Homeಫ್ಯಾಕ್ಟ್‌ಚೆಕ್FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ...

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

- Advertisement -
- Advertisement -

ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ಮಂಡನೆಗೆ ಮುಂದಾಗಿರುವ ನಡುವೆ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ, ಸಂಘ ಪರಿವಾರ ಮತ್ತು ಅದರ ಮಿತ್ರ ಪಕ್ಷಗಳು ರೈತರು, ದೇವಸ್ಥಾನಗಳು, ಮಠಗಳು, ಸರ್ಕಾರಿ ಶಾಲಾ-ಕಾಲೇಜುಗಳು ಸೇರಿದಂತೆ ಹಲವರ ಜಮೀನುಗಳನ್ನು ವಕ್ಫ್‌ ಬೋರ್ಡ್ ಕಬಳಿಸುತ್ತಿದೆ ಎಂಬ ಆರೋಪ ಮಾಡಿದೆ.

ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್ ರೈತರ ಜಮೀನುಗಳನ್ನು ತನ್ನದೆಂದು ಹೇಳುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಒಂದು ತಿಂಗಳು ಬಿಜೆಪಿ ಮತ್ತು ಸಂಘ ಪರಿವಾರ ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದ್ದಿತ್ತು. ಕೊನೆಗೆ ಸರ್ಕಾರ ಯಾವುದೇ ರೈತರಿಗೆ ವಕ್ಫ್‌ ಭೂಮಿ ಸಂಬಂಧ ನೋಟಿಸ್ ನೀಡುವುದಿಲ್ಲ. ಕೊಟ್ಟ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ ಬಳಿಕ, ಈಗ ವಿಷಯ ಸ್ವಲ್ಪ ತಣ್ಣಗಾಗಿದೆ.

ಪ್ರತಿದಿನ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲ ಸುದ್ದಿ ವಾಹಿನಿಗಳಲ್ಲಿ ಅಲ್ಲಲ್ಲಿ ವಕ್ಫ್‌ ಬೋರ್ಡ್ ಜಮೀನು ಸಂಬಂಧ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಈಗಲೂ ಹಂಚಲಾಗುತ್ತಿದೆ. ಇದರ ಭಾಗವಾಗಿ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹಬ್ಬಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಇಂದು (ನ.20) ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹರಿದಾಡುತ್ತಿರುವುದು ಗಮನಾರ್ಹ

ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ನವೆಂಬರ್ 19ರಂದು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡು “ವಕ್ಫ್‌ ಬೋರ್ಡ್ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನ ತನ್ನದೆಂದು ಹೇಳಿದೆ. ಅದಕ್ಕೆ ಯುಬಿಟಿ (ಶಿವಸೇನೆ ಉದ್ದವ್ ಠಾಕ್ರೆ ಬಣ) ಮತ್ತು ಕಾಂಗ್ರೆಸ್‌ ಬೇಡ ಎಂಬುವುದಾಗಿ ಹೇಳುತ್ತಿರುವುದು” ಎಂದು ಬರೆದುಕೊಂಡಿದ್ದರು. ನಿತೇಶ್ ರಾಣೆ ಹಂಚಿಕೊಂಡಿದ್ದ ಫೋಟೋ ಮೇಲೆ ‘ಸಕಾಲ್’ ಎಂಬ ಲೋಗೋ ಇತ್ತು.

सनातनी Rinki (@rynkee) ಎಂಬ ಎಕ್ಸ್‌ ಬಳಕೆದಾರರು ನವೆಂಬರ್ 18ರಂದು ಸಕಾಲ್ ಲೋಗೋ ಇರುವ ಅದೇ ಪೋಟೋವನ್ನು ಹಂಚಿಕೊಂಡು “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನೂ ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ. ಎಂವಿಎ ಉಲಮಾ ಮಂಡಳಿಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಪ್ರೀತಿಯ ಹಿಂದೂಗಳೇ..ನಿಮಗೆ ಕ್ರೊನೋಲಜಿ ಅರ್ಥವಾಗಿರಬಹುದು. ಬಟೇಂಗೆ ತೊ ಕಟೇಂಗೆ, ಏಕೆ ಹೈ ತೋ ಸೇಫ್‌ ಹೈ, ಮಹಾಯುತಿ ಏಕೈಕ ಆಯ್ಕೆ” ಎಂದು ಬರೆದುಕೊಂಡಿದ್ದರು.

