Homeಕರ್ನಾಟಕದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

- Advertisement -
- Advertisement -

ದಲಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರಿನ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ (ನ.20) ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಇಂದು (ನ.21) ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ದಲಿತ ಸಮುದಾಯದ ಹೊನ್ನಮ್ಮ ಎಂಬವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ಈ ಪ್ರಕರಣದ ತನಿಖೆ, ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್‌ ಜ್ಯೋತಿ ಹೇಳಿದ್ದಾಗಿ ವರದಿಯಾಗಿದೆ.

ಗೋಪಾಲಪುರದ ಹೊನ್ನಮ್ಮ ಅವರು ಡಾಬಾ ನಡೆಸುತ್ತಿದ್ದರು. ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಅವುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮ ನಡುವೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯ ಜಗಳ ನಡೆಯುತ್ತಿತ್ತು. ಹೊನ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರೆದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

2010ರಲ್ಲಿ ನಡೆದ ಈ ಕೊಲೆ ಸಂಬಂಧ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈಗ 2014ರಲ್ಲಿ ತೀರ್ಪು ಪ್ರಕಟಗೊಂಡಿದೆ.

ಪ್ರಕರಣ ಆರೋಪಿಗಳಾಗಿದ್ದ ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ-ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪ್ರಕರಣ ಇತರ 6 ಆರೋಪಿಗಳಾಗಿದ್ದ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ ,ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ : ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....