Homeಫ್ಯಾಕ್ಟ್‌ಚೆಕ್ಮಹಾರಾಷ್ಟ್ರ ಬಿಟ್ ಕಾಯಿನ್ ಅಕ್ರಮ ಆರೋಪ : ಬಿಜೆಪಿ ಹಂಚಿಕೊಂಡ ಆಡಿಯೋ ನಕಲಿ ಎಂದ ಫ್ಯಾಕ್ಟ್‌ಚೆಕ್

ಮಹಾರಾಷ್ಟ್ರ ಬಿಟ್ ಕಾಯಿನ್ ಅಕ್ರಮ ಆರೋಪ : ಬಿಜೆಪಿ ಹಂಚಿಕೊಂಡ ಆಡಿಯೋ ನಕಲಿ ಎಂದ ಫ್ಯಾಕ್ಟ್‌ಚೆಕ್

- Advertisement -
- Advertisement -

ಮಹಾರಾಷ್ಟ್ರದ ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ನಾಯಕರಾದ ನಾನಾ ಪಟೋಲೆ ಮತ್ತು ಸುಪ್ರಿಯಾ ಸುಳೆ ಬಿಟ್ ಕಾಯಿನ್ ಹಣವನ್ನು ಚುನಾವಣೆಗೆ ಬಳಸಿಕೊಂಡು ಅಕ್ರಮವೆಸಗಿದ್ದಾರೆ ಎಂದು ಬಿಜೆಪಿ ಮಂಗಳವಾರ (ನ.19) ಆರೋಪಿಸಿತ್ತು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ನಿನ್ನೆ(ನ.20) ನಡೆದಿದೆ. ಅದರ ಮುನ್ನಾದಿನ ಮಂಗಳವಾರ (ನ.19) ರಾತ್ರಿ 10.58, 11.00, 11.02 ಮತ್ತು 11.04ಕ್ಕೆ ಬಿಜೆಪಿ ರಾಷ್ಟ್ರೀಯ ಸಮಿತಿಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ 4 ಆಡಿಯೋ ರೆಕಾರ್ಡಿಂಗ್ ಕ್ಲಿಪ್‌ಗಳನ್ನು ಅಪ್ಲೋಡ್ ಮಾಡಿತ್ತು.

ಈ ನಾಲ್ಕು ಆಡಿಯೋ ರೆಕಾರ್ಡಿಂಗ್‌ಗಳು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ, ಕಾಂಗ್ರೆಸ್ ನಾಯಕ ನಾನಾ ಪಟೋಲೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ತಂಡದ ಇನ್‌ಸ್ಪೆಕ್ಟರ್ ಜನರಲ್ ಹಾಗೂ ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಸಾರಥಿ ಎಂಬ ಆಡಿಟ್ ಸಂಸ್ಥೆಯ ಉದ್ಯೋಗಿ ಗೌರವ್ ಮೆಹ್ತಾ ನಡುವಿನ ಸಂಭಾಷಣೆಯದ್ದು ಎಂದು ಬಿಜೆಪಿ ಆರೋಪಿಸಿತ್ತು.

ಇದಕ್ಕೂ ಮುನ್ನ ಮಂಗಳವಾರ ಪುಣೆಯ ಮಾಜಿ ಪೊಲೀಸ್ ಅಧಿಕಾರಿ ರವೀಂದ್ರನಾಥ್ ಪಾಟೀಲ್ ಅವರು, ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರು 2018ರ ಕ್ರಿಪ್ಟೋ ಕರೆನ್ಸಿ ಹಗರಣ ಪ್ರಕರಣದ ಬಿಟ್‌ ಕಾಯಿನ್‌ಗಳನ್ನು ದುರುಪಯೋಗಪಡಿಸಿಕೊಂಡು, ಅದರ ಹಣವನ್ನು ರಾಜ್ಯ ಚುನಾವಣೆಗೆ ಬಳಸಿದ್ದಾರೆ ಎಂದು ಆರೋಪಿಸಿದ್ದರು.

ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ, ಸಾರಥಿ ಆಡಿಟ್ ಸಂಸ್ಥೆಯ ಉದ್ಯೋಗಿ ಗೌರವ್ ಮೆಹ್ತಾ, ಪ್ರಸ್ತುತ ಚಂದ್ರಾಪುರದಲ್ಲಿ ಮಹಾರಾಷ್ಟ್ರ ಮೀಸಲು ಪೊಲೀಸ್ ಪಡೆಯ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ಭಾಗ್ಯಶ್ರೀ ನವತಾಕೆ ವಿರುದ್ದ ಕೂಡ ರವೀಂದ್ರನಾಥ್ ಪಾಟೀಲ್ ಆರೋಪ ಹೊರಿಸಿದ್ದರು. ಇವರ ನಡುವಿನ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ರವೀಂದ್ರನಾಥ್ ಪಾಟೀಲ್ ಆರೋಪ ಮಾಡಿದ ಬೆನ್ನಲ್ಲೇ, ಬಿಜೆಪಿ ನಾಲ್ಕು ಆಡಿಯೋ ಕ್ಲಿಪ್‌ಗಳನ್ನು ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು.

ಬಿಜೆಪಿ ಹಂಚಿಕೊಂಡ ಆಡಿಯೋದಲ್ಲಿ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಎನ್ನಲಾದ ವ್ಯಕ್ತಿಗಳು ನಾಲ್ಕು ಕ್ರಿಪ್ಟೋ ವ್ಯಾಲೆಟ್‌ಗಳಲ್ಲಿ ಸಂಗ್ರಹವಾಗಿರುವ ಬಿಟ್‌ಕಾಯಿನ್‌ಗಳಿಗೆ ಬದಲಾಗಿ ಹಣ ಕೇಳುವುದು ಮತ್ತು ಈ ವಿಷಯದಲ್ಲಿ ಯಾವುದೇ ತನಿಖೆ ನಡೆಯುವುದಿಲ್ಲ ಎಂದು ಭರವಸೆ ಕೊಡುವುದು ಇದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಬುಧವಾರ (ನ.20) ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ವಿರುದ್ದ ಗಂಭೀರ ಆರೋಪ ಮಾಡಿದ್ದರು. “ತನಿಖೆ ನಡೆದರೆ ಎಲ್ಲಾ ಹಗರಣ ಹೊರ ಬರಲಿದೆ. ಪ್ರತಿಪಕ್ಷಗಳ ಮೈತ್ರಿಕೂಟ ‘ಎಂವಿಎ ಗೋಡೆ ಮೇಲೆ ಬರೆದ ಬರಹದಂತೆ ತಮ್ಮ ಸೋಲನ್ನು ಎದುರು ನೋಡುತ್ತಿದೆ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ಪ್ರಮುಖ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆಯಾದ boomlive.in ಬಿಜೆಪಿ ಹಂಚಿಕೊಂಡಿರುವ ಆಡಿಯೋ ಕ್ಲಿಪ್‌ಗಳು ನಕಲಿ ಎಂದು ಹೇಳಿವೆ. ನಾನಾ ಪಟೋಲೆ, ಸುಪ್ರಿಯಾ ಸುಳೆ ಹಾಗೂ ಮತ್ತಿರರ ಹೆಸರಿನಲ್ಲಿ ಬಿಜೆಪಿ ಹಂಚಿಕೊಂಡಿರುವ ಆಡಿಯೋ ಕ್ಲಿಪ್‌ಗಳನ್ನು ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂದಿದೆ. ಪತ್ರಕರ್ತರು ಮತ್ತು ಸಂಶೋಧಕರಿಗೆ ಲಭ್ಯವಿರುವ TrueMedia.org ಡೀಪ್‌ಫೇಕ್ ಪತ್ತೆ ಸಾಧನ ಬಳಸಿಕೊಂಡು ನಾವು ಆಡಿಯೊ ಕ್ಲಿಪ್‌ಗಳನ್ನು ಪರೀಕ್ಷಿಸಿದ್ದೇವೆ ಎಂದು ತಿಳಿಸಿದೆ.

