Homeಮುಖಪುಟಅದಾನಿ ವಿರುದ್ಧ ಅಮೆರಿಕಾ ದೋಷಾರೋಪ | ತಕ್ಷಣವೇ ಬಂಧಿಸಿ ಎಂದ ರಾಹುಲ್ ಗಾಂಧಿ

ಅದಾನಿ ವಿರುದ್ಧ ಅಮೆರಿಕಾ ದೋಷಾರೋಪ | ತಕ್ಷಣವೇ ಬಂಧಿಸಿ ಎಂದ ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಅದಾನಿ ವಿರುದ್ಧ ಅಮೆರಿಕಾದಲ್ಲಿ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ”ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ತಕ್ಷಣವೇ ಬಂಧಿಸಬೇಕು” ಎಂದು ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ ಲಂಚ ನೀಡಿದ ಆರೋಪದ ಮೇಲೆ ಅಮೆರಿಕಾದ ಪ್ರಾಸಿಕ್ಯೂಟರ್‌ಗಳು ಅದಾನಿ ಮತ್ತು ಸಹಚರರ ಮೇಲೆ ಆರೋಪ ಹೊರಿಸಿದ ನಂತರ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

“ಉದ್ಯಮಿ ಅದಾನಿ ಭಾರತೀಯ ಮತ್ತು ಅಮೇರಿಕನ್ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಈಗ ಅಮೆರಿಕಾದಲ್ಲಿ ಸ್ಪಷ್ಟವಾಗಿದೆ ಮತ್ತು ದೃಢಪಟ್ಟಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ ತೋ ಸೇಫ್ ಹೇ’ ಘೋಷಣೆಗೆ ವ್ಯಂಗ್ಯವಾಡಿದ ಅವರು, ಪ್ರಧಾನಿ ಮತ್ತು ಅದಾನಿ ಒಟ್ಟಿಗೆ ಇರುವವರೆಗೂ ಅವರು ಭಾರತದಲ್ಲಿ ಸುರಕ್ಷಿತವಾಗಿರುತ್ತಾರೆ ಎಂದು ಹೇಳಿದ್ದಾರೆ. ತಮ್ಮ ಮೇಲಿನ ಆರೋಪದ ಬಗ್ಗೆ ಅದಾನಿ ಸಮೂಹ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾನಿಯನ್ನು ತಕ್ಷಣವೇ ಬಂಧಿಸಿ ವಿಚಾರಣೆಗೊಳಪಡಿಸಬೇಕು ಮತ್ತು ಅವರ ‘ರಕ್ಷಕ’ರಾದ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರನ್ನು ಸ್ಥಾನದಿಂದ ಕಿತ್ತುಹಾಕಿ, ಅವರನ್ನೂ ತನಿಖೆಗೆ ಒಳಪಡಿಸಬೇಕು” ಎಂದು ಅವರು ಹೇಳಿದ್ದಾರೆ. ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕೂಡಾ ಪ್ರತಿಪಕ್ಷಗಳು ಬೇಡಿಕೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. “ಮೋದಿ ಸರಕಾರವು ಅದಾನಿಯನ್ನು ರಕ್ಷಿಸುತ್ತಿದೆ. ಆದ್ದರಿಂದ ಭಾರತದಲ್ಲಿ ಅದಾನಿಯನ್ನು ಬಂಧಿಸುವುದಿಲ್ಲ ಅಥವಾ ತನಿಖೆ ಮಾಡುವುದಿಲ್ಲ ಎಂದು ನನಗೆ ಖಾತರಿಯಿದೆ” ಎಂದು ಗಾಂಧಿ ಆರೋಪಿಸಿದ್ದಾರೆ.

ಏನಿದು ಅದಾನಿಯ ಹೊಸ ವಂಚನೆ?

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಗುರುವಾರ ವರದಿಯಾಗಿದೆ. ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ. ಅದಾನಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಭಾರತೀಯ ಕಾಲಮಾನದ ಪ್ರಕಾರ ಇಂದು (ನ.21) ಬೆಳಿಗ್ಗೆ ವರದಿ ಹೊರಬಿದ್ದಿದೆ. ಅದಾನಿ ಗ್ರೂಪ್ ತಮ್ಮ ಮೇಲಿನ ಆರೋಪದ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ಪ್ರತಿಕ್ರಿಯಿಸಿಲ್ಲ. ಆರೋಪಿಗಳ ಪರ ವಕೀಲರನ್ನು ತಕ್ಷಣ ಗುರುತಿಸಲು ಸಾಧ್ಯವಾಗಿಲ್ಲ ಎಂದು business-standard.com ವರದಿ ಮಾಡಿದೆ.

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...