Kreately.in ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ” ಎಂದು ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು.

ಈ ಪೋಸ್ಟರ್‌ ಅನ್ನು ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ @MrSinha ಹಂಚಿಕೊಂಡು “ಸಾಕೆಂದರೆ, ಸಾಕು. ಅವರು ಕೈ ಮೀರುತ್ತಿದ್ದಾರೆ, ಅವರನ್ನು ನಿಲ್ಲಿಸಬೇಕಾಗಿದೆ” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ‘ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ಕಬಳಿಸಿದೆ’ ಎಂಬರ್ಥ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಈ ಕುರಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಹಲವರು ಪೋಸ್ಟರ್ ಹಂಚಿಕೊಂಡಿರುವ ಸಕಾಲ್ ನ್ಯೂಸ್ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ”ನಾವು ಈ ರೀತಿಯ ಗ್ರಾಫಿಕ್ಸ್ ಹಂಚಿಕೊಂಡಿಲ್ಲ. ಯಾರೋ ನಮ್ಮ ಲೋಗೋ ಬಳಸಿಕೊಂಡು, ನಮ್ಮದೇ ಶೈಲಿಯಲ್ಲಿ ಗ್ರಾಫಿಕ್ಸ್ ಮಾಡಿದ್ದಾರೆ” ಎಂದು ಸ್ಪಷ್ಟಪಡಿಸಿರುವುದು ಕಂಡು ಬಂದಿದೆ.

ಅಲ್ಲದೆ, ಸಕಾಲ್ ನ್ಯೂಸ್ ತಮ್ಮ ಹೆಸರಿನಲ್ಲಿ ಸುಳ್ಳು ಪೋಸ್ಟ್ ಹಂಚಿಕೊಂಡಿರುವ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿಯನ್ನೂ ಬರೆದಿದೆ. ಅದರಲ್ಲಿ, ತಮ್ಮ ಅಸಲಿ ಪೋಸ್ಟರ್ ಮತ್ತು ನಕಲಿ ಪೋಸ್ಟರ್ ನಡುವಿನ ವ್ಯತ್ಯಾಸಗಳನ್ನು ತಿಳಿಸುವ ಕೆಲ ಅಂಶಗಳನ್ನು ಎತ್ತಿ ತೋರಿಸಿದೆ. ಅವುಗಳ ಹೀಗಿವೆ..

1. ಸಕಾಲ್ ನ್ಯೂಸ್ ತನ್ನ ಪೋಸ್ಟರ್‌ನಲ್ಲಿ ಸಂಪೂರ್ಣ ಫೋಟೋವನ್ನು ಬಳಸುತ್ತದೆ ಮತ್ತು ಕೆಳಗಿನ ಟೆಕ್ಸ್ಟ್‌ ಅನ್ನು ಎಡದಿಂದ ಹಾಕುತ್ತದೆ. ಆದರೆ, ನಕಲಿ ಪೋಸ್ಟರ್‌ನಲ್ಲಿ ಅರ್ಧ ಫೋಟೋವನ್ನು ಬಳಸಲಾಗಿದೆ ಮತ್ತು ಟೆಕ್ಸ್ಟ್ ಅನ್ನು ಮಧ್ಯದಲ್ಲಿ ಹಾಕಲಾಗಿದೆ.

