1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು
1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.
ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು
संभल में स्थित शाही जामा मस्जिद को लेकर सोमवार को जिला कोर्ट में एक याचिका दायर की गई जिसमें दावा किया गया कि यह मस्जिद मूल रूप से हरि हर मंदिर थाbकोर्ट ने इसे स्वीकार करते हुए सर्वेक्षण का आदेश जारी किया आदेश मिलते ही सर्वे टीम ने पुलिस सुरक्षा में मस्जिद के भीतर सर्वे शुरू किया pic.twitter.com/Cc43yj9s1R
— Raghavendra nath Mishra (@RaghavendraITV) November 19, 2024
ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.
“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ
ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.
ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.
“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.
1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.
ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್
ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್


