Homeಕರ್ನಾಟಕಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

- Advertisement -
- Advertisement -

ಬಿ.ಎಸ್.ಯಡಿಯೂರಪ್ಪ ಇತಿಹಾಸ ನಿರ್ಮಿಸಿದ್ದಾರೆ. ಅದೂ ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ. ಯಡಿಯೂರಪ್ಪ ಈಗ ರಾಜಿನಾಮೆ ಕೊಡಲಿ ಇಲ್ಲವೇ ಬಿಡಲಿ ಅವರ ದಾಖಲೆಯಂತೂ ಮುರಿಯಲು ಸಧ್ಯಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿ ಬಂದವರೂ ಯಾರೂ ಇಲ್ಲ. ಕೆ.ಜೆ.ಪಿ ಪಕ್ಷ ಕಟ್ಟಿ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿ ಮುಖ್ಯಮಂತ್ರಿಯೂ ಆದರು. ಬೇರೆ ಯಾರಿಗೂ ಆ ಛಾನ್ಸ್ ಸಿಗಲಿಲ್ಲ ಬಿಡಿ. ಇಂತಹ ಪ್ರಸಂಗಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹಿಂದೆಯೂ ನಡೆದಿಲ್ಲ. ಮುಂದೆಯೂ ಸಂಭವಿಸುವುದಿಲ್ಲ. ಒಂದೇ ಪಕ್ಷದಲ್ಲಿ ನಾಲ್ಕು ಬಾರಿ ಅಧಿಕಾರದ ಗದ್ದುಗೆ ಏರಿದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾತ್ರ.

ಯಡಿಯೂರಪ್ಪ ಬೇಕಂತಲೇ ಮಾತಾಡಿರುವಂತಿರುವ ವಿಡಿಯೋ ಕೇಳಿ..

ಯಡಿಯೂರಪ್ಪ ಹಿಂದೆಯೂ ಕಷ್ಟ ಅನುಭವಿಸಿದರು. ಸ್ವಪಕ್ಷದವರೇ ಕಾಲೆಳೆದಿದ್ದು ಹೆಚ್ಚು. ಮಾಜಿ ಕೇಂದ್ರ ಸಚಿವ ದಿವಂಗತ ಎಚ್.ಎನ್. ಅನಂತ ಕುಮಾರ್ ಮತ್ತು ಯಡಿಯೂರಪ್ಪ ನಡುವೆ ಶೀತಲ ಸಮರ ಕೊನೆಯವರೆಗೂ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯಲು ಅನಂತ್ ಕುಮಾರ್ ಪಾತ್ರವೂ ಇತ್ತು. ಆ ಕಾರಣಕ್ಕಾಗಿಯೇ ಒಂದು ಅವಧಿಯ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾದ ಪರಿಸ್ಥಿತಿ ಬಂತು.

