Homeಚಳವಳಿಎನ್‌ಟಿಎ ವಿರುದ್ಧ ಘೋಷಣೆ ಬರೆದ ಆರೋಪ | ವಿದ್ಯಾರ್ಥಿಯನ್ನು 6 ತಿಂಗಳು ಉಚ್ಛಾಟಿಸಿದ ದೆಹಲಿ ವಿಶ್ವವಿದ್ಯಾಲಯ

ಎನ್‌ಟಿಎ ವಿರುದ್ಧ ಘೋಷಣೆ ಬರೆದ ಆರೋಪ | ವಿದ್ಯಾರ್ಥಿಯನ್ನು 6 ತಿಂಗಳು ಉಚ್ಛಾಟಿಸಿದ ದೆಹಲಿ ವಿಶ್ವವಿದ್ಯಾಲಯ

- Advertisement -
- Advertisement -

ಜುಲೈನಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನ ಗೋಡೆಯ ಮೇಲೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA)ಯ ಬಗ್ಗೆ “ಆಕ್ಷೇಪಾರ್ಹ” ಘೋಷಣೆಗಳನ್ನು ಬರೆದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬರನ್ನು ವಿಶ್ವವಿದ್ಯಾಲಯ ಆರು ತಿಂಗಳ ಕಾಲ ಹೊರಹಾಕಿದೆ ಎಂದು ಸೋಮವಾರ ವರದಿಯಾಗಿದೆ. ವಿದ್ಯಾರ್ಥಿಯನ್ನು 6 ತಿಂಗಳು

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತದೆ. ಈ ಸಂಸ್ಥೆಯು, ಸ್ನಾತಕಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ನಡೆಸಿದ 2024ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷೆಗಳಲ್ಲಿ ಅಕ್ರಮ ನಡೆಸಿದೆ ಎಂದು ಆರೋಪಿಸಿ ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆದಿತ್ತು. ವಿದ್ಯಾರ್ಥಿಯನ್ನು 6 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶ್ವವಿದ್ಯಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ, ಉಚ್ಚಾಟನೆಗೆ ಒಳಗಾಗಿರುವ 22 ವರ್ಷದ ವಿದ್ಯಾರ್ಥಿಯು ತರಗತಿಗಳಿಗೆ ಹಾಜರಾಗುವುದು, ಪರೀಕ್ಷೆಗಳನ್ನು ಬರೆಯುವುದು ಅಥವಾ ಸಾಂಸ್ಥಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಆರು ತಿಂಗಳವರೆಗೆ ನಿರ್ಬಂಧಿಸಿದೆ.

ಸ್ಲಾವೊನಿಕ್ ಮತ್ತು ಫಿನ್ನೊ-ಉಗ್ರಿಯನ್ ಅಧ್ಯಯನ ವಿಭಾಗದಲ್ಲಿ ರಷ್ಯನ್ ಭಾಷೆಯಲ್ಲಿ ತನ್ನ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ತನ್ನನ್ನು ಉಚ್ಚಾಟನೆ ಮಾಡಿರುವ ವಿಶ್ವವಿದ್ಯಾಲಯದ ನಿರ್ಧಾರವು ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ದಿಶಾ ವಿದ್ಯಾರ್ಥಿಗಳ ಸಂಘಟನೆಯ ಕಾರ್ಯಕರ್ತರಾಗಿರುವ ವಿದ್ಯಾರ್ಥಿಯು ಕಾನೂನು ಫ್ಯಾಕಲ್ಟಿ ಬಳಿ ಗೋಡೆಯ ಮೇಲೆ ಘೋಷಣೆಗಳನ್ನು ಬರೆಯುತ್ತಿದ್ದಾಗ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿಗೆ ಜುಲೈ 31 ರಂದು ಸಿಕ್ಕಿಬಿದ್ದರು. “ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ವಿರುದ್ಧದ ನಮ್ಮ ಆಂದೋಲನದ ಭಾಗವಾಗಿ, ನಾನು ವಿಶ್ವವಿದ್ಯಾಲಯದ ಗೋಡೆಯೊಂದರಲ್ಲಿ ‘SCRAP NTA’ ಎಂಬ ಪದಗಳನ್ನು ಬರೆದಿದ್ದೇನೆ” ಎಂದು ವಿದ್ಯಾರ್ಥಿ ಹೇಳಿದ್ದಾರೆ.

