Homeಮುಖಪುಟಯುಪಿ ಮುಖ್ಯಮಂತ್ರಿ ಯೋಗಿ ಪ್ರತಿಕೃತಿ ದಹನ:  60 ಎಸ್ಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಯುಪಿ ಮುಖ್ಯಮಂತ್ರಿ ಯೋಗಿ ಪ್ರತಿಕೃತಿ ದಹನ:  60 ಎಸ್ಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ನೊಯ್ಡಾ:  ಪೊಲೀಸ್ ಅನುಮತಿಯಿಲ್ಲದೆ ನಡೆದ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರತಿಕೃತಿಯನ್ನು ಸುಟ್ಟುಹಾಕಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ (ಎಸ್‌ಪಿ) 60 ಕ್ಕೂ ಹೆಚ್ಚು ಸದಸ್ಯರ ವಿರುದ್ಧ ನೋಯ್ಡಾ ಠಾಣೆಯಲ್ಲಿ ಬುಧವಾರ  ಪ್ರಕರಣ ದಾಖಲಿಸಲಾಗಿದೆ. ಒಬ್ಬ ಪ್ರತಿಭಟನಾಕಾರನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ಪರಿಹಾರಕ್ಕಾಗಿ ಒತ್ತಾಯಿಸಿ ಗ್ರೇಟರ್ ನೊಯ್ಡಾ ಅಭಿವೃದ್ಧಿ ಪ್ರಾಧಿಕಾರ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಮಾಜವಾದಿಯ ಸದಸ್ಯರು ಪ್ರತಿಭಟನೆ ನಡೆಸಲು ಅನುಮತಿ ಪಡೆದಿಲ್ಲವೆಂಬುದನ್ನು ತಳ್ಳಿಹಾಕಿದ್ದಾರೆ. ಪ್ರತಿಭಟಿಸಲು ಅನುಮತಿಯನ್ನು ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಮೋಹಿತ್ ನಗರ, ಲೋಕೇಶ್ ಕುಮಾರ್, ನಿತಿನ್ ಭದಾನ, ಮೋಹಿತ್ ತೋಮರ್ ಅಲಿಯಾಸ್ ನವಾಬಿ, ಜೆಪಿ ಯಾದವ್, ಬಾದಲ್ ಮತ್ತು 60 ಅಪರಿಚಿತ ವ್ಯಕ್ತಿಗಳು ಮುಖ್ಯಮಂತ್ರಿಯ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಪ್ರತಿಕೃತಿಯನ್ನು ದಹಿಸಿದ ನಂತರ ಎಲ್ಲರೂ ಸ್ಥಳದಿಂದ ಓಡಿಹೋದರು. ಈ ಕುರಿತು ಸೂರಜ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾಜವಾದಿ ಪಕ್ಷದ ಕೆಲವು ಸದಸ್ಯರನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ಸೆಂಟ್ರಲ್ ನೋಯ್ಡಾ) ಶಕ್ತಿ ಮೋಹನ್ ಅವಸ್ತಿ ತಿಳಿಸಿದರು.

ಇದನ್ನೂ ಓದಿ…ದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

ಎಸ್‌ಪಿ ಜಿಲ್ಲಾಧ್ಯಕ್ಷ ಸುಧೀರ್ ಭಾಟಿ ಮಾತನಾಡಿ,ನಮ್ಮ ಪ್ರತಿಭಟನೆ ಮುಂದುವರಿಯಲಿದೆ.  ರೈತರ ಪರ ಹೋರಾಟ ನಡೆಸಲು ಎಸ್‌ಪಿ ಹೈಕಮಾಂಡ್‌ನಿಂದ ನಮಗೆ ಸೂಚನೆ ನೀಡಲಾಗಿದೆ. ಪ್ರತಿಕೃತಿಯನ್ನು ದಹಿಸುವ ಕಲ್ಪನೆಯು ಪೂರ್ವ ಯೋಜಿತವಲ್ಲ; ಇದು ಒಂದು ಪ್ರತಿಭಟನೆಯ ಭಾಗವಾಗಿತ್ತು ಎಂದು ಹೇಳಿದರು.

