Homeಕರ್ನಾಟಕ2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು:  2019 ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಡಿಪ್ಲೊಮಾ ವಿದ್ಯಾರ್ಥಿಯ ಕುಟುಂಬಕ್ಕೆ ರಾಜ್ಯ ಹೈಕೋರ್ಟ್ ಪರಿಹಾರವನ್ನು ಹೆಚ್ಚಿಸಿ ತೀರ್ಪು ನೀಡಿದೆ. ಮೋಟಾರ್ ಅಕ್ಸಿಡೆಂಟ್ ಕ್ಲೈಮ್ಸ್ ಟ್ರಿಬ್ಯೂನಲ್ ಆರಂಭದಲ್ಲಿ ನೀಡಿದ್ದ 1,53,000 ಲಕ್ಷ  ರೂ.ವನ್ನು 21,28,800 ಲಕ್ಷ ರೂ.ಗೆ ಹೆಚ್ಚಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಮತ್ತು ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪರಿಷ್ಕೃತ ಪರಿಹಾರವನ್ನು ಆರಂಭದಲ್ಲಿ ವಿಮಾ ಕಂಪನಿಯು ಪಾವತಿಸಬೇಕು. ನಂತರ ವಾಹನ ಮಾಲೀಕರಿಂದ ಮೊತ್ತವನ್ನು ಕಂಪನಿಯು ಮರುಪಡೆಯಬಹುದು. ಈ ಪ್ರಕರಣವು 2019 ರ ಏಪ್ರಿಲ್ 23 ರಂದು ಸ್ನೇಹಿತ ಅರವಿಂದ್ ಅವರೊಂದಿಗೆ 19 ವರ್ಷದ ಎಂ.ಎಸ್. ಶ್ರೀಹರಿ ಅವರ ರಸ್ತೆ ಅಫಘಾತದಿಂದಾದ ಸಾವಿಗೆ ಸಂಬಂಧಿಸಿದೆ.

ಬೆಂಗಳೂರು ಸಮೀಪದ ಹೆಜ್ಜಾಲ-ಕೆಂಪದ್ಯಾಪನಹಳ್ಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಅತಿವೇಗದ ಚಾಲನೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ರಾಮನಗರ ಜಿಲ್ಲೆಯ ಮಲ್ಲತ್ತಹಳ್ಳಿ ಗ್ರಾಮದ ಬಳಿ ಮಣ್ಣಿನ ಗೋಡೆಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯುವಕ ಇಲ್ಲಿನ ಪಿಇಎಸ್ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಹಾಲು ಮಾರಾಟ ವ್ಯವಹಾರದ ಮೂಲಕ ತಿಂಗಳಿಗೆ  20,000  ರೂ. ಸಂಪಾದಿಸುತ್ತಿದ್ದ  ಎಂದು ತಿಳಿಸಿರುವ ಶ್ರೀಹರಿಯ ಕುಟುಂಬದ ಪೋಷಕರು ಮತ್ತು ಸಹೋದರಿ ಆರಂಭದಲ್ಲಿ 30 ಲಕ್ಷ ರೂ. ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ನ್ಯಾಯಾಲಯವು ತನ್ನ ಏಪ್ರಿಲ್ 2022 ರ ಆದೇಶದಲ್ಲಿ, 1.53 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಸವಾರನು ಆ ಸಂದರ್ಭದಲ್ಲಿ ಚಾಲನಾ ಪರವಾನಗಿಯನ್ನು ಹೊಂದಿರಲಿಲ್ಲವಾಗಿದ್ದರಿಂದ ಪ್ರಾಥಮಿಕವಾಗಿ ಮೋಟಾರ್ ಮಾಲೀಕ ಸೂರಜ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಿದೆ.

ಇದನ್ನೂ ಓದಿ…10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

ನ್ಯಾಯಮಂಡಳಿಯ ತೀರ್ಪಿನಿಂದ ಅತೃಪ್ತರಾದ ಕುಟುಂಬವು ಮೇಲ್ಮನವಿ ಸಲ್ಲಿಸಿ, ಸುಪ್ರೀಂ ಕೋರ್ಟ್ ಪೂರ್ವನಿದರ್ಶನಕ್ಕೆ ಅನುಗುಣವಾಗಿ ಪರಿಹಾರವನ್ನು ಮುಂಗಡವಾಗಿ ಪಾವತಿಸಲು ಮತ್ತು ನಂತರ ಮಾಲೀಕರಿಂದ ವಸೂಲಿ ಮಾಡಲು ವಿಮಾ ಕಂಪನಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ,ಚಾಲನಾ ಪರವಾನಿಗೆ ಇಲ್ಲದಿರುವುದು ನೀತಿ ಉಲ್ಲಂಘನೆಯಾಗಿದೆ ಮತ್ತು ಹಕ್ಕುದಾರರು ಶ್ರೀಹರಿಯ ಮೇಲೆ ಆರ್ಥಿಕ ಅವಲಂಬನೆಯನ್ನು ಸಾಕಷ್ಟು ಸಾಬೀತುಪಡಿಸಿಲ್ಲ ಎಂದು ವಿಮಾದಾರರು ವಾದಿಸಿದರು.

ಆದಾಗ್ಯೂ, ಕುಟುಂಬದ ಪರವಾಗಿ ತೀರ್ಪು ನೀಡಿರುವ ಹೈಕೋರ್ಟ್,ಸುಪ್ರೀಂ ಕೋರ್ಟ್ ಸೂಚಿಸಿದ  “ಪಾವತಿ ಮತ್ತು ಮರುಪಡೆಯುವಿಕೆ” ಎಂಬ ನಿರ್ದೇಶನ ಈ ಪ್ರಕರಣಕ್ಕೆ ಅನ್ವಯಿಸುತ್ತದೆ ಎಂದು ಹೇಳಿದೆ. ಶ್ರೀಹರಿಯ ಕುಟುಂಬವು ಆದಾಯವನ್ನು ನಿರ್ಣಾಯಕವಾಗಿ ಸಾಬೀತುಪಡಿಸಲು ಸಾಧ್ಯವಾಗದಿದ್ದರೂ,ಅವರ ವಯಸ್ಸು ಮತ್ತು ಕೌಟುಂಬಿಕ ಪಾತ್ರವನ್ನು ರುಜುವಾತುಪಡಿಸಲಾಗಿದೆ ಎಂದಿದೆ.

ನ್ಯಾಯಾಲಯವು ಅವನ ಮಾಸಿಕ ಗಳಿಕೆಯನ್ನು  14,000 ರೂ. ಎಂದು ಅಂದಾಜು ಮಾಡಿದೆ. ಅರ್ಜಿ ಸಲ್ಲಿಸಿದ ದಿನದಿಂದ ಮೊತ್ತವನ್ನು ಠೇವಣಿ ಇಡುವವರೆಗೆ ಶೇ 6ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ₹21,28,800 ಪಾವತಿಸುವಂತೆ ಪೀಠವು ವಿಮಾ ಕಂಪನಿಗೆ ಸೂಚಿಸಿದೆ.

ಇದನ್ನೂ ಓದಿ….2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...