Homeಕರ್ನಾಟಕಆಸ್ಪತ್ರೆಗಳ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಆಸ್ಪತ್ರೆಗಳ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ, ಅದಕ್ಕೂ ಗ್ಯಾರಂಟಿ ಯೋಜನೆಗಳಿಗೆ ತಳುಕು ಹಾಕುವುದರಲ್ಲಿ ಯಾವುದೆ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಆ ಹಣವನ್ನು ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು ಗುಂಡೂರಾವ್, “ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ. ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ಎಆರ್‌ಎಸ್‌ ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ” ಎಂದು ಅವರು ಹೇಳಿದ್ದಾರೆ. ಆಸ್ಪತ್ರೆಗಳ ಸೇವಾ ಶುಲ್ಕ

“ಆಸ್ಪತ್ರೆಯ ಎಆರ್‌ಎಸ್‌ ಫಂಡ್‌ ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ” ಎಂದು ಗುಂಡೂರಾವ್ ಹೇಳಿದ್ದಾರೆ.

“ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯ ವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. 15% ದಿಂದ 20% ದಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ” ಎಂದು ಅವರು ತಿಳಿಸಿದ್ದಾರೆ.

“ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುತ್ತೇವೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...