2. ಸಕಾಲ್ ನ್ಯೂಸ್ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟರ್‌ ಮಾಡಿದ್ದರೆ, ಅದನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳುತ್ತಿತ್ತು. ಆದರೆ, ಸಕಾಲ್ ನ್ಯೂಸ್ ಎಲ್ಲೂ ವೈರಲ್ ಪೋಸ್ಟರ್‌ ಅನ್ನು ಎಲ್ಲೂ ಹಂಚಿಕೊಂಡಿಲ್ಲ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ಮುಂಬೈ ಸಿದ್ಧಿವಿನಾಯಕ ದೇವಸ್ಥಾನದ ಕೋಶಾಧಿಕಾರಿ ಹಾಗೂ ಬಿಜೆಪಿ ಮುಂಬೈನ ಉಪಾಧ್ಯಕ್ಷ ಪವನ್ ತ್ರಿಪಾಠಿ, ವಕ್ಫ್‌ ಬೋರ್ಡ್ ದೇವಸ್ಥಾನದ ಮೇಲೆ ಹಕ್ಕು ಸ್ಥಾಪಿಸಿದೆ ಎಂಬುವುದನ್ನು ಅಲ್ಲಗಳೆದಿದ್ದಾರೆ. ಮುಂಬೈನ ಸಿದ್ಧಿವಿನಾಯಕ ದೇವಸ್ಥಾನವು ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ. ಪ್ರಪಂಚದಾದ್ಯಂತ ವಾಸಿಸುವ ಎಲ್ಲಾ ಸನಾತನಿಗಳಲ್ಲಿ ಇದರ ಬಗ್ಗೆ ಅಪಾರ ಗೌರವ ಇದೆ. ಆದ್ದರಿಂದ ಸಿದ್ಧಿವಿನಾಯಕ ದೇವಸ್ಥಾನವನ್ನು ಯಾವುದೇ ಮಂಡಳಿ ಅಥವಾ ಸಂಸ್ಥೆ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದು ಗಣೇಶನ ಭಕ್ತರಿಗೆ ಸೇರಿದ್ದು ಮತ್ತು ಅವರಿಗಾಗಿ ಸದಾ ಉಳಿಯುತ್ತದೆ” ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖವಾಣಿ ಆರ್ಗನೈಸರ್ ಪವನ್ ತ್ರಿಪಾಠಿ ಅವರ ಹೇಳಿಕೆ ಕುರಿತು ಸುದ್ದಿ ಪ್ರಕಟಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ಮುಂಬೈ ಜಿಲ್ಲಾ ವಕ್ಫ್ ಅಧಿಕಾರಿಯನ್ನು ಸಂಪರ್ಕಿಸಿ ವೈರಲ್ ಸುದ್ದಿಯ ಕುರಿತು ಮಾಹಿತಿ ಕೇಳಿದ್ದು, ಅವರು “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಬಲಪಂಥೀಯ ಎಕ್ಸ್‌ ಬಳಕೆದಾರ @MrSinha ಹಂಚಿಕೊಂಡಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚಥುರ್ವೇದಿ ” ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದರೂ ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಸೈಬರ್ ವಿಭಾಗ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಪಿಐಬಿ ತಂಡ ಇದನ್ನು ಏನಾದರು ಫ್ಯಾಕ್ಟ್‌ಚೆಕ್ ಮಾಡಿ ಕ್ರಮ ಕೈಗೊಳ್ಳುತ್ತದಾ? ಎಂದು ಪ್ರಶ್ನಿಸಿದ್ದಾರೆ.

@MrSinha ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಯುವಸೇನೆ ಅಧ್ಯಕ್ಷ ಆದಿತ್ಯ ಠಾಕ್ರೆ “ನಿಮ್ಮ ಮತಕ್ಕಾಗಿ ಮಹಾರಾಷ್ಟ್ರದಲ್ಲಿ ನಮ್ಮ ಭಾವನೆಗಳೊಂದಿಗೆ ಆಟವಾಡಬೇಡಿ” ಎಂದಿದ್ದಾರೆ.

ಒಟ್ಟಿನಲ್ಲಿ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...