ನವೆಂಬರ್ 25ರಂದು ಸೂರಜ್‌ಪುರ ಜಿಲ್ಲಾಧಿಕಾರಿ ಮುಂದೆ ಸಮಾಜವಾದಿ ಪಕ್ಷವು ಮತ್ತೊಂದು ಪ್ರತಿಭಟನೆಯನ್ನು ಆಯೋಜಿಸಲಿದೆ ಎಂದು ಭಾಟಿ ತಿಳಿಸಿದರು.

ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಯಮುನಾ ಎಕ್ಸ್‌ಪ್ರೆಸ್‌ವೇ ಪ್ರದೇಶಗಳ ಅಭಿವೃದ್ಧಿಗಾಗಿ ಭೂ ಸ್ವಾಧೀನಪಡಿಸಿಕೊಂಡಿರುವ ರೈತರ ಕುಂದುಕೊರತೆಗಳನ್ನು ಪರಿಹರಿಸಲು ರಚಿಸಲಾದ ಸರ್ಕಾರದ ತ್ರಿಸದಸ್ಯ ಸಮಿತಿಯ ವರದಿಯನ್ನು ವಿರೋಧಿಸಿ ರೈತರು ಜಿಬಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ…ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ಈ ಸಮಿತಿಯು ಅಕ್ಟೋಬರ್ 22 ರಂದು ತನ್ನ ವರದಿಯಲ್ಲಿ ರೈತರ ಮೂರು ನಿರ್ಣಾಯಕ ಬೇಡಿಕೆಗಳನ್ನು ತಿರಸ್ಕರಿಸಿದೆ. 1997 ರಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಬದಲಾಗಿ 10% ವಸತಿ ಭೂಮಿ ನೀಡುವುದು, 1997 ರಿಂದ 2002 ರವರೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡ ರೈತರಿಗೆ ಪರಿಹಾರದಲ್ಲಿ 64.7% ಹೆಚ್ಚಳ ಮಾಡುವುದು, ವಸತಿ ಸಮುಚ್ಚಯಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲು ಅನುಮತಿ ನೀಡುವುದು ರೈತರ ಮೂರು ಪ್ರಮುಖ ಬೇಡಿಕೆಗಳಾಗಿವೆ.  ಆದಾಗ್ಯೂ, ಸಮಿತಿಯು ರೈತ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಮೂಲ ವಸತಿ ಭೂಮಿಯಲ್ಲಿ ಕನಿಷ್ಠ 1,000 ಚದರ ಮೀಟರ್‌ಗಳನ್ನು ಬಳಸಲು ಅನುಮತಿಸುವ ಬೇಡಿಕೆಯನ್ನು ಒಪ್ಪಿಕೊಂಡಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷ ಪ್ರತಿಕೃತಿ ದಹಿಸಿದ ಘಟನೆಯನ್ನು ಟೀಕಿಸಿದೆ. ಜಿಲ್ಲಾಧ್ಯಕ್ಷ ಗಜೇಂದ್ರ ಮಾವಿ ಮಾತನಾಡಿ, ಅವರಂತಹ ಅರಾಜಕತಾವಾದಿಗಳಿಗೆ (ಎಸ್‌ಪಿ) ರಾಜ್ಯದ ಕಾನೂನು-ಸುವ್ಯವಸ್ಥೆ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರಾಜ್ಯದಲ್ಲಿ ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು,ಆದರೆ ಅನುಮತಿಯಿಲ್ಲದೆ ಹಾಗೆ ಮಾಡಬಾರದು ಎಂದಿದ್ದಾರೆ.

ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯಿದೆ, 1932 ರ ಸೆಕ್ಷನ್ 7 ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ…ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...