಯೂಸ್ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ”ನಾವು ಈ ರೀತಿಯ ಗ್ರಾಫಿಕ್ಸ್ ಹಂಚಿಕೊಂಡಿಲ್ಲ. ಯಾರೋ ನಮ್ಮ ಲೋಗೋ ಬಳಸಿಕೊಂಡು, ನಮ್ಮದೇ ಶೈಲಿಯಲ್ಲಿ ಗ್ರಾಫಿಕ್ಸ್ ಮಾಡಿದ್ದಾರೆ” ಎಂದು ಸ್ಪಷ್ಟಪಡಿಸಿರುವುದು ಕಂಡು ಬಂದಿದೆ.

ಅಲ್ಲದೆ, ಸಕಾಲ್ ನ್ಯೂಸ್ ತಮ್ಮ ಹೆಸರಿನಲ್ಲಿ ಸುಳ್ಳು ಪೋಸ್ಟ್ ಹಂಚಿಕೊಂಡಿರುವ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿಯನ್ನೂ ಬರೆದಿದೆ. ಅದರಲ್ಲಿ, ತಮ್ಮ ಅಸಲಿ ಪೋಸ್ಟರ್ ಮತ್ತು ನಕಲಿ ಪೋಸ್ಟರ್ ನಡುವಿನ ವ್ಯತ್ಯಾಸಗಳನ್ನು ತಿಳಿಸುವ ಕೆಲ ಅಂಶಗಳನ್ನು ಎತ್ತಿ ತೋರಿಸಿದೆ. ಅವುಗಳ ಹೀಗಿವೆ..

1. ಸಕಾಲ್ ನ್ಯೂಸ್ ತನ್ನ ಪೋಸ್ಟರ್‌ನಲ್ಲಿ ಸಂಪೂರ್ಣ ಫೋಟೋವನ್ನು ಬಳಸುತ್ತದೆ ಮತ್ತು ಕೆಳಗಿನ ಟೆಕ್ಸ್ಟ್‌ ಅನ್ನು ಎಡದಿಂದ ಹಾಕುತ್ತದೆ. ಆದರೆ, ನಕಲಿ ಪೋಸ್ಟರ್‌ನಲ್ಲಿ ಅರ್ಧ ಫೋಟೋವನ್ನು ಬಳಸಲಾಗಿದೆ ಮತ್ತು ಟೆಕ್ಸ್ಟ್ ಅನ್ನು ಮಧ್ಯದಲ್ಲಿ ಹಾಕಲಾಗಿದೆ.

2. ಸಕಾಲ್ ನ್ಯೂಸ್ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟರ್‌ ಮಾಡಿದ್ದರೆ, ಅದನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳುತ್ತಿತ್ತು. ಆದರೆ, ಸಕಾಲ್ ನ್ಯೂಸ್ ಎಲ್ಲೂ ವೈರಲ್ ಪೋಸ್ಟರ್‌ ಅನ್ನು ಎಲ್ಲೂ ಹಂಚಿಕೊಂಡಿಲ್ಲ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ಮುಂಬೈ ಸಿದ್ಧಿವಿನಾಯಕ ದೇವಸ್ಥಾನದ ಕೋಶಾಧಿಕಾರಿ ಹಾಗೂ ಬಿಜೆಪಿ ಮುಂಬೈನ ಉಪಾಧ್ಯಕ್ಷ ಪವನ್ ತ್ರಿಪಾಠಿ, ವಕ್ಫ್‌ ಬೋರ್ಡ್ ದೇವಸ್ಥಾನದ ಮೇಲೆ ಹಕ್ಕು ಸ್ಥಾಪಿಸಿದೆ ಎಂಬುವುದನ್ನು ಅಲ್ಲಗಳೆದಿದ್ದಾರೆ. ಮುಂಬೈನ ಸಿದ್ಧಿವಿನಾಯಕ ದೇವಸ್ಥಾನವು ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ. ಪ್ರಪಂಚದಾದ್ಯಂತ ವಾಸಿಸುವ ಎಲ್ಲಾ ಸನಾತನಿಗಳಲ್ಲಿ ಇದರ ಬಗ್ಗೆ ಅಪಾರ ಗೌರವ ಇದೆ. ಆದ್ದರಿಂದ ಸಿದ್ಧಿವಿನಾಯಕ ದೇವಸ್ಥಾನವನ್ನು ಯಾವುದೇ ಮಂಡಳಿ ಅಥವಾ ಸಂಸ್ಥೆ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದು ಗಣೇಶನ ಭಕ್ತರಿಗೆ ಸೇರಿದ್ದು ಮತ್ತು ಅವರಿಗಾಗಿ ಸದಾ ಉಳಿಯುತ್ತದೆ” ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖವಾಣಿ ಆರ್ಗನೈಸರ್ ಪವನ್ ತ್ರಿಪಾಠಿ ಅವರ ಹೇಳಿಕೆ ಕುರಿತು ಸುದ್ದಿ ಪ್ರಕಟಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ಮುಂಬೈ ಜಿಲ್ಲಾ ವಕ್ಫ್ ಅಧಿಕಾರಿಯನ್ನು ಸಂಪರ್ಕಿಸಿ ವೈರಲ್ ಸುದ್ದಿಯ ಕುರಿತು ಮಾಹಿತಿ ಕೇಳಿದ್ದು, ಅವರು “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಬಲಪಂಥೀಯ ಎಕ್ಸ್‌ ಬಳಕೆದಾರ @MrSinha ಹಂಚಿಕೊಂಡಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚಥುರ್ವೇದಿ ” ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದರೂ ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಸೈಬರ್ ವಿಭಾಗ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಪಿಐಬಿ ತಂಡ ಇದನ್ನು ಏನಾದರು ಫ್ಯಾಕ್ಟ್‌ಚೆಕ್ ಮಾಡಿ ಕ್ರಮ ಕೈಗೊಳ್ಳುತ್ತದಾ? ಎಂದು ಪ್ರಶ್ನಿಸಿದ್ದಾರೆ.

@MrSinha ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಯುವಸೇನೆ ಅಧ್ಯಕ್ಷ ಆದಿತ್ಯ ಠಾಕ್ರೆ “ನಿಮ್ಮ ಮತಕ್ಕಾಗಿ ಮಹಾರಾಷ್ಟ್ರದಲ್ಲಿ ನಮ್ಮ ಭಾವನೆಗಳೊಂದಿಗೆ ಆಟವಾಡಬೇಡಿ” ಎಂದಿದ್ದಾರೆ.

ಒಟ್ಟಿನಲ್ಲಿ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...