ವಿದ್ಯಾರ್ಥಿಯ ಸಿಕ್ಕಿಬಿದ್ದ ಅದೇ ದಿನ, ಕಾವಲುಗಾರರ ದೂರಿನ ಆಧಾರದ ಮೇಲೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 173 ರ ಅಡಿಯಲ್ಲಿ ಮಾರಿಸ್ ನಗರ ಪೊಲೀಸ್ ಠಾಣೆಯಲ್ಲಿ ಈ ವಿದ್ಯಾರ್ಥಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಸೆಕ್ಷನ್ 173 ಕಾಗ್ನೈಸಬಲ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾದರೆ ಪೊಲೀಸರು ಮ್ಯಾಜಿಸ್ಟ್ರೇಟ್‌ನಿಂದ ಆದೇಶವಿಲ್ಲದೆ ತನಿಖೆ ಮಾಡಬಹುದು ಮತ್ತು ವಾರಂಟ್ ಇಲ್ಲದೆ ಬಂಧಿಸಬಹುದಾಗಿದೆ.

ಎಫ್‌ಐಆರ್‌ನ ಪ್ರತಿಯನ್ನು ಸ್ವೀಕರಿಸಿದ ನಂತರ ವಿಶ್ವವಿದ್ಯಾಲಯವು ಆಗಸ್ಟ್ 21 ರಂದು ಅವರನ್ನು ಅಮಾನತುಗೊಳಿಸಿತ್ತು. ವಿದ್ಯಾರ್ಥಿಯ ಮೇಲೆ ಎಫ್‌ಐಆರ್ ದಾಖಲಾದ ನಂತರ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿತ್ತು ಎಂದು ಪ್ರೊಕ್ಟರ್ ರಜನಿ ಅಬ್ಬಿ ಮಂಗಳವಾರ ಹೇಳಿದ್ದಾರೆ. ಆದರೆ, ವಿದ್ಯಾರ್ಥಿಯು ತನ್ನ ಕಾರ್ಯಗಳಿಗಾಗಿ ಪಶ್ಚಾತ್ತಾಪ ವ್ಯಕ್ತಪಡಿಸಿರಲಿಲ್ಲ ಎಂದು ಈ ಸಮಿತಿಯು ಹೇಳಿದೆ.

“ವಿಶ್ವವಿದ್ಯಾನಿಲಯದಲ್ಲಿ ಘೋಷಣೆಗಳನ್ನು ಬರೆಯಲು ಅಥವಾ ಪೋಸ್ಟರ್‌ಗಳನ್ನು ಅಂಟಿಸಲು ಗೊತ್ತುಪಡಿಸಿದ ಸ್ಥಳಗಳಿವೆ. ಘೋಷಣೆಗಳನ್ನು ಬರೆಯಲು ಅಥವಾ ಪೋಸ್ಟರ್‌ಗಳನ್ನು ಅಂಟಿಸಲು ಎಲ್ಲೆಂದರಲ್ಲಿ ಮಾಡಬಾರದು. ಅವರು ಮಾಡಿರುವ ಕೃತ್ಯವು ವಿಶ್ವವಿದ್ಯಾನಿಲಯದ ವಿರೂಪಗೊಳಿಸುವ ಕಾಯಿದೆಗಳ ಉಲ್ಲಂಘನೆಯಾಗಿದೆ” ಎಂದು ತನಿಖಾ ಸಮಿತಿ ಹೇಳಿದೆ.

ನವೆಂಬರ್ 6 ರಂದು ನಡೆದ ಸಮಿತಿಯ ಸಭೆಯಲ್ಲಿ ವಿದ್ಯಾರ್ಥಿಯು ಘೋಷಣೆಗಳನ್ನು ಬರೆಯುವುದನ್ನು ಒಪ್ಪಿಕೊಂಡಿದ್ದು, ತಮ್ಮ ದಿಶಾ ಸಂಘಟನೆಯ “ಕಾರ್ಯತಂತ್ರದ ಯೋಜನೆ” ಭಾಗವಾಗಿ ಇದನ್ನು ಮಾಡಲಾಗಿತ್ತು ಎಂದು ಸಮಿತಿಯು ಸಿದ್ಧಪಡಿಸಿದ ವರದಿ ಹೇಳಿದೆ. “ಇದರ ಪರಿಣಾಮವಾಗಿ, ಕನಿಷ್ಠ ಆರು ತಿಂಗಳ ಅವಧಿಗೆ ಅವರನ್ನು ವಿಶ್ವವಿದ್ಯಾನಿಲಯದಿಂದ ಹೊರಹಾಕಬೇಕು ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...