Homeಮುಖಪುಟಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣೆಯ ನಡುವೆ ಬಿಟ್ ಕಾಯಿನ್ ಸದ್ದು ಮಾಡಿದೆ. ಪ್ರತಿಪಕ್ಷಗಳ ನಾಯಕರಾದ ಕಾಂಗ್ರೆಸ್‌ನ ನಾನಾ ಪಟೋಲೆ ಮತ್ತು ಬಿಜೆಪಿಯ ಸುಪ್ರಿಯಾ ಸುಳೆ ಅವರು ಚುನಾವಣೆಗೆ ಹಣ ನೀಡಲು ಅಕ್ರಮವಾಗಿ ಬಿಟ್‌ಕಾಯಿನ್‌ಗಳನ್ನು ಬಳಸಿರುವುದಾಗಿ ಬಿಜೆಪಿ ಆರೋಪಿಸಿದೆ.

ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನೂ ಗುರಿಯಾಗಿಸಿದ್ದಾರೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದ್ದಾರೆ.

ಚುನಾವಣೆಯ ಹಿನ್ನೆಲೆ ಬಿಜೆಪಿ ತಮ್ಮ ವಿರುದ್ದ ಷಡ್ಯಂತ್ರ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪಗಳನ್ನು ಅಲ್ಲಗಳೆದಿರುವ ಸಂಬಿತ್ ಪಾತ್ರ, “ಶಂಕಿತ ಕ್ರಿಪ್ಟೋ ಕರೆನ್ಸಿ ವಂಚನೆ ವರ್ಷಗಳ ಹಿಂದೆಯೇ ನಡೆದಿದೆ. ಪ್ರತಿಪಕ್ಷಗಳ ಒಕ್ಕೂಟ ಈ ಹಿಂದಿನ ಚುನಾವಣೆಯಲ್ಲೂ ಅದರ ಹಣ ಬಳಸಿದೆ” ಎಂದಿದ್ದಾರೆ. ಈ ಹಗರಣದಲ್ಲಿ ಇದುವರೆಗೆ ಒಳಗೊಂಡಿರುವ ಹಣ 235 ಕೋಟಿ ರೂ. ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.

ಸುಪ್ರಿಯಾ ಸುಳೆ ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿದ್ದು, ಅವರ ಧ್ವನಿಯಲ್ಲಿರುವ ಆಡಿಯೋ ನಕಲಿ ಎಂದಿದ್ದಾರೆ. ಚುನಾವಣಾ ಆಯೋಗ ಮತ್ತು ಮಹಾರಾಷ್ಟ್ರ ಪೊಲೀಸರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

“ಅಮಾಯಕ ಮತದಾರರನ್ನು ಕುತಂತ್ರ ಮೂಲಕ ಸೆಳೆಯಲು ಸುಳ್ಳು ಮಾಹಿತಿಯನ್ನು ಹರಡುತ್ತಿರುವುದು ಗೊತ್ತಿರುವ ವಿಷಯ” ಎಂದು ಸುಳೆ ಹೇಳಿದ್ದಾರೆ.

ಕ್ರಿಪ್ಟೋ ಕರೆನ್ಸಿ ಟ್ರೇಡ್‌ನಲ್ಲಿ ಭಾಗಿಯಾಗಿರುವ ಗೌರವ್ ಮೆಹ್ತಾ ಎಂಬ ವ್ಯಕ್ತಿ ಪ್ರತಿಪಕ್ಷ ನಾಯಕರಿಗೆ ಸಹಾಯ ಮಾಡಲು ಬಿಟ್‌ಕಾಯಿನ್‌ಗಳನ್ನು ಎನ್‌ಕ್ಯಾಶ್ ಮಾಡಿದ ನಂತರ ತನ್ನ ಜೀವಕ್ಕೆ ಅಪಾಯದ ಭಯದಿಂದ ಸಾರ್ವಜನಿಕವಾಗಿ ಹೋಗಲು ನಿರ್ಧರಿಸಿದ್ದಾರೆ. ಈ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸಂಬಿತ್ ಪಾತ್ರಾ ಆರೋಪಿಸಿದ್ದಾರೆ.

ಈಗ ನಡೆದಿರುವ ಹಗರಣದ ಮೂಲ 2018ರಲ್ಲಿ ನಡೆದ ಕ್ರಿಪ್ಟೋ ಕರೆನ್ಸಿ ವಂಚನೆಗೆ ಸಂಬಂಧಿಸಿದೆ. ಈ ಹಿಂದೆ ಮಾಜಿ ಐಪಿಎಸ್‌ ಅಧಿಕಾರಿ ರವೀಂದ್ರನಾಥ್ ಪಾಟೀಲ್ ತನಿಖೆಗೆ ಸಹಾಯ ಮಾಡಲು ಕ್ರಿಪ್ಟೋ ತಜ್ಞರಾಗಿ ಹೋಗಿದ್ದರು. ಬಳಿಕ ಅವರು ಕ್ರಿಪ್ಟೋ ಕರೆನ್ಸಿ ವ್ಯಾಲೆಟ್ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಬಂಧಿತರಾದರು ಎಂದು ಹೇಳಿದ್ದಾರೆ.

ಪಾಟೀಲ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ ಪಾತ್ರಾ, ವ್ಯಾಲೆಟ್‌ ನಾಪತ್ತೆ ಪ್ರಕರಣದಲ್ಲಿ ಇತರ ಇಬ್ಬರು ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಮೆಹ್ತಾ ಅವರು ಪಾಟೀಲ್ ವಿರುದ್ಧ ಸಾಕ್ಷ್ಯವನ್ನು ನೀಡಿದ್ದಾರೆ. ಸುಳೆ ಮತ್ತು ಪಟೋಲೆ ಅವರ ಧ್ವನಿ ದಾಖಲೆಗಳನ್ನು ಹಂಚಿಕೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ನಾನಾ ಪಟೋಲೆ ತನ್ನ ವಿರುದ್ದ ಆರೋಪಗಳನ್ನು ಅಲ್ಲಗಳೆದಿದ್ದು, “ರಾಜ್ಯ ಚುನಾವಣೆಯ ಮೇಲೆ ಪ್ರಭಾವ ಬೀರಲು ಬಿಟ್‌ಕಾಯಿನ್ ದುರುಪಯೋಗದ ಈ ಆರೋಪ ಹೊರಿಸಲಾಗಿದೆ. ನನ್ನ ವಿರುದ್ದದ ಸುಳ್ಳಾರೋಪದ ವಿರುದ್ದ ಕಾನೂನು ಹೋರಾಟ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಂಡಾರಾ ಜಿಲ್ಲೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ, “ತಾನೊಬ್ಬ ರೈತ, ಬಿಟ್‌ಕಾಯಿನ್‌ಗೆ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ರಾಜ್ಯ ಚುನಾವಣೆಗಾಗಿ ಪ್ರತಿಪಕ್ಷ ನಾಯಕರು ಬಿಟ್‌ಕಾಯಿನ್ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಂಗಳವಾರ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿದೆ.

ಇಬ್ಬರು ಪ್ರತಿಪಕ್ಷ ನಾಯಕರಿಗೆ ಸೇರಿದ್ದು ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿರುವ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ, “ಎಂವಿಎ ತನ್ನ ಸೋಲನ್ನು ಗೋಡೆಯ ಮೇಲಿನ ಬರಹದಂತೆ ನೋಡುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ | FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...