ಜೈಲಿಗೆ ಹೋಗಿ ಬಂದ ಮೇಲೆ ಯಡಿಯೂರಪ್ಪ ಸ್ವಲ್ಪ ಮಂಕಾಗಿದ್ದಾರೆ. ವಯಸ್ಸು ಅವರನ್ನು ಬಾಧಿಸುತ್ತಿದೆ. ಆದರೂ ಮುಖ್ಯಮಂತ್ರಿ ಪಟ್ಟದಲ್ಲಿ ಮುಂದುವರಿಯಲು ಹೆಣಗುತ್ತಿದ್ದಾರೆ. ಹಿಂದೆ ಅನಂತಕುಮಾರ್ ಕಿರುಕುಳ ಇತ್ತು. ಅವರು ಹೋದ ಮೇಲೆ ಈಗ ಹಲವು ಮಗ್ಗಲು ಮುಳ್ಳುಗಳು ಯಡಿಯೂರಪ್ಪ ಅವರನ್ನು ಚುಚ್ಚುತ್ತಿವೆ. ಆರ್.ಎಸ್.ಎಸ್ ಮುಖಂಡ ಸಂತೋಷ್ ಅನಂತ್ ಸ್ಥಾನದಲ್ಲಿ ಕುಳಿತು ಯಡಿಯೂರಪ್ಪ ಅವರಿಗೆ ತಿವಿಯುತ್ತಿದ್ದಾರೆ. ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದಿಲ್ಲೊಂದು ಬಗೆಯಲ್ಲಿ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಇದ್ದಾರೆ. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಡಾ.ಅಶ್ವತ್ಥನಾರಾಯಣ ಮತ್ತು ಕೇಂದ್ರ ಸಚಿವ ಸದಾನಂದಗೌಡ ಅವರು ಹೈಕಮಾಂಡ್ ನಾಯಕರಿಗೆ ಆಪ್ತರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಬಲಹೀನರಾಗಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿ ಈಗ ಎರಡು-ಮೂರು ಬಣಗಳು ಸಕ್ರಿಯವಾಗಿ ಕಾರ್ಯಚರಿಸುತ್ತಿವೆ. ಬಣಗಳ ಪ್ರಾಬಲ್ಯ ಬಿಗಿಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದಂತೆ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸ ಹೋದಕಡೆಯಲ್ಲಾ ಮಾಧ್ಯಮಗಳ ಮುಂದೆ ಏನೂ ಮಾತನಾಡದೆ ಕುಗ್ಗಿ ಹೋಗಿದ್ದಾರೆ. ನೆರೆ ಪರಿಹಾರವು ಬಿಡುಗಡೆಯಾಗಿಲ್ಲ. ಹೈಕಮಾಂಡ್ ನಾಯಕರ ಕೃಪಾಕಟಾಕ್ಷವೂ ಇಲ್ಲ ಎಂಬುದು ಖಚಿತವಾಗಿರುವುದರಿಂದ  ಯಡಿಯೂರಪ್ಪ ಕೂಡ ಹೊಸ ದಾಳಗಳನ್ನು ಉರುಳಿಸುತ್ತಿದ್ದಾರೆ.

ಅನರ್ಹ ಶಾಸಕರು ಶಾಸಕರ ಬಿಜೆಪಿ ಸೇರ್ಪಡೆ ಅಥವಾ ಟಿಕೆಟ್ ನೀಡುವ ಸಂಬಂಧ ದ್ವಂದ್ವ ಹೇಳಿಕೆಗಳು ಪ್ರಕಟವಾಗುತ್ತಿರುವುದು ನಡೆದಿದೆ. ಇಂತಹ ಸಮಯದಲ್ಲಿ ಅನರ್ಹರ ಬೆನ್ನಿಗೆ ನಿಂತಿರುವುದು ಮುಖ್ಯಮಂತ್ರಿ ಒಬ್ಬರೇ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿತ್ತು. ಅವರೇ ಶಾಸಕರು ಮುಂಬೈನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಎಂಬ  ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಇಂತಹ ಹೇಳಿಕೆ ನೀಡುವ ಮೂಲಕ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ತನ್ನ ಸ್ಥಾನವೂ ಭದ್ರವಾಗಿರಬೇಕು. ಮತ್ತೆ ಯಾರೂ ನನ್ನ ವಿರುದ್ಧ ಪಿತೂರಿ ನಡೆಸಬಾರದು ಎಂಬ ಉದ್ದೇಶ ಈ ಹೇಳಿಕೆಯಲ್ಲಿದ್ದಂತಿದೆ.

ಅನರ್ಹ ಶಾಸಕರಿಗೆ ಅಮಿತ್ ಶಾ ಬೆಂಬಲದ ಹೇಳಿಕೆ ಬಿಜೆಪಿಗೆ ಡ್ಯಾಮೇಜ್ ತಂದೊಡ್ಡಲಿದೆ. ಯಡಿಯೂರಪ್ಪ ಅವರಿಗೂ ಬೇಕಾಗಿರುವುದು ಇದೇ. ತನಗೆ ಪದೇ ಪೇದೆ ಕಿರುಕುಳ ಕೊಡುವವರನ್ನು ಸಹಿಸಿಕೊಳ್ಳಲು ಹೇಗೆ ಸಾಧ್ಯ. ಅದೇ ಕಾರಣಕ್ಕೆ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿ ಚುಚ್ಚುತ್ತಿದ್ದಾರೆ. ಇಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯ ವೀರಶೈವ ಲಿಂಗಾಯತರು ಹೇಳುವ ಮಾತು. ಅಂತೂ ಯಡಿಯೂರಪ್ಪ ಆಟ ಎಷ್ಟು ದಿನ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...