ಬಿಜೆಪಿ ಹಂಚಿಕೊಂಡಿರುವ ನಾಲ್ಕು ಆಡಿಯೋಗಳ ಪೈಕಿ ಮೂರು ಎಐ ಬಳಸಿ ಸೃಷ್ಟಿಸಿರುವುದಕ್ಕೆ ಸಾಕಷ್ಟು ಪುರಾವೆಗಳು ದೊರೆತಿವೆ. ಒಂದು ಆಡಿಯೋ ಮಾತ್ರ ಎಐ ಎಂಬುವುದನ್ನು ಸಂಪೂರ್ಣವಾಗಿ ಖಚಿತಪಡಿಸಲು ಸಾಧ್ಯವಾಗಿಲ್ಲ. ಅದು ಕೇವಲ ಐದು ಸೆಕೆಂಡ್‌ಗಳಿವೆ. ಆ ಕ್ಲಿಪ್ ತುಂಬಾ ಚಿಕ್ಕದಾಗಿರುವುದರಿಂದ ಪರೀಕ್ಷಿಸಲು ಸಾಧ್ಯವಾಗಿಲ್ಲ ಎಂದು ಹೇಳಿದೆ.

ನಾವು ಸುಪ್ರಿಯಾ ಸುಳೆ, ನಾನಾ ಪಟೋಲೆ ಮತ್ತು ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಅವರ ಅಸಲಿ ಧ್ವನಿಯನ್ನು ಯೂಟ್ಯೂಬ್‌ ಸಂದರ್ಶನಗಳಿಂದ ಆಲಿಸಿದ್ದೇವೆ. ಬಿಜೆಪಿ ಹಂಚಿಕೊಂಡಿರುವ ಆಡಿಯೋಗಳಿಗೂ ಈ ಮೂವರ ಅಸಲಿ ಧ್ವನಿಗೂ ಸಾಮ್ಯತೆ ಕಂಡು ಬಂದಿಲ್ಲ ಎಂದು ಬೂಮ್ ತಿಳಿಸಿದೆ.

ಆಡಿಯೋ-1  ಆಡಿಟ್ ಸಂಸ್ಥೆ ಉದ್ಯೋಗಿ ಗೌರವ್ ಮೆಹ್ತಾ ಮತ್ತು ಐಪಿಎಸ್ ಅಧಿಕಾರಿ ಅಮಿತಾಬ್ ಮೆಹ್ತಾ ನಡುವಿನ ಸಂಭಾಷಣೆ

ಈ ಆಡಿಯೋದಲ್ಲಿ ಆಡಿಟ್ ಸಂಸ್ಥೆ ಸಾರಥಿ ಅಸೋಸಿಯೇಟ್ಸ್‌ನ ಉದ್ಯೋಗಿ ಗೌರವ್ ಮೆಹ್ತಾ, ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಅವರೊಂದಿಗೆ ಮಾತನಾಡುತ್ತಿರುವುದು ಎನ್ನಲಾಗಿದೆ.

ಬ್ಲೂಮ್ TrueMedia ದ AI ಡೀಪ್‌ಫೇಕ್ ಪತ್ತೆ ಸಾಧನವನ್ನು ಬಳಸಿಕೊಂಡು ಈ ಆಡಿಯೋ ಕ್ಲಿಪ್ ಅನ್ನು ಪರೀಕ್ಷಿಸಿದೆ. ಇದರಲ್ಲಿ ಆಡಿಯೋವನ್ನು ಎಐ ಮೂಲಕ ಸೃಷ್ಟಿಸಿದ್ದು ಎನ್ನುವುದಕ್ಕೆ ಹಲವು ಪುರಾವೆಗಳು ದೊರೆತಿವೆ..ಅದು ಇಲ್ಲಿದೆ.

ಆಡಿಯೋ-2 ಎನ್‌ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆ

ಈ ಆಡಿಯೋದಲ್ಲಿ ಸುಳೆ ಅವರು “ತನಿಖೆಯ ಬಗ್ಗೆ ಚಿಂತಿಸಬೇಡಿ, ಬಿಟ್‌ಕಾಯಿನ್‌ಗಳಿಗೆ ಬದಲಾಗಿ ಹಣ ಕೊಡಿ” ಎಂದು ಗೌರವ ಮೆಹ್ತಾ ಬಳಿ ಕೇಳುತ್ತಿರುವುದು ಎನ್ನಲಾಗಿದೆ.

