Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...