Homeಮುಖಪುಟಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

ಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

- Advertisement -
- Advertisement -

ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದಾರೆ. ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ. ಮಣಿಪುರ

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಮುಖ್ಯಮಂತ್ರಿ ಬಿರೇನ್ ನೇತೃತ್ವದ ಎನ್‌ಡಿಎ ಶಾಸಕರ ಈ ನಿರ್ಣಯವನ್ನು ಕುಕಿ-ಹ್ಮಾರ್-ಝೋಮಿ ಸಮುದಾಯದ 10 ಶಾಸಕರು ವಿರೋಧಿಸಿದ್ದು, “ಏಕಪಕ್ಷೀಯವಾಗಿ ರಾಜ್ಯ ಸರ್ಕಾರವು ತಮಗೆ ಅನುಕೂಲಕರವಾಗಿ ಒಂದು ಬುಡಕಟ್ಟು ಸಮುದಾಯದ ಹಕ್ಕುಗಳನ್ನು ನಿಗ್ರಹಿಸುವ ಮತ್ತು ಮೊಟಕುಗೊಳಿಸುವಲ್ಲಿ ಜಿರಿಬಾಮ್ ಘಟನೆಯ ಅನಗತ್ಯ ಲಾಭವನ್ನು ಪಡೆಯುತ್ತಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಬೆದರಿಸುವ ಮಟ್ಟಕ್ಕೂ ಧೈರ್ಯಶಾಲಿಯಾಗಿ ವರ್ತಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ಮೂರು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸುವಂತೆ ಎನ್‌ಡಿಎ ಶಾಸಕರ ನಿರ್ಣಯವನ್ನು ಉಲ್ಲೇಖಿಸಿರುವ ಕುಕಿ-ಹ್ಮಾರ್-ಝೋಮಿ ಶಾಸಕರು, 2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೋ-ಹ್ಮಾರ್‌ಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ನಡೆದ ಎಲ್ಲಾ ನಾಗರಿಕ ಹತ್ಯೆಗಳ ಪ್ರಕರಣಗಳನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ.

2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೊ-ಹ್ಮಾರ್‌ ಸಮುದಾಯಗಳ ನಡುವೆ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಕನಿಷ್ಠ 255 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ನವೆಂಬರ್ 14 ರಂದು, ಜನಾಂಗೀಯ ಹಿಂಸಾಚಾರದ ಉಲ್ಬಣದ ನಂತರ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ AFSPA ಕಾಯಿದೆಯನ್ನು ಜಾರಿ ಮಾಡಲಾಗಿದೆ. ಮಾಡಲಾಗಿದೆ. ಮಾಡಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...