ಬೂಮ್ ಸಂಸ್ಥೆ, 2023ರಲ್ಲಿ ಸಮ್ದೀಶ್ ಭಾಟಿಯಾ ಅವರ ವಿಡಿಯೋ ಪಾಡ್‌ಕಾಸ್ಟ್‌ ‘ಅನ್‌ಫಿಲ್ಟರ್ಡ್ ಬೈ ಸಮ್ದೀಶ್’ ಸಂದರ್ಶನಲ್ಲಿ ಸುಪ್ರಿಯಾ ಸುಳೆ ಮಾತನಾಡಿರುವ ಧ್ವನಿ ಜೊತೆ ಈ ಆಡಿಯೋವನ್ನು ಹೋಲಿಸಿ ನೋಡಿದೆ. ಈ ವೇಳೆ ಎರಡೂ ಧ್ವನಿಗಳು ಸಂಪೂರ್ಣ ಭಿನ್ನವಾಗಿ ಕಂಡು ಬಂದಿದೆ. ಸಮ್ದೀಶ್ ಭಾಟಿಯಾ ಪಾಡ್‌ಕಾಸ್ಟ್‌ನಲ್ಲಿ ಸುಪ್ರಿಯಾ ಸುಳೆ ಮಾತನಾಡಿರುವುದು ಇಲ್ಲಿದೆ.

TrueMedia AI ಡೀಪ್‌ಫೇಕ್ ಪತ್ತೆ ಸಾಧನವು ಈ ಆಡಿಯೋ ಕೃತವಾಗಿ ಸೃಷ್ಟಿಸಿದ್ದು ಎಂಬುವುದಕ್ಕೆ ಹಲವು ಪುರಾವೆಗಳನ್ನು ಕಂಡು ಹಿಡಿದಿದೆ. ಅದರ ಫಲಿತಾಂಶ ಇಲ್ಲಿದೆ 

ಆಡಿಯೋ-3  ಕಾಂಗ್ರೆಸ್ ನಾಯಕ ನಾನಾ ಪಟೋಲೆ ಮತ್ತು ಐಪಿಎಲ್ ಅಧಿಕಾರಿ ಅಮಿತಾಬ್ ಗುಪ್ತಾ ನಡುವಿನ ಸಂಭಾಷಣೆ

ಈ ಆಡಿಯೋ ಪಟೋಲೆ ಅವರು ಬಿಟ್‌ಕಾಯಿನ್ ಅನ್ನು ನಗದು ರೂಪದಲ್ಲಿ ಪರಿವರ್ತಿಸುವಂತೆ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಅವರಿಗೆ ಬೆದರಿಕೆ ಹಾಕುತ್ತಿರುವುದು ಎಂದು ಆರೋಪಿಸಲಾಗಿದೆ.

TrueMedia.org ಈ ಆಡಿಯೋ ಎಐ ಎಂಬುವುದನ್ನು ನಿರ್ಧಿರಿಸಲು ಕೆಲವೊಂದು ಪುರಾವೆಗಳು ಇವೆ ಎಂದಿವೆ. ಅದರ ಫಲಿತಾಂಶ ಇಲ್ಲಿದೆ. ಆದರೆ, ಈ ಆಡಿಯೋ ಕೇವಲ 5 ಸೆಕೆಂಡ್‌ ಇರುವುದರಿಂದ ಈಗ ಲಭ್ಯವಿರುವ ಸಾಧನಗಳನ್ನು ಬಳಸಿಕೊಂಡು ಇದರ ಸತ್ಯಾಸತ್ಯತೆ ಕಂಡು ಖಚಿತಪಡಿಸುವುದು ಸಾಧ್ಯವಿಲ್ಲ ಎಂದು ಬೂಮ್ ಹೇಳಿದೆ.

