Homeಮುಖಪುಟಮಣಿಪುರ | 7 ಜಿಲ್ಲೆಗಳಲ್ಲಿ ಮತ್ತೆ 3 ದಿನ ಮೊಬೈಲ್ ಇಂಟರ್ನೆಟ್ ಸ್ಥಗಿತ ವಿಸ್ತರಣೆ

ಮಣಿಪುರ | 7 ಜಿಲ್ಲೆಗಳಲ್ಲಿ ಮತ್ತೆ 3 ದಿನ ಮೊಬೈಲ್ ಇಂಟರ್ನೆಟ್ ಸ್ಥಗಿತ ವಿಸ್ತರಣೆ

- Advertisement -
- Advertisement -

ಮಣಿಪುರದಲ್ಲಿ ಹೇರಿದ್ದ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಏಳು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳವರೆಗೆ ರಾಜ್ಯ ಸರ್ಕಾರ ಬುಧವಾರ ವಿಸ್ತರಿಸಿದೆ ಎಂದು ವರದಿಯಾಗಿದೆ. ನವೆಂಬರ್ 16 ರಂದು ಸರ್ಕಾರವು ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಮಣಿಪುರ

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವುದರಿಂದ ಹಾಗೂ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳನ್ನು ಸೃಷ್ಟಿಸುವ ವಿಷಯವನ್ನು ಸಾಮಾಜಿಕ ವಿರೋಧಿ ಜನರು ಹರಡುವುದನ್ನು ತಡೆಯಲು ಸರ್ಕಾರವು ನವೆಂಬರ್ 16 ರಂದು ಎರಡು ದಿನಗಳವರೆಗೆ ಇಂಟರ್‌ನೆಂಟ್‌ಗಳ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಸೋಮವಾರ ಮತ್ತೆ ಎರಡು ದಿನ ಅದನ್ನು ವಿಸ್ತರಿಸಿತ್ತು. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚಾಲ್ತಿಯಲ್ಲಿರುವ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ರಾಜ್ಯ ಸರ್ಕಾರವು ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ಕಕ್ಚಿಂಗ್, ಬಿಷ್ಣುಪುರ್, ತೌಬಲ್, ಚುರಾಚಂದ್‌ಪುರ ಮತ್ತು ಮಣಿಪುರದ ಕಾಂಗ್‌ಪೋಕ್ಪಿಯ ಪ್ರಾದೇಶಿಕ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಇನ್ನೂ ಮೂರು ದಿನಗಳವರೆಗೆ ಮುಂದುವರಿಸಲು ನಿರ್ಧರಿಸಿದೆ ಎಂದು ಅದು ಹೇಳಿದೆ.

ಆದಾಗ್ಯೂ, ಸಾಮಾನ್ಯ ಜನರ ಆರೋಗ್ಯ ಸೌಲಭ್ಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಇತರ ಕಚೇರಿಗಳು ಎದುರಿಸುತ್ತಿರುವ ಕಷ್ಟಗಳನ್ನು ಪರಿಗಣಿಸಿ ಬ್ರಾಡ್‌ಬ್ಯಾಂಡ್ ಸೇವೆಗಳ ಮೇಲಿನ ನಿರ್ಬಂಧವನ್ನು ಮಂಗಳವಾರ ತೆಗೆದುಹಾಕಿದೆ.

ಏತನ್ಮಧ್ಯೆ, ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂವನ್ನು ಸಡಿಲಿಕೆ ಮಾಡಿರುವುದರಿಂದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಕಾಕ್ಚಿಂಗ್ ಜಿಲ್ಲೆಗಳ ಮಾರುಕಟ್ಟೆಗಳಲ್ಲಿ ವ್ಯಾಪಾರ ಚಟುವಟಿಕೆ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಕರ್ಫ್ಯೂ ಸಡಿಲಿಕೆಯಿಂದ ಗಲಭೆ ಪೀಡಿತ ಪ್ರದೇಶಗಳ ಮಾರುಕಟ್ಟೆಗಳು ಮತ್ತು ಪೆಟ್ರೋಲ್ ಪಂಪ್‌ಗಳಲ್ಲಿ ಉದ್ದನೆಯ ಸರತಿ ಸಾಲುಗಳು ಕಂಡುಬಂದಿವೆ ಎಂದು ವರದಿಯಾಗಿವೆ.

ಅದಾಗ್ಯೂ, ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳು ಮುಚ್ಚಿದ್ದವು. ಸುವ್ಯವಸ್ಥೆ ಕಾಪಾಡಲು ಅಪಾಯಕಾರಿ ಪ್ರದೇಶಗಳಲ್ಲಿ ಸೇನೆ, ಅರೆಸೇನಾ ಪಡೆ ಸಿಬ್ಬಂದಿ, ಪೊಲೀಸರು ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ರಾಜ್ಯದಲ್ಲಿ ಭುಗಿಲೆದ್ದ ವ್ಯಾಪಕ ಗುಂಪು ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ನವೆಂಬರ್ 16 ರಂದು ಅನಿರ್ದಿಷ್ಟವಾಗಿ ಕರ್ಫ್ಯೂ ವಿಧಿಸಲಾಗಿತ್ತು. ಈ ಸಮಯದಲ್ಲಿ ಸಚಿವರು ಸೇರಿದಂತೆ ಹನ್ನೆರಡು ಶಾಸಕರ ಮನೆಗಳು ಮತ್ತು ಆಸ್ತಿಗಳನ್ನು ಸುಟ್ಟುಹಾಕಿ ಧ್ವಂಸಗೊಳಿಸಲಾದ್ದು, ಲೂಟಿ ಕೂಡಾ ಮಾಡಲಾಗಿದೆ.

ಜಿರಿಬಾಮ್ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಆರು ನಾಗರಿಕರನ್ನು ಕೊಂದ ನಂತರ ರಾಜ್ಯದಲ್ಲಿ ಹೊಸದಾಗಿ ಹಿಂಸಾಚಾರ ಪ್ರಾರಂಭವಾಗಿತ್ತು. ಈ ಭೀಕರ ದಾಳಿಯು ವ್ಯಾಪಕ ಖಂಡನೆಗೆ ಗುರಿಯಾಗಿದ್ದು, ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ದುಷ್ಕರ್ಮಿಗಳನ್ನು ಕಾನೂನಿನ ಕುಣಿಕೆಗೆ ತರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಘಟನೆಯನ್ನು ಬುಡಕಟ್ಟು ನಾಗಾ ಮಹಿಳಾ ಒಕ್ಕೂಟವು ಖಂಡಿಸಿದ್ದು, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದಿಂದ ದೂರವಿರಲು ಮೈತೇಯಿ ಮತ್ತು ಕುಕಿ ಎರಡೂ ಸಮುದಾಯಗಳ ಸಶಸ್ತ್ರ ಗುಂಪುಗಳಿಗೆ ಕರೆ ನೀಡಿದೆ. ನಡೆಯುತ್ತಿರುವ ಸಂಘರ್ಷದ ನಡುವೆ ಎಲ್ಲಾ ಪಕ್ಷಗಳು ಮಾನವೀಯತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿಹೇಳಿರುವ ಒಕ್ಕೂಟವು ಇಂತಹ ಕೃತ್ಯಗಳನ್ನು ನಿಲ್ಲಿಸುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...