Homeಕರ್ನಾಟಕಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ

ಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ

- Advertisement -
- Advertisement -

ಕೇಂದ್ರ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ಪತ್ತೆ ಹಚ್ಚಿ, ಪರಿಷ್ಕರಿಸಲು ಮಾನದಂಡಗಳ ಪ್ರಕಾರ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್‌ ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಬಿಪಿಎಲ್‌ ಕಾರ್ಡ್ ರದ್ದತಿ ಗೊಂದಲದ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು (ನ.21) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು, “ಯಾವುದೇ ಅರ್ಹ ಬಿಪಿಎಲ್ ಅಥವಾ ಎಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ. ಮಾನದಂಡಗಳ ಅನ್ವಯ ಪರಿಷ್ಕರಣೆ ಮಾಡಿದ್ದೇವೆ. ಅನರ್ಹ ಕಾರ್ಡ್‌ಗಳನ್ನು ಪತ್ತೆ ಹಚ್ಚಲು ಕ್ರಮವಹಿಸಲಾಗಿದೆ. ಬಿಪಿಎಲ್‌ಗೆ ಅರ್ಹರಲ್ಲದವರನ್ನು ಎಪಿಎಲ್‌ಗೆ ಸೇರಿಸಲಾಗಿದೆ” ಎಂದಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್‌ ಪಡಿತರ ಕಾರ್ಡ್‌ಗಳ ವಿತರಣೆ ಪ್ರಮಾಣ 2011ರ ಜನಸಂಖ್ಯೆ ಅನ್ವಯ ನಗರ ಮತ್ತು ಗ್ರಾಮೀಣ ಸೇರಿ ಶೇಖಡ 66ರಷ್ಟಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯ ಸರ್ಕಾರ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಹಚ್ಚಲು ಕ್ರಮವಹಿಸಿದೆ. ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸದಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ನೀಡಿರುವ ಮಾಹಿತಿ ಅನುಸರಿಸಿ, ಬಿಎಪಿಎಲ್‌ಗೆ ಅರ್ಹರಲ್ಲದವರನ್ನು ಅನರ್ಹ ಎಂದು ಪರಿಗಣಿಸಿ ಎಪಿಎಲ್‌ಗೆ ಸೇರಿಸಲಾಗಿದೆ. ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಿ ಬಿಪಿಎಲ್‌ಗೆ ಅನರ್ಹರೆಂದು ಕಂಡು ಬಂದವರನ್ನು ಎಪಿಎಲ್‌ಗೆ ಸೇರಿಸಲಾಗಿದೆ. ಬಿಪಿಎಲ್‌ಗೆ ಅರ್ಹರಿದ್ದೂ, ಅನರ್ಹಗೊಂಡಿದ್ದರೆ, ಅಂತವರ ಬಿಪಿಎಲ್‌ ಕಾರ್ಡ್ ಪುನಃ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರದ್ದು ಸೇರಿ 1,2,509 ಬಿಪಿಎಲ್ ಪಡಿತರ ಕಾರ್ಡ್‌ಗಳಿವೆ. ಈ ಪೈಕಿ ಆದಾಯ ತೆರಿಗೆ ಪಾವತಿದಾರರದ್ದು 98,473 ಇದ್ದು, ಸರ್ಕಾರಿ ನೌಕರರದ್ದು 4,036 ಇದೆ. ಇವುಗಳು ಅನರ್ಹ ಎಂದು ಪರಿಗಣಿಸಲಾಗುತ್ತದೆ. ಈಗಾಗಲೇ 59,370 ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತನೆ ಮಾಡಲಾಗಿದೆ. ಅರ್ಹ ಎಂದು ಕಂಡು ಬಂದಿರುವ 16,806 ಕಾರ್ಡ್‌ಗಳನ್ನು ಬಿಪಿಎಲ್‌ನಲ್ಲೇ ಉಳಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ, ಅಮಾನತುಗೊಂಡಿರುವುದು 8,647 ಕಾರ್ಡ್‌ಗಳು ಮಾತ್ರ ಎಂದು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ವೇಳೆ ಉಂಟಾಗಿರುವ ಗೊಂದಲಗಳ ಹೊಣೆಯನ್ನು ನಾನೇ ಸಂಪೂರ್ಣವಾಗಿ ಹೊತ್ತುಕೊಳ್ಳುತ್ತೇನೆ. ಇನ್ನು ಒಂದು ವಾರದಲ್ಲಿ ಸಮಸ್ಯೆ ಸರಿಪಡಿಸಲಾಗುವುದು. ಸದ್ಯಕ್ಕೆ ಯಥಾಸ್ಥಿತಿ ಕಾಪಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...