Homeಕರ್ನಾಟಕಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ಗಳನ್ನು ಅಳವಡಿಸುವ ಬಿಬಿಎಂಪಿಯ ಪ್ರಸ್ತಾಪವನ್ನು ಸೇವ್ ಅವರ್ ಅನಿಮಲ್ಸ್ ಚಾರಿಟಬಲ್ ಟ್ರಸ್ಟ್ ಮತ್ತು ಪರಿಸರ ಹೋರಾಟಗಾರ್ತಿ ನವೀನ ಕಾಮತ್ ಅವರು ರಾಜ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆಯಾಗಿ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು, ಬಿಬಿಎಂಪಿ ಮತ್ತು ಇತರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೀದಿ ನಾಯಿಗಳ

2024 ಫೆಬ್ರವರಿ 29ರ ಬಿಬಿಎಂಪಿ ಪ್ರಸ್ತಾವನೆಯ ಕಾನೂನುಬದ್ಧತೆಯನ್ನು ಪ್ರಶ್ನಿಸುವ ಈ ಅರ್ಜಿಯ ವಾದವನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ನೋಟಿಸ್‌ಗಳನ್ನು ನೀಡಿದೆ. ನ್ಯಾಯಾಲಯವು ಪ್ರಕರಣವನ್ನು ಡಿಸೆಂಬರ್ 16 ಕ್ಕೆ ಹೆಚ್ಚಿನ ವಿಚಾರಣೆಗೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ”ಬೀದಿ ನಾಯಿಗಳನ್ನು ನಿಯಂತ್ರಿಸಲು ನಾಯಿಗಳಿಗೆ ಮೈಕ್ರೋಚಿಪ್ಪಿಂಗ್ ಅಳವಡಿಸಲು ಬಿಡ್ ನೀಡಲು ಬಿಬಿಎಂಪಿಗೆ ಯಾವುದೇ ಕಾನೂನು ಅಧಿಕಾರವಿಲ್ಲ. ಏಕೆಂದರೆ ಪ್ರಾಣಿ ಜನನ ನಿಯಂತ್ರಣ (ಎಬಿಸಿ) ನಿಯಮಗಳು, 2023, ಇದಕ್ಕೆ ಅನುಮತಿ ನೀಡುವುದಿಲ್ಲ. ಅಲ್ಲದೆ, ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸುವ ಅಧಿಕಾರ ಮತ್ತು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಇದಕ್ಕೆ ಯಾವುದೇ ಅನುಮತಿ ಇರಲಿಲ್ಲ. ಬಿಡ್ ನೀಡುವ ಸಂಪೂರ್ಣ ಪ್ರಕ್ರಿಯೆಯು ಕಾನೂನುಬಾಹಿರವಾಗಿದೆ” ಎಂದು ಹೇಳಿದ್ದಾರೆ.

ಬಿಬಿಎಂಪಿಯ ಜಂಟಿ ನಿರ್ದೇಶಕರು ಪಶ್ಚಿಮ ಮತ್ತು ಆರ್‌ಆರ್‌ನಗರ ವಲಯಗಳಲ್ಲಿ ಪ್ರಾಯೋಗಿಕ ಯೋಜನೆಯಾಗಿ ಮೈಕ್ರೋಚಿಪಿಂಗ್ ಅಳವಡಿಸಲು ಪ್ರಸ್ತಾಪಿಸಿದ್ದು, ಬಿಬಿಎಂಪಿಯ ಉಳಿದ ಆರು ವಲಯಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಪ್ರಸ್ತಾವನೆಯನ್ನು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅವರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

“ಎಬಿಸಿ ನಿಯಮಗಳು – 2023 ರ ಅಡಿಯಲ್ಲಿ ಮೈಕ್ರೋಚಿಪ್ಪಿಂಗ್ ಅಳವಡಿಕೆಯು ಹೆಚ್ಚುವರಿ ವಿಧಾನವಾಗಿದೆ. ಈ ಅಳವಡಿಕೆಯಲ್ಲಿ ಬೀದಿ ನಾಯಿಗಳನ್ನು ಅನೇಕ ಬಾರಿ ಹಿಡಿಯಬೇಕಾಗುತ್ತದೆ, ಇದು ಈ ನಾಯಿಗಳಿಗೆ ಆಘಾತಕಾರಿಯಾಗಿದ್ದು, ಅವುಗಳಿಗೆ ಅನಗತ್ಯ ಒತ್ತಡ ನೀಡುತ್ತದೆ ಅಥವಾ ಅವುಗಳು ಆಕ್ರಮಣಕಾರಿಯಾಗು ಅಪಾಯವಿರುತ್ತದೆ” ಎಂದು ಅರ್ಜಿದಾರರು ದೂರಿದ್ದಾರೆ.

“ನಾಯಿಗಳ ಲಸಿಕೆ ಸ್ಥಿತಿಯನ್ನು ಕಂಡುಹಿಡಿಯಲು ಮತ್ತು ಮೈಕ್ರೋಚಿಪ್‌ಗಳನ್ನು ಸ್ಕ್ಯಾನ್ ಮಾಡಲು ನಾಯಿಗಳನ್ನು ಹಿಡಿಯಬೇಕಾಗುತ್ತದೆ. ಈ ವೇಳೆ ಸಂಬಂಧಿಸಿದ ಏಜೆನ್ಸಿಗಳ ಅನಗತ್ಯ ಪ್ರಯತ್ನಗಳು ಈ ನಾಯಿಗಳು ಅಕ್ರಮಣಕಾರಿಯಾಲು ಕಾರಣವಾಗುತ್ತವೆ.” ಎಂದು ಅವರು ಹೇಳಿದ್ದಾರೆ. ಬೀದಿ ನಾಯಿಗಳ

ಎಬಿಸಿ ನಿಯಮಗಳು, 2023 ರ ನಿಯಮ 8 (2) ಅನ್ನು ಉಲ್ಲೇಖಿಸಿರುವ ಅರ್ಜಿದಾರರು, ಬೀದಿ ನಾಯಿಗಳಿಗೆ ಜಂತುಹುಳು ನಿವಾರಣೆ, ಸಂತಾನಹರಣ ಮತ್ತು ಸಾಮಾನ್ಯ ರೋಗನಿರೋಧಕಕ್ಕೆ ಮಾತ್ರ ನಿರ್ದಿಷ್ಟ ಅನುಮೋದನೆಯನ್ನು ನೀಡಲಾಗಿದೆ ಎಂದು ಕೋರ್ಟ್‌ಗೆ ಹೇಳಿದ್ದಾರೆ. ಆದರೆ ಈ ಅನುಮೋದಿತ ಕಾರ್ಯವಿಧಾನಗಳ ಭಾಗವಾಗಿ ಮೈಕ್ರೋಚಿಪಿಂಗ್ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...