Homeಕರ್ನಾಟಕದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

- Advertisement -
- Advertisement -

ದಲಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರಿನ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ (ನ.20) ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಇಂದು (ನ.21) ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ದಲಿತ ಸಮುದಾಯದ ಹೊನ್ನಮ್ಮ ಎಂಬವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ಈ ಪ್ರಕರಣದ ತನಿಖೆ, ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್‌ ಜ್ಯೋತಿ ಹೇಳಿದ್ದಾಗಿ ವರದಿಯಾಗಿದೆ.

ಗೋಪಾಲಪುರದ ಹೊನ್ನಮ್ಮ ಅವರು ಡಾಬಾ ನಡೆಸುತ್ತಿದ್ದರು. ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಅವುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮ ನಡುವೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯ ಜಗಳ ನಡೆಯುತ್ತಿತ್ತು. ಹೊನ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರೆದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

2010ರಲ್ಲಿ ನಡೆದ ಈ ಕೊಲೆ ಸಂಬಂಧ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈಗ 2014ರಲ್ಲಿ ತೀರ್ಪು ಪ್ರಕಟಗೊಂಡಿದೆ.

ಪ್ರಕರಣ ಆರೋಪಿಗಳಾಗಿದ್ದ ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ-ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪ್ರಕರಣ ಇತರ 6 ಆರೋಪಿಗಳಾಗಿದ್ದ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ ,ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ : ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...