ನಾವು ಆಡಿಯೋ ರೆಕಾರ್ಡಿಂಗ್‌ನಲ್ಲಿರುವ ಪಟೋಲೆ ಅವರ ಧ್ವನಿಯನ್ನು ನವೆಂಬರ್ 19,2024 ರಂದು ಯುಟ್ಯೂಬ್ ಚಾನೆಲ್ ಜಿಸ್ಟ್‌ನ್ಯೂಸ್‌ನಲ್ಲಿ ಪ್ರಕಟಿಸಿದ ಪಟೋಲೆ ಅವರ ಸಂದರ್ಶನದ ಧ್ವನಿಯೊಂದಿಗೆ ಹೋಲಿಕೆ ಮಾಡಿದ್ದೇವೆ. ಈ ವೇಳೆ ಎರಡು ಧ್ವನಿಗಳು ಹೋಲಿಕೆಯಾಗಿಲ್ಲ ಎಂದು ಬ್ಲೂಮ್ ತಿಳಿಸಿದೆ. ಜಿಸ್ಟ್‌ನ್ಯೂಸ್‌ ಜೊತೆಗಿನ ನಾನಾ ಪಟೋಲೆ ಅವರ ಸಂದರ್ಶನದ ವಿಡಿಯೋ ಇಲ್ಲಿದೆ.

ಆಡಿಯೋ-4 ಐಪಿಎಸ್‌ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆ

ಇದು ಪುಣೆಯ ಮಾಜಿ ಪೊಲೀಸ್ ಆಯುಕ್ತ ಹಾಗೂ ಐಪಿಎಸ್ ಅಧಿಕಾರಿ ಅಮಿತಾಬ್ ಗುಪ್ತಾ ಮತ್ತು ಗೌರವ್ ಮೆಹ್ತಾ ನಡುವಿನ ಸಂಭಾಷಣೆಯ ಆಡಿಯೋ ಎನ್ನಲಾಗಿದೆ. ಇದರಲ್ಲಿ ನಾನಾ ಪಟೋಲೆ ಮತ್ತು ಸುಪ್ರಿಯಾ ಸುಳೆ ಹೇಳಿದಂತೆ ಬಿಟ್‌ ಕಾಯಿನ್ ಅನ್ನು ನಗದಾಗಿ ಪರಿವರ್ತಿಸುವ ಕುರಿತು ಇದೆ.

ಯೂಟ್ಯೂಬ್‌ನಲ್ಲಿ ಐಪಿಎಸ್ ಗುಪ್ತಾ ಅವರ ಹಲವಾರು ಸಂದರ್ಶನಗಳನ್ನು ನಾವು ಗಮನಿಸಿದ್ದೇವೆ. ಅವುಗಳಲ್ಲಿ ಯಾವುದೇ ಸಂದರ್ಶನದ ಧ್ವನಿ ಬಿಜೆಪಿ ಪೋಸ್ಟ್ ಮಾಡಿರುವ ಆಡಿಯೋ ರೆಕಾರ್ಡಿಂಗ್‌ಗೆ ಹೋಲಿಕೆಯಾಗಿಲ್ಲ ಎಂದು ಬೂಮ್ ತಿಳಿಸಿದೆ. ಮಾರ್ಚ್ 15, 2024 ರ ಸಂದರ್ಶನದಲ್ಲಿ ಗುಪ್ತಾ ಅವರು ಮಾತನಾಡಿರುವ ಮೂಲ ಧ್ವನಿಯನ್ನು ಇಲ್ಲಿ ಕೇಳಬಹುದು

ಬಿಜೆಪಿ ಹಂಚಿಕೊಂಡಿರುವ ಆಡಿಯೋ ಎಐ ಸೃಷ್ಟಿತ ಎಂಬುವುದಕ್ಕೆ ಪುರಾವೆಗಳು ದೊರೆತಿದೆ ಎಂದು TrueMedia AI ದೃಢಪಡಿಸಿದೆ ಎಂದು ಬೂಮ್ ಹೇಳಿದೆ. ಫಲಿತಾಂಶ ಇಲ್ಲಿ ನೋಡಬಹುದು.

ಇವಿಷ್ಟೆ ಅಲ್ಲದೆ ಇನ್ನೂ ಕೆಲ ಎಐ ಪತ್ತೆ ಸಾಧನಗಳ ಮೂಲಕ ಬೂಮ್ ಸಂಸ್ಥೆ ಬಿಜೆಪಿ ಹಂಚಿಕೊಂಡಿರುವ ಆಡಿಯೋ ನಕಲಿ ಎಂದು ಹೇಳಿದೆ.

ಇದನ್ನೂ ಓದಿ | FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...